ಭಾರತಕ್ಕೆ ಒಲಿದೀತೇ ಮೊದಲ ಕಿರೀಟ?


Team Udayavani, Nov 9, 2018, 12:23 PM IST

t2o-trophy.jpg

ಪ್ರೊವಿಡೆನ್ಸ್‌ (ಗಯಾನಾ): ವನಿತೆಯರ ಆರನೇ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಶುಕ್ರವಾರದಿಂದ ನ. 24ರ ತನಕ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದೆ. ಭಾರತ ಸಹಿತ 10 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಟೀಮ್‌ ಇಂಡಿಯಾವನ್ನು ಹರ್ಮನ್‌ಪ್ರೀತ್‌ ಕೌರ್‌ ಮುನ್ನಡೆಸಲಿದ್ದಾರೆ. “ಬಿ’ ಗುಂಪಿನಲ್ಲಿರುವ ಭಾರತ, ಶುಕ್ರವಾರದ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡನ್ನು ಎದುರಿಸಲಿದೆ.

ಈ ವರೆಗೆ ಭಾರತ ಟಿ20 ವಿಶ್ವಕಪ್‌ ಗೆಲ್ಲುವುದಿರಲಿ, ಫೈನಲ್‌ ತಲುಪಲಿಕ್ಕೂ ವಿಫ‌ಲವಾಗಿದೆ. 2009 ಮತ್ತು 2010ರಲ್ಲಿ ಸೆಮಿಫೈನಲ್‌ ತಲುಪಿದ್ದೇ ಭಾರತದ ಈವರೆಗಿನ ಅತ್ಯುತ್ತಮ ಸಾಧನೆ. ಆದರೆ ಕಳೆದ ವರ್ಷ ಏಕದಿನ ವಿಶ್ವಕಪ್‌ ಫೈನಲ್‌ ತಲುಪಿದ ಬಳಿಕ ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಭಾರತದ ಸಾಧನೆ ಗಮನಾರ್ಹ ಮಟ್ಟದಲ್ಲಿ ಸುಧಾರಣೆ ಕಾಣುತ್ತ ಬಂದಿದೆ. ಅಂದು ಇಂಗ್ಲೆಂಡ್‌ ವಿರುದ್ಧ ಫೈನಲ್‌ನಲ್ಲಿ ಸೋತ ಬಳಿಕ ಭಾರತ ತನ್ನ ತಪ್ಪುಗಳನ್ನೆಲ್ಲ ತಿದ್ದಿಕೊಳ್ಳುತ್ತಲೇ ಬಂದಿದ್ದು, ಈ ಬಾರಿ ಹೆಚ್ಚಿನ ನಿರೀಕ್ಷೆ ಇರಿಸಬಹುದು ಎಂಬುದು ಇತ್ತೀಚೆಗಷ್ಟೇ ತಂಡದ ನೂತನ ಕೋಚ್‌ ಆಗಿ ಆಯ್ಕೆಯಾಗಿರುವ ರಮೇಶ್‌ ಪೊವಾರ್‌ ವಿಶ್ವಾಸ.

ಕಳೆದ ಏಶ್ಯ ಕಪ್‌ ಟಿ20 ಫೈನಲ್‌ನಲ್ಲಿ ಬಾಂಗ್ಲಾದೇಶ ಎದುರಾದ ಸೋಲು ನಮ್ಮ ಪಾಲಿಗೊಂದು ಎಚ್ಚರಿಕೆಯ ಗಂಟೆ ಎಂಬುದು ಎಡಗೈ ಆರಂಭಕಾರ್ತಿ ಸ್ಮತಿ ಮಂಧನಾ ಅಭಿಪ್ರಾಯ. “ಈ ಸೋಲಿನ ಬಳಿಕ ಎಲ್ಲರೂ ಕಠಿನ ಅಭಾಸ್ಯ ನಡೆಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಕೂಟಕ್ಕೆ ಎಲ್ಲ ರೀತಿಯಲ್ಲೂ ಸಿದ್ಧರಾಗಿದ್ದೇವೆ’ ಎಂದು ತಂಡದ ಉಪನಾಯಕಿಯೂ ಆಗಿರುವ ಸ್ಮತಿ ಮಂಧನಾ ಹೇಳಿದ್ದಾರೆ.

“ಶ್ರೀಲಂಕಾ ವಿರುದ್ಧದ ಸರಣಿ ನಮ್ಮ ಪಾಲಿಗೆ ಮಹತ್ವದ್ದಾಗಿತ್ತು. ವೈಯಕ್ತಿಕವಾಗಿ ನಾನು ಈ ಸರಣಿಯಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡಲಿಲ್ಲ. ಒಂದು ಪಂದ್ಯದಲ್ಲಿ ನಾನು ಮತ್ತು ಹರ್ಮನ್‌ಪ್ರೀತ್‌ ಒಂದೂ ರನ್‌ ಗಳಿಸಿರಲಿಲ್ಲ. ಆದರೂ ತಂಡದ ಮೊತ್ತ 170ರ ಗಡಿ ಮುಟ್ಟಿತ್ತು’ ಎಂಬುದಾಗಿ ಮಂಧನಾ ಹೇಳಿದರು.

“ಭಾರತದ ಬೌಲಿಂಗ್‌ ಕಳೆದ 3 ತಿಂಗಳಲ್ಲಿ ಭಾರೀ ಸುಧಾರಣೆ ಕಂಡಿದೆ. ಎಲ್ಲರೂ ತಮ್ಮ ಯೋಜನೆಗೆ ತಕ್ಕಂತೆ ಬೌಲಿಂಗ್‌ ಸಂಘಟಿಸುತ್ತಿದ್ದಾರೆ. ಆದರೆ ಫೀಲ್ಡಿಂಗ್‌ ಗುಣಮಟ್ಟ ಸಾಲದು. ಕಳೆದ ವಿಶ್ವಕಪ್‌ಗಿಂತ ಶೇ. 10ರಷ್ಟು ಮಾತ್ರ ಸುಧಾರಣೆ ಕಂಡಿದೆ’ ಎಂಬುದು ಮಂಧನಾ ಅಭಿಪ್ರಾಯ. ಈ ಕೂಟದಲ್ಲಿ ಅವರು ಮಿಥಾಲಿ ರಾಜ್‌ ಜತೆಗೂಡಿ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ.

ಶ್ರೀಲಂಕಾವನ್ನು ಅವರದೇ ನೆಲದಲ್ಲಿ ಮಣಿಸಿದ ಭಾರತ, ಬಳಿಕ ತವರಲ್ಲಿ ಆಸ್ಟ್ರೇಲಿಯ “ಎ’ ತಂಡಕ್ಕೆ ವೈಟ್‌ವಾಶ್‌ ಮಾಡುವ ಮೂಲಕ ಉತ್ತಮ ಫಾರ್ಮ್ ಪ್ರದರ್ಶಿಸಿದೆ. ಕೆರಿಬಿಯನ್‌ ನಾಡಿಗೆ ತೆರಳಿದ ಬಳಿಕ ಅಭ್ಯಾಸ ಪಂದ್ಯಗಳಲ್ಲಿ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ಮತ್ತು ಇಂಗ್ಲೆಂಡಿಗೆ ಸೋಲುಣಿಸಿದೆ. 


ಪ್ರಬಲ ಬ್ಯಾಟಿಂಗ್‌ ಲೈನ್‌ಅಪ್‌
ಭಾರತದ ಅಗ್ರ ಕ್ರಮಾಂಕದಲ್ಲಿ ಸ್ಮತಿ ಮಂಧನಾ- ಮಿಥಾಲಿ ಪಾತ್ರ ನಿರ್ಣಾಯಕವಾಗಲಿದೆ. ಮಧ್ಯಮ ಕ್ರಮಾಂಕದಲ್ಲಿ ಯುವ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌, ತನ್ಯಾ ಭಾಟಿಯ, ಹರ್ಮನ್‌ಪ್ರೀತ್‌ ಕೌರ್‌ ಆಧಾರವಾಗಬೇಕಿದೆ. 

