ಒಲೆ ಬದಲಾದರೂ ಉರಿ ಬದಲಾಗದು! 


Team Udayavani, Nov 9, 2018, 6:00 AM IST

21.jpg

ಡಾಕ್ಟರ್‌ ಆಗಬೇಕೆಂಬುದು ನನ್ನ ಕನಸಾಗಿತ್ತು. ಅದಕ್ಕಾಗಿ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಂಡಿದ್ದೆ. ಪ್ರಥಮ ಶ್ರೇಣಿಯಲ್ಲಿ ಪಾಸಾದರೂ ಪಿಯುಸಿ ಮುಗಿದ ತಕ್ಷಣ ತಂದೆ ನನಗೆ ಮದುವೆ ಮಾಡಿಸಿದರು. ಆ ಸಮಯದಲ್ಲಿ ಮುಂದೆ ಓದಲಾಗುತ್ತಿಲ್ಲ ಎಂಬ ಕಾರಣದಿಂದ ಅತ್ತದ್ದಕ್ಕೆ ನನ್ನ ಅಜ್ಜಿ ನನಗೆ ಹೀಗೆ ಹೇಳಿ ಸಮಾಧಾನ ಪಡಿಸಿದ್ದರು- “”ಹೆಣ್ಣು ಎಷ್ಟು ಕಲಿತರೇನು? ಒಲೆಯಿಂದ ಬೂದಿ ತೆಗೆಯುವ ಕೆಲಸ ಮಾತ್ರ ತಪ್ಪುವುದಿಲ್ಲ”. ಅವರ ಪ್ರಕಾರ ಹೆಣ್ಣು ಎಷ್ಟೇ ಕಲಿತರೂ ಕೊನೆಗೂ ಮಾಡಬೇಕಾದದ್ದು ಅಡುಗೆ ಕೆಲಸ. ಇದರಿಂದ ಅವಳಿಗೆ ಬಿಡುಗಡೆ ಇಲ್ಲ. ಅಜ್ಜಿಯ ಹಳೆಕಾಲದ ಈ ಮಾತು ನಾಲ್ಕು ಗೋಡೆಯ ಬಂಧನದಿಂದ ಹೊರಗೆ ಬಂದ ಇಂದಿನ ಆಧುನಿಕ ಮಹಿಳೆಯರಿಗೂ ಅನ್ವಯಿಸುತ್ತದೆ.

    ಮೊನ್ನೆ ಉನ್ನತ ಹುದ್ದೆಯಲ್ಲಿರುವ ನನ್ನ ಗೆಳತಿ ಒಬ್ಬಳು ಹೇಳಿದಳು, “”ಈಚೆಗೆ ಕೆಲಸದ ನಿಮಿತ್ತ ನಾನು ನಾಲ್ಕೈದು ದಿನ ದೂರ ಹೋಗಬೇಕಾಯಿತು. ಅಷ್ಟೂ ದಿನಕ್ಕಿರುವ ಅಡುಗೆಯ ಬಹುಪಾಲು ಮಾಡಿ ಫ್ರಿಡ್ಜ್ನಲ್ಲಿ ಇರಿಸಿದೆ”.
“”ಅದನ್ನು ವಿವರಿಸು” ಎಂದೆ.
“”ಉಪ್ಪಿಟ್ಟು ಮಾಡಲು ಬೇಕಾದ ರವೆ ಹುರಿದು ಒಗ್ಗರಣೆ ಕೊಟ್ಟು ಇಟ್ಟೆ. ಆಗ ಗಂಡನಿಗೆ ಹೆಚ್ಚು ಕೆಲಸ ಇರುವುದಿಲ್ಲ ನೋಡು. ನೀರು ಕುದಿಸಿ ಅದಕ್ಕೆ ಸೇರಿಸಿದರೆ ಮುಗಿಯಿತು. ದೋಸೆ ಮಾಡಲು ಅಕ್ಕಿ ರುಬ್ಬಿ ಫ್ರಿಡಿjನಲ್ಲಿ ಇಟ್ಟಿದ್ದೆ. ತಿನ್ನಬೇಕಾದಾಗ ತೆಗೆದು ಕಾವಲಿಯಲ್ಲಿ ಹೊಯ್ದರಾಯಿತು. ಅವಲಕ್ಕಿ ಮಸಾಲೆಯನ್ನೂ ಮಾಡಿ ಇರಿಸಿದ್ದೆ. ಅವಲಕ್ಕಿ ಬೆರೆಸಿ ತಿಂದರಾಯಿತು. ಸಾಂಬಾರು, ಸಾರು ಮಾಡಿದ್ದೆ. ಬೇಕಾದಾಗ ತೆಗೆದು ಬಿಸಿ ಮಾಡಿ ಬಳಸುತ್ತಾರೆ…” ಹೇಳುತ್ತ ಹೋದಳು. 

