ಬೈಕಿನ ಮೇಲೆ ಉರುಳಿ ಬಿದ್ದ ಟ್ರಕ್: ದಂಪತಿ,ಇಬ್ಬರು ಮಕ್ಕಳ ದಾರುಣ ಸಾವು
Team Udayavani, Nov 9, 2018, 4:08 PM IST
ಮುಂಬಯಿ : ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಸಕ್ಕರೆ ಗೋಣಿ ಸಾಗಿಸುತ್ತಿದ್ದ ಟ್ರಕ್ ಒಂದು ಮೋಟಾರ್ ಸೈಕಲ್ ಮೇಲೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಮಜಲಗಾಂವ್ – ಪರ್ಭಾನಿ ಹೈವೇಯಲ್ಲಿ ಈ ದುರಂತ ಸಂಭವಿಸಿದೆ. ಟ್ರಕ್ಕು ಮೋಟಾರ್ ಬೈಕನ್ನು ಹಿಂದಿಕ್ಕಲು ಯತ್ನಿಸುವ ಭರದಲ್ಲಿ ಆಯ ತಪ್ಪಿ ಬೈಕಿನ ಮೇಲೆಯೇ ಉರುಳಿ ಬಿತ್ತು. ಪರಿಣಾಮವಾಗಿ ಬೈಕಿನಲ್ಲಿದ್ದ ಗಂಡ, ಹೆಂಡತಿ ಮತ್ತು ಅವರ ಇಬ್ಬರು ಮಕ್ಕಳು ಟ್ರಕ್ಕಿನಡಿ ಅಪ್ಪಚ್ಚಿಯಾಗಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಮೃತರನ್ನು ದಯಾನಂದ ಸೋಲ್ನಖೆ (42), ಆತನ ಪತ್ನಿ ಸಂಗೀತಾ (35) ಮತ್ತು ಅವರ ಮಕ್ಕಳಾದ ಪೃಥ್ವಿರಾಜ್ (12) ಹಾಗೂ ರಾಜನಂದಿನಿ (10) ಎಂದು ಗುರುತಿಸಲಾಗಿದೆ.
ಇದೇ ಅವಘಡಕ್ಕೆ ಸಿಲುಕಿದ ಮತ್ತೂಂದು ಬೈಕಿನಲ್ಲಿದ್ದ ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸರು ತಿಳಿಸಿದರು. ಟ್ರಕ್ ಚಾಲಕ ರೂಪೇಶ್ ಯಾದವ್ (30) ಎಂಬಾತನನ್ನು ಪೊಲೀಸರು ಬಂಧಿಸಿ, ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್