3.6ಲಕ್ಷ ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿಲ್ಲ: ಕೇಂದ್ರ
Team Udayavani, Nov 10, 2018, 8:13 AM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಮೀಸಲು ನಿಧಿಯಿಂದ ಸರಕಾರ 3.6 ಲಕ್ಷ ಕೋಟಿ ರೂ. ವರ್ಗಾವಣೆ ಮಾಡುವ ಬೇಡಿಕೆ ಇಟ್ಟಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಇತ್ತೀಚೆಗೆ ಕೇಂದ್ರ ಸರಕಾರ ಹಾಗೂ ಆರ್ಬಿಐ ಮಧ್ಯದ ತಿಕ್ಕಾಟಕ್ಕೆ ಈ ವಿಷಯವೇ ಪ್ರಮುಖವಾದದ್ದು ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ಚಂದ್ರ ಗರ್ಗ್, ಮಾಧ್ಯಮದಲ್ಲಿ ಹಲವು ತಪ್ಪು ಮಾಹಿತಿ ಹರಿದಾಡುತ್ತಿದೆ. ಸರಕಾರದ ವಿತ್ತೀಯ ಲೆಕ್ಕಾಚಾರ ಸರಿಯಾದ ರೀತಿಯಲ್ಲೇ ಇದೆ. ಆರ್ಬಿಐನಿಂದ 3.6 ಲಕ್ಷ ಕೋಟಿ ರೂ. ಆಗಲೀ ಅಥವಾ 1 ಲಕ್ಷ ಕೋಟಿ ರೂ. ಆಗಲೀ ವರ್ಗಾವಣೆ ಮಾಡುವಂತೆ ಕೇಳುವ ಪ್ರಮೇಯವೆ ಇಲ್ಲ ಎಂದಿದ್ದಾರೆ. ಆದರೆ ಆರ್ಬಿಐನ ಆರ್ಥಿಕ ಬಂಡವಾಳ ರೂಪುರೇಷೆಯನ್ನು ಸರಿಪಡಿಸುವ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರವು 2019 ಮಾರ್ಚ್ ಅಂತ್ಯದ ವೇಳೆಗೆ ಶೇ. 3.3 ವಿತ್ತೀಯ ಕೊರತೆಯನ್ನು ನಿರ್ವಹಿಸುವುದಕ್ಕೆ ಬದ್ಧವಾಗಿದೆ. 013-14ರಲ್ಲಿ ವಿತ್ತೀಯ ಕೊರತೆ ಶೇ. 5.1 ಆಗಿತ್ತು. 2014-15ರಿಂದಲೂ ಇದನ್ನು ಇಳಿಸಲು ಸರಕಾರ ಸತತ ಯತ್ನ ನಡೆಸಿದೆ ಎಂದು ಗರ್ಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