ಸರ್ವ ರೋಗಕ್ಕೂಆಯುರ್ವೇದ ಮದ್ದು
Team Udayavani, Nov 11, 2018, 11:36 AM IST
ಕಲಬುರಗಿ: ದೇಶದಲ್ಲಿ ಆಯುರ್ವೇದ ಚಿಕಿತ್ಸೆಗೆ ವಿಶಿಷ್ಟ ಸ್ಥಾನಮಾನ ಇದೆ. ಆಯುರ್ವೇದ ಚಿಕಿತ್ಸೆಯಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗದೇ ಎಲ್ಲ ರೋಗಕ್ಕೂ ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾವ್ ಮಲಾಜಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆಯುಷ್ ಕಚೇರಿಗಳ ಸಹಯೋಗದೊಂದಿಗೆ ನಗರದ ಕನ್ನಡ ಸಾಹಿತ್ಯ ಸಂಘದಲ್ಲಿ ಏರ್ಪಡಿಸಲಾಗಿದ್ದ ಮೂರನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದ ಚಿಕಿತ್ಸೆಯಿಂದ ರೋಗಗಳಿಗೆ ಶಾಶ್ವತ ಫಲಿತಾಂಶ ದೊರೆಯುವುದು ಹಾಗೂ ಚಿಕಿತ್ಸೆಯು ದುಬಾರಿ ಇರುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಆಯುಷ್ ಶಾಖೆಗಳನ್ನು ತೆರೆದಿದ್ದು, ಅಲ್ಲಿ ಉಚಿತ ಆಯುರ್ವೇದ ಚಿಕಿತ್ಸೆ ನೀಡಲಾಗುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ನಾಗರತ್ನ ಚಿಮ್ಮಲಗಿ ಮಾತನಾಡಿ, ಇಂದಿನ ಒತ್ತಡದ ದಿನಮಾನಗಳಲ್ಲಿ ಆಯುರ್ವೇದ ಹಾಗೂ ಯೋಗ ಬಹುಮುಖ್ಯವಾಗಿದೆ ಎಂದರು.
ಆಯುಷ್ ವೈದ್ಯ ಸುಧೀರ ಕುಳಗೇರಿ ಸಾರ್ವಜನಿಕ ಆರೋಗ್ಯದಲ್ಲಿ ಆಯುರ್ವೇದದ ಪಾತ್ರದ ಕುರಿತು ಮಾತನಾಡಿದರು. ರಾಷ್ಟ್ರೀಯ ಆಯುರ್ವೇದ
ದಿನಾಚರಣೆ ಅಂಗವಾಗಿ ಚೇತನ ಪ್ರೌಢಶಾಲೆ, ಕಮಲಾಪುರ ಸರ್ಕಾರಿ ಕನ್ಯಾಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ವೇಳೆ ಆಯುರ್ವೇದ ಸಸ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಪಾಲಿಕೆ ಮಹಾಪೌರ ಮಲ್ಲಮ್ಮ ಎಸ್. ವಳಕೇರಿ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಸ್ನೇಹಲ ಸುಧಾಕರ ಲೋಖಂಡೆ, ಡಾ| ಮಲ್ಲಾರಾವ್ ಮಲ್ಲೆ, ಡಾ| ಬಿ.ಆರ್. ವೈದ್ಯ, ಡಾ| ಎ.ಎಸ್. ಪಾಟೀಲ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು