ಬಾವಿಯಲ್ಲಿ ತೈಲ: ಪೆಟ್ರೋಲ್ ಬಂಕ್ ಸೋರಿಕೆಯಲ್ಲ
Team Udayavani, Nov 10, 2018, 10:09 AM IST
ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇರಳಕಟ್ಟೆ ಕಾನಕೆರೆ ಬಾವಿಯಲ್ಲಿ ತೈಲದ ಅಂಶ ಪತ್ತೆ ಹಿನ್ನೆಲೆಯಲ್ಲಿ ಪಕ್ಕದ ಪೆಟ್ರೋಲ್ ಬಂಕನ್ನು ಇಲಾಖೆಯ ಅಧಿಕಾರಿಗಳು ಸಮಗ್ರ ತಪಾಸಣೆ ಮಾಡಿದ್ದು ಬಂಕ್ನಿಂದ ಯಾವುದೇ ಸೋರಿಕೆ ಇಲ್ಲ ಎಂದು ದೃಢಪಡಿಸಿದ್ದಾರೆ. ಪರಿಸರ ಇಲಾಖೆ ಅಧಿಕಾರಿ ಜಯಪ್ರಕಾಶ್ ನಾಯಕ್ ನೇತೃತ್ವದ ತಂಡವು ಬಾವಿಯಲ್ಲಿರುವ ತೈಲದ ಮೂಲ ಪತ್ತೆಗಾಗಿ ನೀರನ್ನು ಕೊಂಡೊಯ್ದಿದ್ದಾರೆ. ನೀರನ್ನು ಎಂಆರ್ಪಿಎಲ್ ಲ್ಯಾಬ್ಗ ಕಳುಹಿಸಲಾಗಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಕಾನಕೆರೆಯ ಬಾವಿಗಳಲ್ಲಿ ತೈಲದ ಅಂಶ ಕಂಡುಬರುತ್ತಿದೆ. ಸ್ಥಳೀಯ ಪೆಟ್ರೋಲ್ ಬಂಕ್ನಿಂದ ಸೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ವಾದಿಸಿದ್ದರು. ಈ ನಿಟ್ಟಿನಲ್ಲಿ ಐಒಸಿಎಲ್ ಅಧಿಕಾರಿಗಳು, ಪರಿಸರ ಇಲಾಖೆಯ ತಜ್ಞರು ಸ್ಥಳೀಯ ಗ್ರಾ.ಪಂ. ಅಧಿಕಾರಿಗಳ ಸಮ್ಮುಖದಲ್ಲಿ ಗುರುವಾರ ಬಂಕ್ನ ವ್ಯವಹಾರ ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದರು.
ತ್ಯಾಜ್ಯ ನೀರಿನ ಸಮಸ್ಯೆ
ದೇರಳಕಟ್ಟೆ ಪರಿಸರದಲ್ಲಿ ಬಹುಮಹಡಿ ಕಟ್ಟಡಗಳು ಸೇರಿಂದಂತೆ ಮೊರಾರ್ಜಿ ದೇಸಾಯಿ ಶಾಲೆ ಖಾಸಗಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು, ಇದರಿಂದ ಬರುವ ಮಲಿನ ನೀರಿನಿಂದ ಕಾನಕೆರೆ ಪರಿಸರದಲ್ಲಿ ತೈಲ ಅಂಶ ಉತ್ಪತ್ತಿಯಾಗಿರಬಹುದು ಎಂದೂ ಸ್ಥಳೀಯರು ವಾದಿಸುತ್ತಿದ್ದು, ಸ್ಥಳೀಯಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Allu Arjun: ಯೂಟ್ಯೂಬ್ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು