ಜಯಂತಿ ಹೆಸರಲ್ಲಿ ಕಚ್ಚಾಟ ಸಲ್ಲದು


Team Udayavani, Nov 12, 2018, 11:55 AM IST

jayanti.jpg

ಬೆಂಗಳೂರು: ಮಹನೀಯರ ಜಯಂತಿಗಳ ಆಚರಣೆಯ ಹೆಸರಲ್ಲಿ ಹುಚ್ಚಾಟ-ಹುಡುಗಾಟ ನಡೆಸಿ ಸಮಾಜದಲ್ಲಿ ಬೀದಿ ಜಗಳಕ್ಕೆ ಅವಕಾಶ ಮಾಡಿಕೊಡುವುದನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಹೇಳಿದರು.

ದಿಶಾ ಚಾರಿಟೇಬಲ್‌ ಟ್ರಸ್ಟ್‌ ಹಾಗೂ ನವ್ಯ ನಾಟ್ಯ ಸಂಗಮ ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜಂಟಿಯಾಗಿ ಆಯೋಜಿಸಿದ್ದ “ಕನ್ನಡ ನುಡಿ ಹಬ್ಬ’ ಹಾಗೂ “ಟಿಪ್ಪು ಸುಲ್ತಾನ್‌ ಪ್ರಶಸ್ತಿ ಪ್ರದಾನ’ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇಡ ವಿಷಯಗಳಿಗೆ ಸರ್ಕಾರಗಳು ಜನರ ಬಾಯಿಗೆ ಬೀಳಬಾರದು ಎಂದು ತಿಳಿಸಿದರು.

ಏಕ ಅಥವಾ ಸಮ್ಮಿಶ್ರ ಯಾವುದೇ ಸರ್ಕಾರ ಆಗಿರಲಿ. ಜಯಂತಿಗಳ ಆಚರಣೆ ವಿಚಾರದಲ್ಲಿ ಒಂದು ತೀರ್ಮಾನ ತೆಗೆದುಕೊಂಡರೆ ಅದಕ್ಕೆ ಬದ್ಧರಾಗಬೇಕು. ಎಲ್ಲ ಮಂತ್ರಿ, ಶಾಸಕರು ಒಟ್ಟಾಗಿ ಮಾರ್ಯದೆ, ಘನತೆಯಿಂದ ನಡೆದುಕೊಳ್ಳಬೇಕು. ಯಾರೇ ವಿರೋಧ ಮಾಡಿದರೂ ಟಿಪ್ಪು ಜಯಂತಿ ಆಚರಿಸಿಯೇ ಸಿದ್ಧ ಎಂದು ಸರ್ಕಾರ ಹೇಳಿತ್ತು.

ಆದರೆ, ಕಾರ್ಯಕ್ರಮದಲ್ಲಿ ಅವರು ಬಂದರೆ, ಇವರು ಬಂದಿಲ್ಲ, ಇವರು ಹೋದರೆ, ಅವರು ವಿರೋಧ ಮಾಡಿದರು. ಈ ನಡವಳಿಕೆ ಜಯಂತಿ ಆಚರಿಸಿದ ಮಹನೀಯರಿಗೆ ಅಪಚಾರ ಮಾಡಿದಂತೆ. ಯಾರ ಪ್ರತಿಷ್ಠೆಗೆ ಈ ರೀತಿ ಮಾಡಿದರು ಗೊತ್ತಿಲ್ಲ. ಟಿಪ್ಪು ಜಯಂತಿಗೆ ವಿರೋಧ ಮಾಡಿದ ಬಿಜೆಪಿ, ಅಂತರ ಕಾಯ್ದುಕೊಂಡ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳ ವಿರುದ್ಧ ಹರಿಹಾಯ್ದರು.

ಮೇಯರ್‌ ಗಂಗಾಂಬಿಕಾ ಮಲ್ಲಿಕಾರ್ಜುನ್‌, ವಿಧಾನಪರಿಷತ್‌ ಸದಸ್ಯ ಎಂ.ಸಿ. ವೇಣುಗೋಪಾಲ್‌, ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಂಸದ ಸಿ. ನಾರಾಯಣಸ್ವಾಮಿ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ವೈ. ಸಯೀದ್‌ ಅಹ್ಮದ್‌, ದಿಶಾ ಚಾರಿಟಟಬಲ್‌ ಟ್ರಸ್ಟ್‌ ಅಧ್ಯಕ್ಷ ಇರ್ಷಾದ್‌ ಅಹ್ಮದ್‌ ಶೇಕ್‌, ನವ ನಾಟ್ಯ ಸಂಗಮದ ಡಿ. ಶ್ರೀನಾಥ್‌ ಮತ್ತಿತರರು ಇದ್ದರು. 

ಟಿಪ್ಪು ಉತ್ತಮ ಆಡಳಿತಗಾರ: “ಟಿಪ್ಪು ದೇಶಭಕ್ತ, ಉತ್ತಮ ಆಡಳಿತಗಾರ. ಅಧಿಕಾರದಲ್ಲಿದ್ದಾಗ ಬೇಕಾಗಿದ್ದ ಟಿಪ್ಪು ಈಗ ಬಿಜೆಪಿಗೆ ಬೇಡವಾಗಿದ್ದಾನೆ. ಅವರದು ಎರಡು ನಾಲಿಗೆ. ಕುರಾನ್‌ ದೇಶನಿಷ್ಠೆ ಹೇಳಿಕೊಡುತ್ತದೆ. ಈ ದೇಶ ನಮ್ಮದು ಎಂಬ ಭಾವನೆ ಮುಸ್ಲಿಮರಲ್ಲಿ ಬರಬೇಕು.

ಮಸೀದಿಗಳಲ್ಲೇ ಕಾಲ ಕಳೆದರೆ ಆಗದು, ಸಮಾಜದ ಮುಖ್ಯವಾಹಿನಿಗೆ ಬರಬೇಕು. ಹಿಂದುತ್ವದ ಬಗ್ಗೆ ಮಾತನಾಡುವವರು ಹಿಡಿಯಷ್ಟು ಜನ. ಉಳಿದವರೆಲ್ಲ ಬಹುಸಂಖ್ಯಾತರು ನಿಮ್ಮೊಂದಿಗೆ ಇದ್ದಾರೆ. ನಿಮಗೆ ಕೊಲ್ಲಬೇಕಾದರೆ ಮೊದಲು ನಮ್ಮನ್ನು ಕೊಲ್ಲಬೇಕು, ನಮ್ಮ ರಕ್ತ ದಾಟಿ ನಿಮ್ಮ ಬಳಿ ಬರಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.