4 ತಿಂಗಳಿಂದ ಅತಿಥಿ ಶಿಕ್ಷಕರಿಗೂ ವೇತನವಿಲ್ಲ


Team Udayavani, Nov 9, 2018, 6:45 AM IST

untitled-1.jpg

ಸುಳ್ಯ: ರಾಜ್ಯದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ದಸರಾ ಬಳಿಕ ಈಗ ದೀಪಾವಳಿ ಹಬ್ಬದ ಸಂಭ್ರಮವೂ ಇಲ್ಲ. ಏಕೆಂದರೆ, ಈ ಸಿಬ್ಬಂದಿಗೆ ನಾಲ್ಕು ತಿಂಗಳಿನಿಂದ ಮಾಸಿಕ ಗೌರವಧನವೇ ಸಿಕ್ಕಿಲ್ಲ. 2018-19ನೇ ಸಾಲಿಗೆ ಪ್ರಾಥಮಿಕ ಶಾಲೆಗಳ 12,500 ಮತ್ತು ಪ್ರೌಢಶಾಲೆಗಳ 3,100 ಹುದ್ದೆಗಳು ಸೇರಿ ಖಾಲಿ ಇರುವ ಒಟ್ಟು 15,600 ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಸರಕಾರವು ಶಿಕ್ಷಣ ಇಲಾಖೆ ಮೂಲಕ ನೇಮಕ ಮಾಡಿಕೊಂಡಿತ್ತು. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ ತಿಂಗಳಿಗೆ 10,500 ರೂ. ಹಾಗೂ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ನಿಗದಿಪಡಿಸಿ ಆದೇಶಿಸಿತ್ತು.
ಸರಕಾರದ ಸುತ್ತೋಲೆಯಂತೆ ಶಿಕ್ಷಣ ಇಲಾಖೆ ಈ ಜೂನ್‌ನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿತ್ತು. ಆದರೆ
ನಾಲ್ಕು ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂಬುದು ಶಿಕ್ಷಕರ ಗೋಳು.

ಶಿಕ್ಷಕರ ಕೊರತೆಗೆ ಪರಿಹಾರ: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರ ಸ್ಥಿತಿಗೆ ತಲುಪಿದಾಗ ಅತಿಥಿ ಶಿಕ್ಷಕರ ನೇಮಕದ
ಮೂಲಕ ಪರಿಸ್ಥಿತಿಯಲ್ಲಿ ಸುಧಾರಣೆ ತರುವುದು ಸರಕಾರದ ಇಚ್ಛೆಯಾಗಿತ್ತು. ಹೀಗಾಗಿ ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು. ಆದರೆ ಬಳಿಕ ವೇತನ ನೀಡುವುದನ್ನು ಅದು ಮರೆತಂತಿದೆ ಎಂದು ಅತಿಥಿ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ಕೆಲಸ ಮಾಡುವುದು ಹೇಗೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಈ ಹಿಂದೆ 5,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 6,500ರೂ. ವೇತನ ನಿಗದಿ ಪಡಿಸಲಾಗಿತ್ತು. ಈ ವರ್ಷ ಮಾಸಿಕ ಗೌರವ ಧನವನ್ನು ಸರಕಾರ ಹೆಚ್ಚಿಸಿತ್ತು. 

ತಾಂತ್ರಿಕ ಕಾರಣದ ಸಬೂಬು: ಗೌರವಧನ ವಿಳಂಬವಾಗಲು ತಾಂತ್ರಿಕ ತೊಂದರೆಗಳು ಕಾರಣ ಎನ್ನುವುದು  ಶಿಕ್ಷಣ ಇಲಾಖೆ ನೀಡುತ್ತ ಬಂದಿರುವ ಕಾರಣ. ಆದರೆ ಸರಕಾರದ ಅಧೀನದಲ್ಲಿರುವ ಶಿಕ್ಷಣ ಇಲಾಖೆಯೇ ಈ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಅದಾಗಿಲ್ಲ. ದಸರಾ ಬಳಿಕ ದೀಪಾವಳಿಗೂ ಅವರಿಗೆ ವೇತನ ಸಿಕ್ಕಿಲ್ಲ. ಸೂಕ್ತ ಸಮಯದಲ್ಲಿ ಸರಕಾರ ನಿಗದಿಪಡಿಸಿದ ವೇತನ ನೀಡುವುದಕ್ಕೆ ಇಲಾಖೆ ಮುತುವರ್ಜಿ ವಹಿಸಬೇಕು. ಇಲಾಖೆಯ ನಿರ್ಲಕ್ಷ್ಯದಿಂದಲೇ ಈ ಗೊಂದಲ ಉಂಟಾಗುತ್ತಿದೆ ಎನ್ನುವುದು ಅತಿಥಿ ಶಿಕ್ಷರ ವಲಯದಿಂದ ಕೇಳಿಬರುವ ಆರೋಪ. ವೇತನ ವಿಳಂಬ ಕುರಿತು ಅತಿಥಿ ಶಿಕ್ಷಕರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿ ವಿಚಾರಿಸಿದರೆ, ಸರಕಾರದಿಂದ ಬಿಡುಗಡೆಗೊಂಡಿದೆ, ಶೀಘ್ರ ನಿಮ್ಮ ಬ್ಯಾಂಕು ಖಾತೆಗೆ ತಲುಪುತ್ತದೆ ಎನ್ನುವ ಉತ್ತರ ನೀಡುತ್ತಾರೆ. ಆದರೆ ವೇತನ ಇನ್ನೂ ಶಿಕ್ಷಕರ ಖಾತೆ ಸೇರಿಲ್ಲ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೇತನ ನೀಡಲಾಗಿದೆ ಎನ್ನುವ ಮಾಹಿತಿ ಇದ್ದರೂ ಅದೂ
ಖಚಿತಗೊಂಡಿಲ್ಲ.

ಸರಕಾರದಿಂದ ಹಣ ಬಿಡುಗಡೆಗೊಂಡು ತಾ.ಪಂ. ಕಚೇರಿಗೆ ಬಂದಿದೆ. ತಾಂತ್ರಿಕ ಕಾರಣಗಳಿಂದ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವಲ್ಲಿ ತೊಡಕು ಕಂಡುಬಂದ ಕಾರಣ ತಡವಾಗಿದೆ. ಕೆಲವೇ ದಿನಗಳಲ್ಲಿ ಅತಿಥಿ ಶಿಕ್ಷಕರ ಖಾತೆಗೆ ಬಾಕಿ ಇರುವ ಎಲ್ಲ ವೇತನ ಪಾವತಿಯಾಗಲಿದೆ. 
● ವಾಲ್ಟರ್‌ ಡಿಮೆಲ್ಲೊ, ಡಿಡಿಪಿಐ, ಮಂಗಳೂರು

ಬಾಲಕೃಷ್ಣ ಭೀಮಗುಳಿ 

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.