ದೀಪಾವಳಿ ಹಬ್ಬದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹ


Team Udayavani, Nov 9, 2018, 4:08 PM IST

9-november-18.gif

ಕೊಪ್ಪಳ: ಎರಡು ದಿನದ ಹಬ್ಬಕ್ಕಾಗಿ ನಗರದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹವಾಗಿದೆ. ಬಾಳೆದಿಂಡು, ಅಡಕೆ ಸೇರಿದಂತೆ ಚಂಡುಹೂವುಗಳನ್ನು ವ್ಯಾಪಾರಿಗಳು ಎಲ್ಲೆಂದರಲ್ಲಿ ಬಿಸಾಡಿ ತೆರಳಿದ್ದು, ಗುರುವಾರ ನಗರಸಭೆಯಿಂದ ತ್ಯಾಜ್ಯ ವಿಲೇವಾರಿಗೆ ಹರಸಾಹಸ ಮಾಡಬೇಕಾಯಿತು. ಇಂತಹ ಸಂದರ್ಭದಲ್ಲಿ ನಗರಸಭೆಯಿಂದ ವ್ಯಾಪಾರಿಗಳಿಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ.

ಹೌದು. ಕೊಪ್ಪಳವನ್ನು ಸುಂದರ ನಗರವನ್ನು ಮಾಡುತ್ತೇವೆ ಎನ್ನುವ ಮಾತಿನ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ದೀಪಾವಳಿ ಹಬ್ಬ ಕೇವಲ ಎರಡು ದಿನ ಮಾತ್ರ ನಡೆದಿದೆ. ಆದರೆ ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಕಣ್ಣಿಗೆ ಗೋಚರವಾಗುತ್ತಿದೆ. ಬಾಳೆ ಎಲೆ, ಬಾಳೆ ದಿಂಡು, ಹೂವಿನ ಕೊಂಬೆ ಸೇರಿದಂತೆ ಪ್ಲಾಸ್ಟಿಕ್‌ ಹಾಳೆಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗಿದೆ. ಇದು ನಗರದ ಸೌಂಧರ್ಯವನ್ನೇ ಹಾಳು ಮಾಡಿದೆ.

ದೀಪಾವಳಿ ಪ್ರಯುಕ್ತ ವ್ಯಾಪಾರ ವಹಿವಾಹಿಟಿಗೆ ಬರುವ ವ್ಯಾಪಾರಿಗಳು ತಂದ ಮಾಲು ಸಕಾಲಕ್ಕೆ ವಹಿವಾಟು ನಡೆಯದ ಹಿನ್ನೆಲೆಯಲ್ಲಿ ವ್ಯಾಪಾರ ಮಾಡಿದ ಸ್ಥಳದಲ್ಲೇ ಬಿಟ್ಟು ತೆರಳುತ್ತಿದ್ದಾರೆ. ಇನ್ನೂ ಹಬ್ಬ ಆಚರಣೆ ಮಾಡುವ ಜನರು ಮನೆ, ಅಂಗಡಿ ಮುಂಗಟ್ಟಿ ಮುಂದಿಟ್ಟ ಬಾಳೆ ದಿಂಡು ಹಾಗೂ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಬೆಳಕಿಗೆ ಬರುತ್ತಿದೆ.

ಕಾರ್ಮಿಕರಿಗೆ ಪುರುಸೊತ್ತಿಲ್ಲ: ಹಬ್ಬ ಆರಂಭವಾದ ದಿನದಿಂದ ನಗರಸಭೆಗೆ ತಲೆ ಬಿಸಿ ಶುರುವಾಗಿದೆ. ದಿನವೂ ಎಲ್ಲೆಂದರಲ್ಲಿ ಬಿಸಾಡಿದ ಕಸವನ್ನು ಮಿನಿ ಟಿಪ್ಪರ್‌ಗಳಲ್ಲಿ ಘನ ತ್ಯಾಜ್ಯ ಘಟಕಕ್ಕೆ ಸಾಗಾಟ ಮಾಡಲಾಗುತ್ತಿದೆ.

ಅದರಲ್ಲೂ ಜವಾಹರ ರಸ್ತೆ, ಮಾರ್ಕೆಟ್‌, ಸಾರ್ವಜನಿಕ ಮೈದಾನ, ಕೇಂದ್ರಿಯ ಬಸ್‌ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜೆಸಿಬಿ ಮೂಲಕ ಕಸದ ವಿಲೇವಾರಿ ನಡೆದಿತ್ತು. ಕಾರ್ಮಿಕರಿಗೆ ಹಬ್ಬ ಮಾಡಲೂ ಪುರುಸೊತ್ತಿಲ್ಲದಂತಹ ಪರಿಸ್ಥಿತಿ ಎದುರಾಗಿತ್ತು.

ವ್ಯಾಪಾರಿಗಳಿಗೆ ಸೂಚನೆ ಅವಶ್ಯ: ಹಬ್ಬದಂತಹ ಸಂದರ್ಭದಲ್ಲಿ ನಗರಸಭೆಯು ವ್ಯಾಪಾರಿಗಳಿಗೆ, ವ್ಯಾಪಾರ ನಡೆಸುವ ಜನರಿಗೆ ಕಸ ಎಲ್ಲೆಂದರಲ್ಲಿ ಬಿಸಾಡುವ ಕುರಿತು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಅಲ್ಲದೇ, ಆಟೋ ಮೂಲಕ ಧ್ವನಿವರ್ಧಕದಲ್ಲಿ ಜಾಗೃತಿ ಮೂಡಿಸಿ ಕಸ ಎಲ್ಲೆಂದರಲ್ಲಿ ಬಿಸಾಡಿದರೆ ದಂಡದ ಬಗ್ಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ. ಆದರೆ ಈ ಬಾರಿ ಅಷ್ಟೊಂದು ಪ್ರಮಾಣದಲ್ಲಿ ನಗರಸಭೆ ತನ್ನ ಕೆಲಸ ಮಾಡಿಲ್ಲ. ಆದರೂ ಕಸ ವಿಲೇವಾರಿ ಪ್ರಕ್ರಿಯೆ ಮಾತ್ರ ನಡೆದಿತ್ತು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.