“ಕಾಯಕ ಯೋಜನೆ’ಯಲ್ಲಿ ಮಹಿಳೆಯರಿಗೆ ಸಾಲ


Team Udayavani, Nov 12, 2018, 6:10 AM IST

bandeppa-kashempur-201812.jpg

ಬೀದರ: ಗ್ರಾಮೀಣ ಭಾಗದ ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕಾಭಿವೃದ್ಧಿಗೆ ಮುಂದಾಗಿರುವ ರಾಜ್ಯ ಸರ್ಕಾರ  “ಕಾಯಕ ಯೋಜನೆ’ ಜಾರಿಗೆ ಸಿದ್ಧತೆ ನಡೆಸಿದ್ದು, ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ ಮೊದಲ ವಾರದಲ್ಲಿ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಸಹಕಾರ ಇಲಾಖೆ ವ್ಯಾಪ್ತಿಗೆ ಒಳಪಡುವ ಯೋಜನೆ ಇದಾಗಿದ್ದು, ಕೌಶಲ್ಯ ಮತ್ತು ಉದ್ಯಮಶೀಲತೆ ಗುಣಮಟ್ಟ ವೃದ್ಧಿಸುವ ಗುರಿಯೊಂದಿಗೆ ಸರ್ಕಾರ ಕಾಯಕ ಯೋಜನೆ ಜಾರಿಗೊಳಿಸುತ್ತಿದೆ. ಸ್ವಸಹಾಯ ಸಂಘಗಳ ಬಲವರ್ಧನೆ ಹಾಗೂ ರಾಜ್ಯದ ಬಡ ಮಹಿಳೆಯರ ಬಾಳಲ್ಲಿ ಬೆಳಕು ಮೂಡಿಸುವ ಸಂಕಲ್ಪದೊಂದಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ಗ್ರಾಮೀಣ ಭಾಗದ ಮಹಿಳಾ ಸ್ವಸಹಾಯ ಸಂಘಗಳು ಸ್ವಯಂ ಉದ್ಯೋಗ ಪ್ರಾರಂಭಿಸಿ ಆರ್ಥಿಕವಾಗಿ ಬೆಳೆಯುವ ನಿಟ್ಟಿನಲ್ಲಿ ಸರ್ಕಾರ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲಿದೆ. ರಾಜ್ಯದ ಸುಮಾರು 3,000 ಸ್ವಸಹಾಯ ಸಂಘಗಳಿಗೆ ಸ್ವಯಂ ಉದ್ಯೋಗ ಪ್ರಾರಂಭಿಸಲು ಸಾಲ ನೀಡುವ ಗುರಿಯಿದೆ. ಬೆಂಗಳೂರಿನಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲ್ಲಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು ಒಂದು ಸಾವಿರ ಮಹಿಳಾ ಸದಸ್ಯರನ್ನು ಒಂದೆಡೆ ಸೇರಿಸಿ ಈ ಯೋಜನೆಗೆ ಚಾಲನೆ ನೀಡುವ ಉದ್ದೇಶವನ್ನು ಸಹಕಾರ ಇಲಾಖೆ ಹೊಂದಿದೆ.

ಬಡ್ಡಿ ರಹಿತ ಸಾಲ: ಸ್ವಸಹಾಯ ಸಂಘಗಳು ಸ್ವಯಂ ಉದ್ಯೋಗ ಪ್ರಾರಂಭಿಸಿ ಇತರರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡಬೇಕೆಂಬ ಉದ್ದೇಶದ ಹಿನ್ನೆಲೆಯಲ್ಲಿ 10 ಲಕ್ಷ ಸಾಲ ನೀಡಲಾಗುತ್ತಿದೆ. ಸಂಘಗಳು ಪಡೆಯುವ ತಲಾ 10 ಲಕ್ಷ ರೂ. ಸಾಲದ ಪೈಕಿ 5 ಲಕ್ಷ ಸಾಲಕ್ಕೆ ಯಾವುದೇ ಬಡ್ಡಿಯಿಲ್ಲ. ಇತರೆ 5 ಲಕ್ಷ ಸಾಲಕ್ಕೆ ಪ್ರತಿ ವರ್ಷ ಶೇ.4ರಷ್ಟು ಬಡ್ಡಿಯನ್ನು ಸಂಘಗಳು ಪಾವತಿಸಬೇಕು. ಕಾಯಕವೇ ಕೈಲಾಸ ಎಂದು ಬಸವಣ್ಣನವರು ಸಾರಿದ್ದು, ಅವರ ನುಡಿಯಂತೆ  “ಕಾಯಕ ಯೋಜನೆ’ ಎಂಬ  ಹೆಸರು ಇರಿಸಲಾಗಿದೆ  ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.

ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಯಾವ ಉದ್ಯೋಗ ಮಾಡಬಹುದು ಎಂಬುದರ ಕುರಿತು ಸಂಘದ ಸದಸ್ಯರೊಂದಿಗೆ ಚಿಂತನೆ ನಡೆಸಬೇಕು. ಸೂಕ್ತ ಕ್ರಿಯಾ ಯೋಜನೆ ತಯಾರಿಸಿಕೊಳ್ಳಬೇಕು. ಸಂಘಗಳು ತಯಾರಿಸುವ ವಸ್ತುಗಳನ್ನು ಸರ್ಕಾರದಿಂದ ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕೂಡ ಇಲಾಖೆಯಿಂದ ಮಾಡುವ ಗುರಿಯಿದೆ.

ಮುಖ್ಯಮಂತ್ರಿಗಳು ಸಹಕಾರ ಇಲಾಖೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕೆಲಸ ಮಾಡಲು ಉತ್ಸಾಹ ತುಂಬುತ್ತಿದ್ದಾರೆ. ಆರ್ಥಿಕ ಸಹಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಹೊಸ ಯೋಜನೆಗಳನ್ನು ರೂಪಿಸಿ ಜನರ ಕಷ್ಟಗಳಿಗೆ ನೆರವಾಗುವ ಕೆಲಸ ಮಾಡುತ್ತಿದ್ದೇವೆ. ಕಾಯಕ ಯೋಜನೆಯಿಂದ ಸಾವಿರಾರು ಮಹಿಳೆಯರ ಬದುಕು ಹಸನಾಗಲಿದೆ.
– ಬಂಡೆಪ್ಪ ಖಾಶೆಂಪೂರ, ಸಹಕಾರ ಸಚಿವ

– ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.