ಶೀಘ್ರ ಡಯಾಲಿಸಿಸ್‌ ಚಿಕಿತ್ಸೆಗೆ ಎರಡು ಶಿಫ್ಟ್: ಪೂಂಜ


Team Udayavani, Nov 8, 2018, 3:18 PM IST

8-november-15.gif

ಬೆಳ್ತಂಗಡಿ : ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದು, ಡಯಾಲಿಸಿಸ್‌ ಚಿಕಿತ್ಸೆ ಅಗತ್ಯವಿರುವ ಎಲ್ಲ ರೋಗಿಗಳಿಗೆ ಅದನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹಾಲಿ ಲಭ್ಯವಿರುವ ಒಂದು ಶಿಫ್ಟ್‌ನ ಜತೆಗೆ ಹೆಚ್ಚುವರಿಯಾಗಿ ಎರಡು ಶಿಫ್ಟ್‌ ಆರಂಭಿಸುವ ಕುರಿತು ಮಾತುಕತೆ ನಡೆಯುತ್ತಿದ್ದು, ತಿಂಗಳೊಳಗೆ ಅದನ್ನು ಪ್ರಾರಂಭಿಸಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಹೇಳಿದರು.

ಅವರು ಬುಧವಾರ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಸ್ಥಳಾಂತರಿತ ಡಯಾಲಿಸಿಸ್‌ ಘಟಕ, 4ನೇ ಡಯಾಲಿಸಿಸ್‌ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಹಗಲಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿದ್ದು, ರಾತ್ರಿ ಶಿಫ್ಟ್‌ನ ಬೇಡಿಕೆ ಇದೆ. ಹೀಗಾಗಿ ರಾತ್ರಿ 7ರಿಂದ 12 ಹಾಗೂ ಮುಂಜಾನೆ 4ರಿಂದ 7ರ ವರೆಗೆ ಹೊಸದಾಗಿ ಶಿಫ್ಟ್‌ಗಳು ಆರಂಭಗೊಳ್ಳಲಿವೆ. ಈ ಕುರಿತು ಘಟಕವನ್ನು ನಿರ್ವಹಣೆ ಮಾಡುತ್ತಿರುವ ಕಂಪೆನಿಯೂ ಒಪ್ಪಿಗೆ ನೀಡಿದೆ. ಜತೆಗೆ ಘಟಕಕ್ಕೆ ಮೂತ್ರಾಂಗ ರೋಗ ಶಾಸ್ತ್ರಜ್ಞ ವೈದ್ಯರ ಬೇಡಿಕೆಯೂ ಇದ್ದು, 15 ದಿನಕ್ಕೊಮ್ಮೆ ಆಸ್ಪತ್ರೆಗೆ ಬರುವ ಕುರಿತು ವ್ಯವಸ್ಥೆ ಮಾಡಲಾಗುವುದು. ವೈದ್ಯರು ಯಾವಾಗ ಲಭ್ಯ ಇರುತ್ತಾರೆ ಎಂಬುದನ್ನೂ ಆಸ್ಪತ್ರೆಯ ನೋಟಿಸ್‌ ಬೋರ್ಡ್‌ನಲ್ಲಿ ಹಾಕಲಾಗುತ್ತದೆ. ಮುಂದೆ ಆಸ್ಪತ್ರೆಯ ಸಿಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿಯೂ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಶರತ್‌ ಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಪ್ರಭಾರ ಆಡಳಿತ ವೈದ್ಯಾಧಿಕಾರಿ ಡಾ| ಶಶಿಕಾಂತ್‌ ಡೋಂಗ್ರೆ, ಎಸ್‌ಕೆಜಿ ಸಂಜೀವಿನಿಯ ಆಡಳಿತಾಧಿಕಾರಿ ಬಸುದೇವ್‌ ದಾಸ್‌, ಸಂಚಾಲಕ ಕೃಷ್ಣಾನು, ಅರಿವಳಿಕೆ ತಜ್ಞ ಡಾ| ಶಶಾಂಕ್‌ ಕಾಂಬ್ಳೆ, ದಂತ ವೈದ್ಯೆ ಡಾ| ಅಜ್ಮಿಯಾ, ಡಾ| ಯೋಗೀಶ್‌, ಸಹಾಯಕ ಆಡಳಿತಾಧಿಕಾರಿ ಶ್ರೀಕಾಂತ್‌ ಹೆಗ್ಡೆ, ಶುಶ್ರೂಶಕ ಅಧೀಕ್ಷಕಿ ಸುಭಾಶಿನಿ, ಚಂದ್ರಶೇಖರ್‌, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಜಯಶ್ರೀ ಪ್ರಕಾಶ್‌, ತುಕಾರಾಮ ಬೆಳ್ತಂಗಡಿ, ಸಂತೋಷ್‌ ಶೆಟ್ಟಿ ಲಾೖಲ, ಸದಾನಂದ ಪೂಜಾರಿ ಉಂಗಿಲಬೈಲು, ಬಾಲಕೃಷ್ಣ ಶೆಟ್ಟಿ ಸವಣಾಲು, ಮೊಹಮ್ಮದ್‌ ಕುಂಞಿ ಮೊದಲಾದವರಿದ್ದರು.

ಆಟೋಮ್ಯಾಟಿಕ್‌ ಜನರೇಟರ್‌
ಆಸ್ಪತ್ರೆಯಲ್ಲಿ ಹಾಲಿ ಜನರೇಟರ್‌ ವ್ಯವಸ್ಥೆ ಇದ್ದರೂ ವಿದ್ಯುತ್‌ ಕಡಿತ ತತ್‌ಕ್ಷಣ ಜನರೇಟರ್‌ ಆಟೋಮ್ಯಾಟಿಕ್‌ ಆನ್‌ ಆಗುವ ವ್ಯವಸ್ಥೆ ಇಲ್ಲ. ಇದರಿಂದ ಡಯಾಲಿಸಿಸ್‌ ರೋಗಿಗಳಿಗೆ ತೊಂದರೆಯಾಗುತ್ತದೆ ಎಂದು ಶಾಸಕರ ಗಮನಕ್ಕೆ ತಂದಾಗ, ಎಂಜಿನಿಯರ್‌ ಅವರನ್ನು ಕರೆಸಿ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಶಾಸಕ ಹರೀಶ್‌ ಪೂಂಜ ತಿಳಿಸಿದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.