ಇದು ಅವಳ ಒಬ್ಬಳ ಕತೆಯಲ್ಲ ಮನೆ ಮನೆ ಕತೆ. ಹೊರಗೆ ಹೋಗಬೇಕಾದರೆ ಹೆಚ್ಚಿನ ಎಲ್ಲ ಹೆಂಗಸರಿಗೂ ಈ ಜವಾಬ್ದಾರಿ ಹೆಗಲಿಗೇರಿರುತ್ತದೆ. ನನ್ನಂಥ ಜಮೀನ್ದಾರ ಮಹಿಳೆಯರಿಗೆ ಇನ್ನೂ ಕಷ್ಟ. ಅವಳಿಗೆ ಗಂಡ, ಮಕ್ಕಳಿಗೆ ಮಾತ್ರ ಅಲ್ಲ ತೋಟದ ಕೆಲಸಕ್ಕೆ ಬರುವ ಕಾರ್ಮಿಕರಿಗೂ ಅಡುಗೆ ಮಾಡಬೇಕಾದ ಪರಿಸ್ಥಿತಿ. ನಾನು ನಾಳೆ ಹೊರಗೆ ಹೋಗಲು ಇದೆಯೆಂದಾದರೆ ಇಂದೇ ರಾತ್ರಿ ಉಗಿಯಲ್ಲಿ ಬೇಯಿಸಿ ಮಾಡುವ ಪುಂಡಿ, ಕಡುಬು, ಪತ್ರೊಡೆಯಂತಹ ತಿಂಡಿಯನ್ನು ಮಾಡಿ ಇಡುತ್ತೇನೆ. ಯಾಕೆ ಹೀಗೆ? ಒಂದು ದಿನದ ಮಟ್ಟಿಗಾದರೂ ಅಡುಗೆ ಮನೆ ಹೊಣೆಯನ್ನು ಗಂಡಿಗೆ ಹೊತ್ತುಕೊಳ್ಳಲು ಆಗುವುದಿಲ್ಲವಾ? ಅದೂ ಅಲ್ಲದೆ ಹೊರಗೆ ದುಡಿಯುವ ಹೆಣ್ಣಿಗೆ ಸಾಮಾನ್ಯ ಗೃಹಿಣಿಯರಿಗಿಂತ ಹೆಚ್ಚು ಕೆಲಸ ಇರುತ್ತದೆ. ಗಂಡನಾದವನು, “ನೀನು ಏನೂ ಮಾಡಿ ಇಡಬೇಡ. ಒಂದೆರಡು ದಿನ ಅಲ್ವಾ , ನಾನೇ ಮಾಡುತ್ತೇನೆ’ ಎಂದು ಏಕೆ ಹೇಳುವುದಿಲ್ಲ? ಒಂದು ವೇಳೆ ಹೇಳಿದರೆ ಅವಳೆಷ್ಟು ಖುಷಿ ಪಡುತ್ತಾಳೆ ಎಂದು ಅವನಿಗೆ ಗೊತ್ತಾಗುವುದು ಯಾವಾಗ?

     ಅಡುಗೆ ಎಂದಾಗ ಇನ್ನೊಂದು ವಿಷಯ ನೆನಪಿಗೆ ಬರುತ್ತಿದೆ. ಈಚೆಗೆ ನನ್ನ ಗೆಳತಿಯೊಬ್ಬಳಿಗೆ ಪ್ರಸಿದ್ಧ ದಿನಪತ್ರಿಕೆಯೊಂದು ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ಬಂತು. ಅವಳು ಬರೆದ ಪ್ರಬಂಧದ ಹೆಸರು “ಉರಿವ ಒಲೆಯ ಮುಂದೆ’. ಅದೇ ಸಮಯದಲ್ಲಿ ಇದನ್ನು ಪತ್ರಿಕೆಯಲ್ಲಿ ನೋಡಿದ, ನನಗೂ ಅವಳಿಗೂ ಪರಿಚಯವಿರುವ ಖ್ಯಾತ ಲೇಖಕ ಮಿತ್ರರೊಬ್ಬರು ಯಾವುದೋ ಕಾರ್ಯಕ್ರಮದಲ್ಲಿ ನನಗೆ ಸಿಕ್ಕಿ  ಹೇಳಿದರು, “”ನಿಮ್ಮ ಗೆಳತಿಗೆ ಬಹುಮಾನ ಬಂದ ವಿಷಯ ತಿಳಿಯಿತು. ಅವಳಿಗೆ ನನ್ನ ಅಭಿನಂದನೆ ತಿಳಿಸಿ”.

