‘ಜನರ ಭಾವನೆಗೆ ಘಾಸಿ ಮಾಡುತ್ತಿರುವ ರಾಜ್ಯ ಸರಕಾರ’


Team Udayavani, Nov 10, 2018, 11:45 AM IST

10-november-6.gif

ಮಹಾನಗರ : ರಾಜ್ಯ ಸರಕಾರವು ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ, ಮುಸ್ಲಿಂ, ಕ್ರೈಸ್ತರ ಭಾವನೆಗೆ ಘಾಸಿ ಮಾಡುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಆರೋಪಿದ್ದಾರೆ. ಟಿಪ್ಪು ಸುಲ್ತಾನ್‌ ಜಯಂತಿಯ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸುವ ರೀತಿಯಲ್ಲಿ ಸಿದ್ದರಾಮಯ್ಯನವರ ಜಯಂತಿಯನ್ನೂ ಆಚರಿಸಲಿ. ಟಿಪ್ಪು ಜಯಂತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2015ರಲ್ಲಿ ಆಚರಿಸುವ ಮೂಲಕ ಟಿಪ್ಪುವಿಗಿಂತ ದೊಡ್ಡ ಮತಾಂಧ ಎಂಬುದನ್ನು ಸಿದ್ದರಾಮಯ್ಯ ತೋರಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಬ್ರಿಟಿಷರು ಒಡೆದು ಆಳುವ ನೀತಿಯನ್ನು ರೂಪಿಸಿದರು. ದೇಶದಲ್ಲಿ ಈ ನೀತಿಯನ್ನು ಮೊದಲು ಆಚರಣೆಗೆ ತಂದಿದ್ದು ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್‌ ನೆಹರೂ. ಹಿಂದೂ-ಮುಸ್ಲಿಂ ಭಾಯಿ ಭಾಯಿ ಎಂದು ಹೇಳುತ್ತಾ ಅಲ್ಪಸಂಖ್ಯಾಕ-ಬಹುಸಂಖ್ಯಾಕ ವರ್ಗಗಳನ್ನು ವರ್ಗೀಕರಣ ಮಾಡಿದ್ದರು. ಮತದ ಆಸೆಗೋಸ್ಕರ ಮತಾಂಧ ಸಮಾ ಜಕ್ಕೆ ಪ್ರೇರಕವಾಗಿ ನಿಂತಿದ್ದರು. ಇದರ ಪರಿಣಾಮ ದೇಶದಲ್ಲಿ ಜಾತಿ ವಾದ ಪ್ರಾರಂಭವಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅದನ್ನು ರಾಜ್ಯದಲ್ಲಿ ಪ್ರಾರಂಭಿಸಿದರು. ಇದೀಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದುವರಿಸುತ್ತಿದ್ದಾರೆ ಎಂದರು.

ಹಲವಾರು ಸಮಸ್ಯೆ ಆರಂಭ
ದೇಶದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಹಲವಾರು ಸಮಸ್ಯೆಗಳು ಪ್ರಾರಂಭವಾಗಿದೆ. ಟಿಪ್ಪುವಿನ ಖಡ್ಗವನ್ನು ದೇಶಕ್ಕೆ ತಂದ ಉದ್ಯಮಿ ವಿಜಯ ಮಲ್ಯ ಅವರಿಗೆ ಭಾರತ ಬಿಟ್ಟು ವಿದೇಶದಲ್ಲಿ ಕದ್ದು ಬದುಕುವ ಪರಿಸ್ಥಿತಿ ಬಂದಿದೆ. ಅದೇ ರೀತಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಇದೀಗ ಕುಮಾರಸ್ವಾಮಿ ಅವರು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಅವರಿಗೂ ಅದೇ ಗತಿ ಬರಬಹುದು ಎಂದರು.

ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರಕಾರ ಗೌರವ ಕೊಡಲೇಬೇಕೆಂದಿದ್ದರೆ, ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ, ಸೂಫಿ ಸಂತರ ಜೀವನ ಚರಿತ್ರೆ, ಜಯಂತಿಯನ್ನಾಗಿ ಆಚರಿಸಲಿ ಎಂದರು. ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಟಿಪ್ಪು ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆಹಗಳನ್ನು ಬರೆದರೆ ಕಾನೂನು ಕ್ರಮಕೈಗೊಳ್ಳುತ್ತೇವೆಂದು ಗೃಹ ಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಆದರೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಎರಡು ವರ್ಷಗಳ ಹಿಂದೆ ‘ಮಂಗಳೂರು ದರ್ಶನ’ ಎಂಬ ಗ್ರಂಥ ಹೊರತರಲಾಯಿತು. ಈ ಪುಸ್ತಕದಲ್ಲಿ ಟಿಪ್ಪುವಿನ ಅನಾಚಾರದ ಬಗೆಗಿನ ಸಂಗತಿಗಳಿವೆ. ಈ ಪುಸ್ತಕವನ್ನು ಅಂದಿನ ಸಚಿವರಾಗಿದ್ದ ರಮಾನಾಥ ರೈ, ಯು.ಟಿ. ಖಾದರ್‌ ಅವರು ಬಿಡುಗಡೆಗೊಳಿಸಿದ್ದರು. ಅವರ ಮೇಲೆ ಗೃಹಮಂತ್ರಿಗಳು ಪ್ರಕರಣ ದಾಖಲಿಸಿ, ಬಂಧಿಸುತ್ತಾರೆಯೋ ಎಂದು ಪ್ರಶ್ನಿಸಿದರು.

ಸಾಮಾಜಿಕ ಕಾರ್ಯಕರ್ತ ರಾಬರ್ಟ್‌ ರೊಸಾರಿಯೋ ಮಾತನಾಡಿ, ಕ್ರೈಸ್ತ ಸಮುದಾಯದ ಇತಿಹಾಸದಲ್ಲಿ ಟಿಪ್ಪುವಿಗಿಂತ ದೊಡ್ಡ ಶತ್ರು ಬೇರಿಲ್ಲ. ಟಿಪ್ಪು 27 ಚರ್ಚ್‌ ಗಳ ಮೇಳೆ ದಾಳಿ ನಡೆಸಿದ್ದ, ಅದರಲ್ಲಿ 25  ಚರ್ಚ್‌ಗಳನ್ನು ನೆಲಕ್ಕುರುಳಿಸಿದ್ದ. ಟಿಪ್ಪು ಜಯಂತಿ ಆಚರಣೆಯು ದೇಶವನ್ನು ಒಡೆಯಬೇಕೆನ್ನುವ ಮಾನಸಿಕತೆಯ ಭಾಗವಾಗಿದೆ ಎಂದರು.

ಶಾಸಕ ಡಾ| ವೈ. ಭರತ್‌ ಶೆಟ್ಟಿ, ಬ್ರಿಜೇಶ್‌ ಚೌಟ, ಅನ್ವರ್‌ ಮಾಣಿಪ್ಪಾಡಿ, ಸುಲೋಚನಾ ಅವರು ಮಾತನಾಡಿದರು. ಮಾಜಿ ಶಾಸಕ ಯೋಗೀಶ್‌ ಭಟ್‌, ಸಂತೋಷ್‌ ಕುಮಾರ್‌ ರೈ ಬೋಳಿಯಾರ್‌, ಸಂಜಯ ಪ್ರಭು, ಭಾಸ್ಕರಚಂದ್ರ ಶೆಟ್ಟಿ, ರಮೇಶ್‌ ಕಂಡೆಟ್ಟು, ರಾಮಚಂದ್ರ ಬೈಕಂಪಾಡಿ, ಆನಂದಿ ಮೊದಲಾದವರು ಉಪಸ್ಥಿತರಿದ್ದರು.

ಕುಮಾರಣ್ಣ ಬ್ರದರ್‌ ಮಾತ್ರ… ಅವರಲ್ಲಿ ಖದರ್‌ ಇಲ್ಲ 
ಬಿಜೆಪಿ ವಿಭಾಗೀಯ ಸಹ ಪ್ರಭಾರಿ ಪ್ರತಾಪ್‌ಸಿಂಹ ನಾಯಕ್‌ ಮಾತನಾಡಿ, ‘ಕುಮಾರಸ್ವಾಮಿ ಅವರು ಸಮಾಜದ ಅಣ್ಣನಾಗಿ ಯೋಚನೆ ಮಾಡಲಿ. ಓಟಿಗೋಸ್ಕರ ಟಿಪ್ಪುಜಯಂತಿಯನ್ನು ಆಚರಿಸುವ ಮೂಲಕ ಜನವಿರೋಧಿ ನಡೆ ಅನುಸರಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಆಚರಿಸುವ ವೇಳೆ ಕುಮಾರಸ್ವಾಮಿ ಅವರು ವಿರೋಧಿಸಿದ್ದರು. ಇದೀಗ ಅಧಿಕಾರಕ್ಕೋಸ್ಕರ ಅಂದಿನ ಹೇಳಿಕೆಯನ್ನು ಮರೆತಿದ್ದಾರೆ’ ಎಂದು ಹೇಳಿದರು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.