ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಆಗ್ರಹ 


Team Udayavani, Nov 9, 2018, 5:32 PM IST

9-november-22.gif

ಮಹಾಲಿಂಗಪುರ: ರಾಜ್ಯ ಸರ್ಕಾರ ಮರಳು ಗಣಿಗಾರಿಕೆಗೆ ಪರವಾನಗಿ ಕೊಟ್ಟಿದ್ದು, ಸರ್ಕಾರ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿಗೆ ಹಣ ಪಡೆದು ಮರಳು ಮಾರಾಟ ಮಾಡುತ್ತಿರುವ ಮಾಲೀಕರ ಲೈಸೆನ್ಸ್‌ ರದ್ದುಗೊಳಿಸಬೇಕು. ಇಲ್ಲವೆ ಸರ್ಕಾರ ನಿಗದಿಪಡಿಸಿದ ದರದಲ್ಲಿ ಮರಳು ಮಾರಾಟ ಮಾಡುವಂತೆ ಸರ್‌.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ರೈತ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಅರ್ಜುನ ಬಂಡಿವಡ್ಡರ, ಬದಾಮಿಯಲ್ಲಿ ಈ ಮರಳು ಮಾರಾಟಕ್ಕೆ ಸರ್ಕಾರ ಕೆಲವು ಮಾಲೀಕರಿಗೆ ಪರವಾನಗಿ ನೀಡಿದೆ. ಅವರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಇದಕ್ಕೆ ಯಾವುದೇ ಸರ್ಕಾರಿ ರಸೀದಿ ಅಥವಾ ಬಿಲ್‌ ಇಲ್ಲ. ಸಾರ್ವಜನಿಕರು, ಟಿಪ್ಪರ್‌ ಮಾಲೀಕರು ಬಿಲ್‌ ಕೇಳಿದರೂ ಅವರು ಕೊಡುವುದಿಲ್ಲ. ಅದರ ಬದಲಾಗಿ ಸರ್ಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ನೀಡಿದ ಪರಮಿಟ್‌ ಪತ್ರ ಮಾತ್ರ ನೀಡಿ ಬಿಲ್‌ ಎಂದು ಹೇಳುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರ 12 ಟನ್‌ಗೆ 5,760 ರೂ. ನಿಗದಿ ಪಡಿಸಿದ್ದರೆ ಮರಳು ಮಾರಾಟ ಪರವಾನಗಿ ಪಡೆದ ಮಾಲೀಕರು ಮಾತ್ರ 14 ಸಾವಿರ ರೂ. ಹಣ ತೆಗೆದುಕೊಳ್ಳುತ್ತಿದ್ದಾರೆ. ಇಷ್ಟು ಹಣ ಕೊಂಡು ತಂದ ಮರಳನ್ನು ಸಾರ್ವಜನಿಕರಿಗೆ 22-26 ಸಾವಿರದ ವರೆಗೆ ಮಾರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎನ್ನುತ್ತಾರೆ ಟಿಪ್ಪರ್‌ ಮಾಲೀಕರು. ಟಿಪ್ಪರ್‌ ಮಾಲೀಕರು ಬಿಲ್‌ ಕೇಳಿದರೂ ಮರಳು ಲೈಸೆನ್ಸ್‌ ಮಾಲೀಕರು ಯಾವುದೇ ಬಿಲ್‌ ಕೊಡುವುದಿಲ್ಲವೆಂದು ಹೇಳಿ ನಾಳೆಯಿಂದ ನಮ್ಮ ಹತ್ತಿರ ಮರಳು ತೆಗೆದುಕೊಳ್ಳಲು ಬರಬೇಡಿ ಎಂದು ಗದರಿಸುತ್ತಾರೆ ಎಂದರು.  ಈ ಬಗ್ಗೆ ಬಾಗಲಕೋಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಿಗೆ ಅ.23ರಂದು ಮನವಿ ಕಳಿಸಿದ್ದರೂ ಇದುವರೆಗೂ ಪ್ರಯೋಜನವಾಗಿಲ್ಲ. ಸರ್ಕಾರ ನಿಗದಿಪಡಿಸಿದ ದರದಲ್ಲಿ ಮರಳು ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಎಲ್ಲ ಸಂಘಟನೆಗಳು ಸೇರಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ರೈತ ಸಂಘದ ಸಂಚಾಲಕ ಗಂಗಾಧರ ಮೇಟಿ, ಪರಸಪ್ಪ ನಸಲಾಪುರ, ತಿಪ್ಪಣ್ಣ ಬಂಡಿವಡ್ಡರ, ಕರೆಪ್ಪ ಮೇಟಿ, ಮಲ್ಲಪ್ಪ ನಸಲಾಪುರ, ಶ್ರೀಕಾಂತ ಗುಳನ್ನವರ, ಬಂದು ಪಕಾಲಿ ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.