ನಾನು ಖುಷಿಯಿಂದ ಹೇಳಿದೆ, “”ಆಯ್ತು. ಖಂಡಿತ ಹೇಳೆ¤àನೆ. ಆ ಪ್ರಬಂಧದ ಬಗ್ಗೆ ನಿಮ್ಮ ಅನಿಸಿಕೆ ಏನು?” 
ಅದಕ್ಕೆ ಅವರು, “”ಶೀರ್ಷಿಕೆ ನೋಡಿಯೇ ಬಿಟ್ಟುಬಿಟ್ಟೆ. ಮುಂದೆ ಓದಲಿಲ್ಲ. ನೀವು ಎಷ್ಟೂಂತ ಅಡುಗೆ ಮನೆಯ ಬಗ್ಗೆಯೇ ಬರೆಯುತ್ತೀರಿ? ಶತ ಶತಮಾನಗಳಿಂದಲೂ ನಿಮಗೆ ಅದೇ ವಿಷಯ. ಪ್ರಪಂಚ ಎಷ್ಟು ದೊಡ್ಡದಾಗಿದೆ! ಹೊರ ಜಗತ್ತಿನ ಬಗ್ಗೆ ಬರೆಯಿರಿ. ಹೊಸಹೊಸ ವಿಷಯಗಳ ಬಗ್ಗೆ ಬರೆಯಿರಿ. ಇನ್ನೂ ಅದೇ ಅಡುಗೆ ಮನೆ… ಒಲೆ… ಉರಿ… ನೀವು ಬದಲಾಗುವುದು ಯಾವಾಗ?” ಎಂದರು. 

ನಾನು ಉತ್ತರ ಕೊಡಲಿಲ್ಲ. ಆದರೆ, ಮನಸ್ಸು ಹೇಳಿತು, “”ಯಾವಾಗ ನೀವು ಅಡುಗೆ ಮನೆ ಜವಾಬ್ದಾರಿಯನ್ನು ಸಮಾನವಾಗಿ ಹೊತ್ತುಕೊಳ್ಳುತ್ತೀರೋ ಆಗ ನಾವು ಬದಲಾಗುತ್ತೇವೆ”. ಪ್ರಸಿದ್ಧ ಕವಯತ್ರಿ ಗೆಳತಿಯೊಬ್ಬಳ ಕವನದ ಸಾಲು ಹೀಗಿದೆ- ಒಲೆ ಬದಲಾದರೂ ಉರಿ ಬದಲಾಗದು. ಈ ಮಾತು ಎಷ್ಟು ನಿಜ ! 

    ಇಂದು ದುಡಿಯುವ ಹೆಣ್ಣುಮಕ್ಕಳು ಹೆಚ್ಚಿದ್ದು ಅವರು ಹೊರ ಜಗತ್ತಿಗೆ ತೆರೆದುಕೊಂಡಿದ್ದಾರೆ. ಅವಳು ಎಲ್ಲ ಕ್ಷೇತ್ರಗಳಲ್ಲಿ ದಾಪುಗಾಲಿಡುತ್ತಿದ್ದಾಳೆ. ಜಗತ್ತು ವೇಗವಾಗಿ ಮುಂದುವರಿಯುತ್ತಿದೆ. ಕಂಪ್ಯೂಟರ್‌ ಯುಗದಿಂದ ರೋಬೊಟ್‌ ಯುಗಕ್ಕೆ ಬಂದಿದ್ದೇವೆ. ಮಂಗಳನ ಅಂಗಳಕ್ಕೆ ಹಾರಿದ್ದೇವೆ. ಆದರೆ ಹೆಣ್ಣಿಗೆ ಅಡುಗೆ ಮನೆ ಅಂಗಳದಿಂದ ಮುಕ್ತಿ ದೊರಕಿಲ್ಲ.

ಸಹನಾ ಕಾಂತಬೈಲು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.