ಛತ್ತೀಸ್ಗಢ: ಬಸ್ ಸ್ಫೋಟಕ್ಕೆ 5 ಬಲಿ
Team Udayavani, Nov 9, 2018, 5:08 AM IST
ದಂತೇವಾಡ: ಚುನಾವಣಾ ಅಖಾಡವಾಗಿರುವ ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಬಚೇಲಿಯಲ್ಲಿ ನಕ್ಸಲರು ಬಸ್ಸೊಂದನ್ನು ಸ್ಫೋಟಿಸಿದ್ದು, ಸಿಐಎಸ್ಎಫ್ ಯೋಧ ಸಹಿತ ಐವರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಬಸ್ ಚಾಲಕ, ನಿರ್ವಾಹಕ ಮತ್ತು ಕ್ಲೀನರ್ ಹಾಗೂ ಓರ್ವ ಚುನಾವಣಾ ಸಿಬಂದಿ ಸೇರಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಮೊದಲ ಹಂತದ ಮತದಾನಕ್ಕೆ 4 ದಿನ (ನ. 12) ಬಾಕಿಯಿರುವಂತೆಯೇ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯ ಬಸ್ಸನ್ನು ಚುನಾವಣಾ ಕರ್ತವ್ಯದಲ್ಲಿರುವ ಸಿಐಎಸ್ಎಫ್ ಸೇವೆಗಾಗಿ ಬಳಸಲಾಗುತ್ತಿತ್ತು. ಗುರುವಾರ, ಬೈಲಾಡಿಲಾ ಗಣಿಗಾರಿಕೆ ವಲಯದಲ್ಲಿ ಈ ಬಸ್ ಸಂಚರಿಸುತ್ತಿದ್ದಾಗ ನಕ್ಸಲರು ಬಾಂಬ್ ದಾಳಿ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಭದ್ರತೆಯ ಸವಾಲು: ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಶುಕ್ರವಾರ ಜಗದಾಳ್ಪುರಕ್ಕೆ ಆಗಮಿಸಲಿದ್ದು, ಅಂದು ನಡೆಯಲಿರುವ ರ್ಯಾಲಿಯ ಸ್ಥಳದಿಂದ 100 ಕಿ.ಮೀ. ದೂರದಲ್ಲಿ ಗುರುವಾರದ ಸ್ಫೋಟ ಸಂಭವಿಸಿದೆ. ಹೀಗಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