ವ್ಯರ್ಥವಾಗಿ ಹರಿಯುತ್ತಿದೆ ಮಲಪ್ರಭಾ ಕಾಲುವೆ ನೀರು


Team Udayavani, Nov 11, 2018, 4:36 PM IST

11-november-17.gif

ನರಗುಂದ: ಮುಂಗಾರು ಮಳೆಯಿಲ್ಲದೇ ಕಂಗಾಲಾದ ತಾಲೂಕಿನ ರೈತರು ಹಿಂಗಾರು ಅವಧಿಯಲ್ಲಾದರೂ ಉತ್ತಮ ಬೆಳೆ ತೆಗೆಯುವ ಉತ್ಸಾಹದೊಂದಿಗೆ ಸಾಕಷ್ಟು ಬಿತ್ತನೆ ಮಾಡಿ ಕಾಲುವೆ ನೀರು ಅವಲಂಬಿಸಿದ್ದಾರೆ. ಆದರೆ ಸಮರ್ಪಕ ನೀರು ನಿರ್ವಹಣೆಯಲ್ಲಿ ನೀರಾವರಿ ಅಧಿಕಾರಿಗಳ ತಾತ್ಸಾರದಿಂದಾಗಿ ರೈತರ ಬೆಳೆಗೆ ತಂಪೆರೆಯಬೇಕಾದ ಮಲಪ್ರಭಾ ಕಾಲುವೆ ನೀರು ವ್ಯರ್ಥವಾಗಿ ಹರಿಯುತ್ತಿದೆ.

ಪ್ರತಿವರ್ಷ ಹಿಂಗಾರು ಅವಧಿಯಲ್ಲಿ ನೀರಾವರಿ ನಿಗಮದ ಅಧಿಕಾರಿಗಳು ಕಾಲುವೆಗೆ ನೀರು ಹರಿಸಿ ಕೈತೊಳೆದುಕೊಂಡು ಅತ್ತ ತಿರುಗಿ ನೋಡುವುದಿಲ್ಲ. ಇಂತಹ ನಿರ್ಲಕ್ಷ್ಯದ ಪರಿಣಾಮ ಕಾಲುವೆಗೆ ನೀರು ಹರಿಸಿದ ಸಂದರ್ಭದಲ್ಲಿ ತಾಲೂಕಿನ ಹಳ್ಳ ಕೊಳ್ಳಗಳು ತುಂಬಿ ಹರಿಯುವುದು ಸಾಮಾನ್ಯವಾಗಿದೆ. ಬೆಳೆಗೆ ಬಾರದ ನೀರು ವ್ಯರ್ಥವಾಗಿ ಹರಿದು ನದಿಗೆ ಸೇರುವುದು ರೈತರಲ್ಲಿ ಅಸಮಾಧಾನ ಮೂಡಿಸುತ್ತಿದೆ.

ಈ ಮಧ್ಯೆ ಕಳೆದ ತಿಂಗಳು ಉಕ್ಕಿ ಹರಿದಿದ್ದ ಮಲಪ್ರಭಾ ನರಗುಂದ ಶಾಖಾ ಕಾಲುವೆಯ 12ನೇ ಉಪ ಹಂಚಿಕೆಯ ಪಟ್ಟಣದ ಸೋಮಾಪುರ ಕಾಲುವೆ ನೀರು ಶನಿವಾರ ಕೂಡ ಮತ್ತೇ ಉಕ್ಕಿ ಹರಿದಿದೆ. ಈ ರೀತಿ ನೀರು ಪೋಲಾಗುತ್ತಿದ್ದರೂ ಇಲ್ಲಿ ಕೇಳುವವರೇ ಇಲ್ಲದ ಸ್ಥಿತಿ ನಿರ್ಮಾಣಗೊಂಡಿದೆ.

ಸೋಮಾಪುರ ಕಾಲುವೆ ನೀರು ಸಮರ್ಪಕ ನಿರ್ವಹಣೆ ಇಲ್ಲದ ಪರಿಣಾಮ ಉಕ್ಕಿ ಹರಿದ ಹಿನ್ನೆಲೆಯಲ್ಲಿ ಸೋಮಾಪುರ ಬಡಾವಣೆ ಹೊರವಲಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ನೀರಾವರಿ ಕಾಲೋನಿ ಬಳಿಯೇ ಕಾಲುವೆ ನೀರು ಪೋಲಾಗುತ್ತಿದೆ.