ಬೌಲಿಂಗ್‌ ವಿಭಾಗದಲ್ಲಿ ಲೆಗ್‌ಸ್ಪಿನ್ನರ್‌ ಪೂನಂ ಯಾದವ್‌ ಹೆಚ್ಚು ಅಪಾಯಕಾರಿಯಾಗಿ ಗೋಚರಿಸಬಹುದು. ಆದರೆ ಜೂಲನ್‌ ಗೋಸ್ವಾಮಿ ನಿವೃತ್ತಿಯ ಬಳಿಕ ತಂಡದ ವೇಗದ ಬೌಲಿಂಗ್‌ ವಿಭಾಗ ಅನುಭವದ ಕೊರತೆ ಎದುರಿಸುತ್ತಿದೆ. 
ಕಳೆದ 3 ವಿಶ್ವಕಪ್‌ಗ್ಳಲ್ಲಿ ಗ್ರೂಪ್‌ ಹಂತ ದಾಟುವಲ್ಲಿ ವಿಫ‌ಲವಾಗಿದ್ದ ಭಾರತ, ಈ ಬಾರಿ ದೊಡ್ಡ ಯೋಜನೆಯೊಂದಿಗೆ ಕಣಕ್ಕಿಳಿಯಲಿದೆ. ಲೀಗ್‌ ಹಂತದಲ್ಲಿ ಪ್ರಬಲ ನ್ಯೂಜಿಲ್ಯಾಂಡ್‌, ಸಾಂಪ್ರದಾಯಿ ಕ ಎದುರಾಳಿ ಪಾಕಿಸ್ಥಾನ ಮತ್ತು 3 ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯವನ್ನು ಭಾರತ ಎದುರಿಸಬೇಕಿದೆ. 

“ನೀವು ವೈಯಕ್ತಿಕವಾಗಿ ಶ್ರೇಷ್ಠ ಪ್ರದರ್ಶನ ನೀಡಿದರೂ ತಂಡ ಬೆಳೆಯುತ್ತದೆ. ಭಾರತೀಯ ವನಿತಾ ಕ್ರಿಕೆಟ್‌ ಬೆಳೆಯುತ್ತದೆ. ಜನರೆಲ್ಲ ವನಿತಾ ಕ್ರಿಕೆಟ್‌ ಪಂದ್ಯಾವಳಿಯನ್ನು ಹೆಚ್ಚು ಆಸಕ್ತಿಯಿಂದ ನೋಡಲಾರಂಭಿಸುತ್ತಾರೆ. ಇಂಥ ದೊಡ್ಡ ಕೂಟಗಳಲ್ಲಿ ದಾಖಲೆಗಳನ್ನು ಮುರಿಯಲು ಪ್ರಯತ್ನಿಸಬೇಕು’  ಎಂದಿದ್ದಾರೆ ಕೋಚ್‌ ರಮೇಶ್‌ ಪೊವಾರ್‌.

ಭಾರತ ತಂಡ
ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ತಾನಿಯಾ ಭಾಟಿಯಾ (ವಿ.ಕೀ.), ಏಕ್ತಾ ಬಿಷ್ಟ್, ದಯಾಳನ್‌ ಹೇಮಲತಾ, ಮಾನ್ಸಿ ಜೋಶಿ, ವೇದಾ ಕೃಷ್ಣಮೂರ್ತಿ, ಸ್ಮತಿ ಮಂಧನಾ, ಅನುಜಾ ಪಾಟೀಲ್‌, ಮಿಥಾಲಿ ರಾಜ್‌, ಅರುಂಧತಿ ರೆಡ್ಡಿ, ಜೆಮಿಮಾ ರೋಡ್ರಿಗಸ್‌, ದೀಪ್ತಿ ಶರ್ಮ, ಪೂಜಾ ವಸ್ತ್ರಾಕರ್‌, ರಾಧಾ ಯಾದವ್‌, ಪೂನಂ ಯಾದವ್‌.

ಟಾಪ್ ನ್ಯೂಸ್

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.