10ರಂದು ಟಿಪ್ಪು ಜಯಂತಿ ಆಚರಣೆ: ಜಿಲ್ಲಾಧಿಕಾರಿ


Team Udayavani, Nov 8, 2018, 5:15 PM IST

8-november-21.gif

ಬಾಗಲಕೋಟೆ: ಟಿಪ್ಪು ಜಯಂತಿಯನ್ನು ನ. 10ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಟಿಪ್ಪು ಜಯಂತಿ ಆಚರಣೆ ಕುರಿತು ಜರುಗಿದ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾನ್‌ ವ್ಯಕ್ತಿಗಳು, ಸಂತರು, ಶರಣರು, ಸೂಫಿಗಳು ಯಾವುದೇ ಜಾತಿ ಮತಕ್ಕೆ ಸೀಮಿತರಲ್ಲ. ಅವರು ನಾಡಿಗೆ ನೀಡಿದ ಕೊಡುಗೆ, ಸಾಧನೆ ಅವುಗಳನ್ನು ಮುಂದಿನ ಪೀಳಿಗೆ ಅನುಕರಿಸಲಿ ಎಂಬ ಉದ್ದೇಶದಿಂದ ಸರಕಾರ ಇಂತಹ ಮಹಾನ್‌ ವ್ಯಕ್ತಿಗಳ ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ ಎಂದರು.

ಜಿಲ್ಲಾಡಳಿತದ ವತಿಯಿಂದ ಆಡಿಟೋರಿಯಂ ಹಾಲ್‌ನಲ್ಲಿ ಟಿಪ್ಪು ಜಯಂತಿಯನ್ನು ಸಂಭ್ರಮದಿಂದ ನಡೆಸಲಾಗುವುದು. ನ್ಯಾಯಾಲಯದ ಆದೇಶದಂತೆ ಮೆರವಣಿಗೆ, ರ್ಯಾಲಿ ಮುಂತಾದವುಗಳನ್ನು ನಿಷೇಧಿಸಿರುವುದರಿಂದ ಅಂತವುಗಳಿಗೆ ಅವಕಾಶ ನೀಡದೇ ಅರ್ಥಪೂರ್ಣ ಜಯಂತಿಗೆ ಅವಶ್ಯವಿರುವ ಸಲಹೆ, ಸೂಚನೆಗಳನ್ನು ನೀಡಬೇಕು ಎಂದರು. ಸಮಾಜದ ಮುಖಂಡರಾದ ಎ.ಎ.ದಾಂಡಿಯಾ, ಕುತುಬುದ್ದಿನ ಖಾಜಿ, ಎಂ.ಎಂ.ನಬಿವಾಲೆ ಮಾತನಾಡಿ, ಟಿಪ್ಪು ಜಯಂತಿ ಆಚರಣೆಯಲ್ಲಿ ಟಿಪ್ಪು ಕುರಿತಾದ ಸಮಗ್ರ ಅಧ್ಯಯನ ಮಾಡಿದ ಉಪನ್ಯಾಸಕರನ್ನು ಕರೆಸಬೇಕು.

ಪ್ರತಿ ಭಾರಿ ಅಂಬೇಡ್ಕರ ಭವನದಲ್ಲಿ ಆಚರಿಸಲಾಗುತ್ತಿದ್ದು, ಅದರ ಬದಲಾಗಿ ಕಲಾ ಭವನದಲ್ಲಿ ಕಾರ್ಯಕ್ರಮ ಆಯೋಜಿಸಬೇಕೆಂದು ಮನವಿ ಮಾಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ ಮಾತನಾಡಿ, ಕಳೆದ ಬಾರಿ ಅರ್ಥಪೂರ್ಣವಾಗಿ ಟಿಪ್ಪು ಜಯಂತಿ ಆಚರಿಸಲಾಗಿತ್ತು. ವೇದಿಕೆ ಮೇಲೆ ಟಿಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ ಸಮಾಜದ ಮುಖಂಡರಿಗೆ ಅವಕಾಶ ಮಾಡಿಕೊಡಲಾಗುವುದು. ಆದರೆ ಮೆರವಣಿಗೆ, ಜಾಥಾ ರದ್ದುಗೊಳಿಸಲಾಗಿದ್ದು, ಸಮಾಜದ ಬಾಂಧವರು ಸಹಕರಿಸಬೇಕು. ಇದು ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೂ ಅನ್ವಯಿಸುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಮಾತನಾಡಿ, ಟಿಪ್ಪು ಜಯಂತಿ ಅಚ್ಚುಕಟ್ಟಾಗಿ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು. ಸಮಾಜದ ಮುಖಂಡರಾದ ಡಾ| ವೈ.ಎಸ್‌. ಪಠಾಣ, ಆರ್‌.ಡಿ. ಬಾಬು, ಸಲಿಂ ಮೊಮಿನ್‌, ಅಮರ ಪುಣೆಕರ, ಡಿವೈಎಸ್‌ಪಿ ಗಿರೀಶ, ಸಿಪಿಐ ಶ್ರೀಶೈಲ ಗಾಬಿ, ಪಿಎಸ್‌ಐ ಸಂತೋಷ ಹಳ್ಳೂರ, ಶಿವಾನಂದ ಮುಖರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.