ಜಾನಪದ ಕಲೆ ನಶಿಸದಂತೆ ಎಚ್ಚರವಹಿಸಿ: ಶಿವಕುಮಾರ್‌


Team Udayavani, Nov 11, 2018, 5:07 PM IST

chikk.jpg

ಚಿಕ್ಕಮಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಟಿವಿ ಮತ್ತು ಸಿನೆಮಾ ಮಾಧ್ಯಮದಿಂದ ಜನಪದ ಕಲೆಗಳು ನಶಿಸದಂತೆ ಎಚ್ಚರವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಸಲಹೆ ಮಾಡಿದರು.

ಸಮೀಪದ ಅಂಬಳೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಂಯುಕ್ತವಾಗಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ತಮಟೆ ನುಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜನರ ಬಾಯಿಂದ ಬಾಯಿಗೆ ಬೆಳೆದು ಬಂದ ಜೀವಂತ ಕಲೆ ಜನಪದ. ಆಧುನಿಕತೆಯ ಶರವೇಗದಲ್ಲಿ ಮುನ್ನಡೆಯುತ್ತಿರುವ ಟಿವಿ ಮತ್ತು ಸಿನೆಮಾ ಜಗತ್ತಿನೊಂದಿಗೆ ಪೈಪೋಟಿ ನಡೆಸಬೇಕಾಗಿದೆ. ಜನರ ಬದುಕಿನ ಜೀವಂತ ಕಲೆಯಾಗಿರುವ ಜನಪದ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದರು. 

 ಅಧ್ಯಕ್ಷತೆ ವಹಿಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಅಶೋಕ ಮಾತನಾಡಿ, ನೆಲ, ಜಲ ಮತ್ತು ಜನ್ಮಕೊಟ್ಟ ತಾಯಿಋಣವನ್ನು ತೀರಿಸಲು ಈ ನೆಲದ ಜನರು ಕೆಲಸ ಮಾಡಬೇಕು ಎಂದು ಹೇಳಿದರು.

ತಮಟೆ ಕಲಾವಿದ ಎ.ಜೆ.ರಂಗಯ್ಯ ಅವರನ್ನು ಪರಿಚಯಿಸಿ ಮಾತನಾಡಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹಿರೇಮ ಗಳೂರು ಪುಟ್ಟಸ್ವಾಮಿ,ಸತತ 55 ವರ್ಷಗಳಿಂದ ತಮಟೆ ನುಡಿಸುವ ಮೂಲಕ ಕುಟುಂಬಕ್ಕೆ ಆಸರೆಯಾಗಿಕೊಂಡಿರುವ 65 ವರ್ಷದ ಎ.ಜೆ.ರಂಗಯ್ಯ ಅವರ ಕಲಾ ಸೇವೆ ಅಪರೂಪದ್ದಾಗಿದೆ.  ಅವರನ್ನು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ಗೌರವಿಸುತ್ತಿರುವುದು ಪರಿಷತ್‌ಗೆ ಗೌರವ ಬಂದಿದೆ ಎಂದು ತಿಳಿಸಿದರು.

ಅಶ್ವಿ‌ನಿ ದೇವತೆ ಎಂದೇ ಖ್ಯಾತಿ ಪಡೆದಿರುವ ಡಾ|ಎ.ಆರ್‌. ಕೃಷ್ಣಶಾಸ್ತ್ರಿ ಅವರ ಜನ್ಮಸ್ಥಳ ಅಂಬಳೆಯಲ್ಲಿ ಅವರ ಹೆಸರಿನಲ್ಲಿ ಭವನ ನಿರ್ಮಾಣಕ್ಕೆ ಸರ್ಕಾರ 1.4 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಭವನ ನಿರ್ಮಾಣಕಾರ್ಯ ನನೆಗುದಿಗೆ ಬಿದ್ದಿದೆ. ಜಿಲ್ಲಾಡಳಿತ ಗಮನಹಿಸಿ ಜನರ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.
 
ಕನ್ನಡ ಮತ್ತು ಸಂಸ್ಕೃತಿಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಎಂ.ಎಸ್‌.ಚಂದ್ರಪ್ಪ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಎ.ಟಿ.ಉಮೇಶ್‌, ಪಿಡಿಒ ಶಾಂತಾ ಮಾತನಾಡಿದರು. ಗ್ರಾಪಂ ಸದಸ್ಯ ಹರೀಶ್‌, ಲಕ್ಷ್ಮಣ ಗೌಡ, ಅಂಬೇಡ್ಕರ್‌ ಯುವಕ ಸಂಘ ಅಧ್ಯಕ್ಷ ಚಿದಾನಂದ್‌, ಉಪಾಧ್ಯಕ್ಷ ನವೀನ್‌ ಹಾಜರಿದ್ದರು. 

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.