ಹಿಂದೊಮ್ಮೆ ಇದೇ ಕಾಲುವೆ ನೀರು ಉಕ್ಕಿ ಹರಿದಾಗಲೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ಬೇಜವಾಬ್ದಾರಿ ರೈತರಿಗೆ ಶಾಪವಾಗಿ ಪರಿಣಮಿಸುತ್ತಿದೆ. ರೈತರ ಜಮೀನಿಗೆ ಸಿಗಬೇಕಾದ ಕಾಲುವೆ ನೀರು ಇಲ್ಲಿ ವ್ಯರ್ಥವಾಗಿ ಹರಿಯುತ್ತಿದ್ದರೂ ಅತ್ತ ತಿರುಗಿ ನೋಡುವ ವ್ಯವಧಾನ ನೀರಾವರಿ ಅಧಿಕಾರಿಗಳಿಗೆ ಇಲ್ಲದಂತಾಗಿದೆ. ಇದರ ಪರಿಣಾಮ ರೈತರ ಬೆಳೆಗಳಿಗೆ ತಂಪೆರೆಯಬೇಕಾದ ನೀರು ಪೋಲಾಗುತ್ತಿದೆ. ಇಲ್ಲಿ ಈ ಸ್ಥಿತಿಯಾದರೆ ಅತ್ತ ಕಾಲುವೆ ಕೆಳಹಂತದ ರೈತರು ಜಮೀನಿಗೆ ನೀರು ಬಾರದೇ ಕೈಕಟ್ಟಿ ಕೂಡುವಂತಾಗಿದೆ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.

ಇದು ಕೇವಲ ಈ ವರ್ಷದ ತಾಪತ್ರಯವಲ್ಲ. ಪ್ರತಿವರ್ಷ ಕಾಲುವೆಗೆ ನೀರು ಹರಿಸಿದಾಗ ಸಮರ್ಪಕ ನಿರ್ವಹಣೆ ಇಲ್ಲದ ಪರಿಣಾಮ ತಾಲೂಕಿನ ಹಿರೇಹಳ್ಳ, ವರ್ತಿ ಹಳ್ಳ, ಇರುಮಾರು ಹಳ್ಳ ಮುಂತಾದ ಹಳ್ಳಗಳಲ್ಲಿ ಕಾಲುವೆ ನೀರು ವ್ಯರ್ಥವಾಗಿ ಹರಿಯುತ್ತಿದ್ದರೂ ನೀರಾವರಿ ಅಧಿಕಾರಿಗಳಾಗಲಿ ಅಥವಾ ನೀರು ನಿರ್ವಹಣೆ ಮಾಡುವ ಸಹಕಾರಿ ಸಂಘಗಳಾಗಲಿ ಇದನ್ನು ತಡೆಗಟ್ಟುವ ಪ್ರಯತ್ನ ಮಾಡುತ್ತಿಲ್ಲ ಎಂಬುದು ರೈತರು ದೂರು.

ಇನ್ನಾದರೂ ನೀರಾವರಿ ಅಧಿಕಾರಿಗಳು ಎಚ್ಚೆತ್ತುಕೊಂಡು ಪೋಲಾಗುತ್ತಿರುವ ನೀರನ್ನು ತಡೆದು ರೈತರ ಜಮೀನುಗಳಿಗೆ ತಲುಪುವಂತೆ ಸಮರ್ಪಕವಾಗಿ ನಿರ್ವಹಣೆ ಮಾಡಲಿ. ಇಲ್ಲವಾದಲ್ಲಿ ಮೊದಲೇ ಮಳೆ ಅವಕೃಪೆಯಿಂದ ಕಂಗಾಲಾಗಿ ಮುಂಗಾರು ಹಂಗಾಮಿನ ವಾಣಿಜ್ಯ ಬೆಳೆಗಳನ್ನು ಕಳೆದುಕೊಂಡು ಸಂಕಷ್ಟ ಸ್ಥಿತಿ ಎದುರಿಸುತ್ತಿರುವ ನಾವು ಹಿಂಗಾರು ಬೆಳೆಗಳಿಂದಲೂ ವಂಚಿತ ಆಗಬೇಕಾಗುತ್ತದೆ ಎಂಬುದು ತಾಲೂಕಿನ ರೈತರ ಅಳಲಾಗಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.