ಜತೆಗೂಡಿ ಆಚರಿಸುವುದೇ ನಿಜವಾದ ಹಬ್ಬ 


Team Udayavani, Nov 8, 2018, 3:40 PM IST

8-november-16.gif

ನೆಹರೂನಗರ: ಎಲ್ಲರ ಜತೆಗೂಡಿ ಹಬ್ಬ ಅಚರಿಸುವುದು ನಮ್ಮ ದೇಶದ ಸಂಸ್ಕೃತಿ. ದೀಪಾವಳಿ ಕೇವಲ ಒಂದು ಮನೆಗೆ ಸೀಮಿತವಲ್ಲ, ಸಮಾಜದ ಪ್ರತಿಯೊಬ್ಬರೂ ಸೇರಿ ಸಂಭ್ರಮದಿಂದ ಆಚರಿಸಬೇಕು. ಕತ್ತಲಿನಿಂದ ಬೆಳಕಿನೆಡೆಗೆ ಸಾಗಿ ಮನಸ್ಸಿಗೆ ನೆಮ್ಮದಿಯನ್ನು ನೀಡುವುದರ ಮೂಲಕ ಅಂಧಕಾರವನ್ನು ಹೋಗಲಾಡಿಸುವ ಹಬ್ಬವೇ ದೀಪಾವಳಿ ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಅವರು ಹೇಳಿದರು.

ವಿವೇಕಾನಂದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದಲ್ಲಿ ಎಂಕಾಂ ವಿಭಾಗದ ನೇತೃತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಬ್ಬಗಳ ಮಹತ್ವ ಅರಿಯಿರಿ
ದೀಪಾವಳಿ ದೀಪಗಳ ಹಬ್ಬ. ಪರಸ್ಪರ ಮಾನವ ಸಂಬಂಧ, ಪ್ರೀತಿ, ವಿಶ್ವಾಸವನ್ನು ಬೆಳೆಸಿ ಒಗ್ಗಟ್ಟಿನಿಂದ ಬಾಳುವುದೇ ಹಬ್ಬಗಳ ಪ್ರಮುಖ ಉದ್ದೇಶ. ಆದರೆ ಇಂದು ಆಚರಣೆ ಎನ್ನುವುದು ಒಂದು ಮನೆಗೆ ಸೀಮಿತವಾಗಿದೆ. ಹಬ್ಬ ಅಂದರೆ ಮಳಿಗೆಗಳಲ್ಲಿ ಬಟ್ಟೆಗಳನ್ನು ರಿಯಾಯಿತಿ ದರದಲ್ಲಿ ಪಡೆಯಲು ಇರಲು ಒಂದು ವಿಧಾನವಾಗಿ ಮಾರ್ಪಟ್ಟಿದೆ. ಹಾಗಾಗಿ ಇಂದು ಹಬ್ಬಗಳ ಮಹತ್ವದ ಬಗ್ಗೆ ಜನರಲ್ಲಿ ಅರಿವು ಕ್ಷೀಣಿಸುತ್ತಿದೆ. ಇದು ಬದಲಾಗ ಬೇಕಿದೆ ಎಂದವರು ಹೇಳಿದರು. 

ಎಂಕಾಂ ವಿಭಾಗದ ವಿದ್ಯಾರ್ಥಿಗಳಾದ ಶ್ವೇತಾ ಮತ್ತು ರವಿ ಅವರು ದೀಪಾವಳಿಯ ಕುರಿತು ಅಭಿಪ್ರಾಯ ಹಂಚಿಕೊಂಡರು. ವಿದ್ಯಾರ್ಥಿ ಅಶೋಕ್‌ ಭಾವಗೀತೆ ಹಾಡಿದರು. ಎಂಸಿಜೆ, ಎಂಕಾಂ, ಎಂಎಸ್ಸಿ ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಶ್ಮಿ ಪ್ರಾರ್ಥಿಸಿ, ಶ್ರೀಲಕ್ಷ್ಮೀ ಸ್ವಾಗತಿಸಿದರು. ಅನಿತಾ ವಂದಿಸಿ, ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಬದುಕು ಕಟ್ಟಿಕೊಡುತ್ತದೆ 
ಸ್ನಾತಕೋತ್ತರ ವಿಭಾಗಗಳ ಸಂಯೋಜಕಿ ಡಾ| ವಿಜಯಾ ಸರಸ್ವತಿ ಮಾತನಾಡಿ, ದೀಪಾವಳಿ ಜ್ಞಾನದ ಸಂಕೇತ. ಎಲ್ಲರೂ ಒಟ್ಟು ಸೇರಿ ಹಬ್ಬಗಳನ್ನು ಆಚರಿಸಿದಾಗ ಅದರಲ್ಲಿ ಸಿಗುವ ಖುಷಿಯ ಅನುಭವ ಹೆಚ್ಚು. ದೀಪಗಳ ಹಬ್ಬ ಮುಚ್ಚಿದ ಮನಸ್ಸನ್ನು ತೆರೆದು ಪ್ರೀತಿಯನ್ನು ತುಂಬುವುದರ ಮೂಲಕ ಜೀವನಕ್ಕೆ ಮಾದರಿ ಆಗುತ್ತದೆ. ವಿದ್ಯಾರ್ಥಿ ಜೀವನ ಎನ್ನುವುದು ಕೇವಲ ಪುಸ್ತಕಕ್ಕೆ ಸೀಮಿತವಾಗದೇ ಜೀವನ ಮೌಲ್ಯಗಳನ್ನು ಅರಿತುಕೊಳ್ಳುವಂತೆ ಆಗಬೇಕು. ಸಾಧನೆಗೆ ಪೂರಕವಾದ ವಿಷಯಗಳು ಬದುಕನ್ನು ಕಟ್ಟಿಕೊಡುತ್ತವೆ ಎಂದರು. 

ಭಾವನೆ ಕುಂಠಿತವಾಗುತ್ತಿದೆ
ಹಿಂದೆ ಕಾಗದದ ಮೂಲಕ ಶುಭಾಶಯವನ್ನು ತಿಳಿಸುತ್ತಿದ್ದರು. ಆದರೆ ಇಂದು ಮೊಬೈಲ್‌ ಫೋನ್‌ನಿಂದ ಶುಭಾಶಯದ ಸಂದೇಶವನ್ನು ವಿನಿಮಯ ಮಾಡಿಕೊಳ್ಳುತ್ತಿದ್ದೇವೆ. ಯಾಂತ್ರಿಕ ವಿಚಾರಗಳಿಂದಾಗಿ ಜನರ ನಡುವಿನ ಮನೋಭಾವನೆಗಳು ಕುಂಠಿತವಾಗುತ್ತಿದೆ. ಹಬ್ಬಗಳ ಉದ್ದೇಶಗಳನ್ನು ಅರಿತು ಆಚರಿಸಿದಾಗ ಪ್ರತಿಯೊಂದು ಹಬ್ಬಕ್ಕೂ ಪರಿಪೂರ್ಣ ಅರ್ಥ ದೊರಕುತ್ತದೆ ಎಂದು ಡಾ| ಪೀಟರ್‌ ವಿಲ್ಸನ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.