ಬೆಳಗಾವಿಯಲ್ಲೇ ಖಾದಿ ಮಹತ್ವ ಸಾರಿದ್ದರು ಗಾಂಧೀಜಿ


Team Udayavani, Nov 12, 2018, 4:54 PM IST

12-november-18.gif

ನರಗುಂದ: ಗಾಂಧೀಜಿ ಸ್ವದೇಶಿ ವಸ್ತುಗಳನ್ನು ಬಳಸಿ ವಿದೇಶಿ ವಸ್ತುಗಳನ್ನು ನಿರ್ಮೂಲನೆ ಮಾಡಿ ಎಂದು ಪ್ರಥಮ ಬಾರಿಗೆ ಕರೆ ಕೊಟ್ಟು ಖಾದಿ ವಸ್ತ್ರಗಳಿಗೆ ನಾಂದಿ ಹಾಡಿದ್ದು ಕರ್ನಾಟಕದ ಬೆಳಗಾವಿಯಲ್ಲೇ ಎಂಬುದು ಕನ್ನಡಿಗರಾದ ನಾವೆಲ್ಲ ಹೆಮ್ಮೆಪಡುವಂತದ್ದು ಎಂದು ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ಹೇಳಿದರು.

ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ತಾಲೂಕಿನ ಚಿಕ್ಕನರಗುಂದ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡೋತ್ಸವ-2018ರ ಉಪನ್ಯಾಸ ಮಾಲೆ-2ರ ಕಾರ್ಯಕ್ರಮದಲ್ಲಿ ಕರ್ನಾಟಕದಲ್ಲಿ ಗಾಂಧಿ ಹೆಜ್ಜೆಗಳು ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಏಕೀಕರಣ ಹೋರಾಟಗಾರ ಅಂದಾನಪ್ಪ ದೊಡಮೇಟಿ ಅವರು 1934ರಲ್ಲಿ ಮಹಾತ್ಮಾ ಗಾಂಧೀಜಿ ಅವರನ್ನು ಜಕ್ಕಲಿಗೆ ಕರೆಯಿಸಿ 1200 ಚಕ್ಕಡಿಗಳ ಮೂಲಕ ಇಪ್ಪತ್ತು ಸಾವಿರ ಜನರನ್ನು ಕೂಡಿಸಿ ಕರ್ನಾಟಕದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದರು. ಅವತ್ತಿನ ಕಾಲದಲ್ಲಿ ಗಾಂಧೀಜಿ ಅಸ್ಪೃಶ್ಯತಾ ನಿವಾರಣಾ ಚಳವಳಿಗೆ 1000 ರೂ. ದೇಣಿಗೆ ನೀಡಿ ಚಳವಳಿಗೆ ಪುಷ್ಠಿ ನೀಡಿದ್ದು ಅವಿಸ್ಮರಣೀಯ ಎಂದು ಹೇಳಿದರು. ಬೆಂಗಳೂರಿನ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿಗೆ ಭೇಟಿ ನೀಡಿದ ಗಾಂಧೀಜಿ ಸಂದರ್ಶಕರ ಪುಸ್ತಕದಲ್ಲಿ ರೈತ ಎಂದು ಬರೆದುಕೊಂಡದ್ದು ಅವರು ರೈತರ ಮೇಲೆ ಇಟ್ಟಿದ್ದ ಗೌರವ ಎತ್ತಿ ತೋರಿಸುತ್ತದೆ ಎಂದು ಚನ್ನಪ್ಪ ಅಂಗಡಿ ಹೇಳಿದರು. 

ಸಾನ್ನಿಧ್ಯ ವಹಿಸಿದ್ದ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಸ್ವಾಮಿಗಳು ಮಾತನಾಡಿ, ಗಾಂಧೀಜಿ ರಾಷ್ಟ್ರದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಕರ್ನಾಟಕದಲ್ಲಿ ಎಂಬುದು ಹೆಮ್ಮೆಯ ವಿಷಯ. ಅವರು ಸಾವಿರಾರು ವರ್ಷಗಳ ಹಿಂದೆಯೇ ಸಮಾನತೆ ಬೀಜ ಬಿತ್ತಿದ ಕನ್ನಡ ನಾಡಿನ ಬಸವಾದಿ ಶಿವಶರಣರನ್ನು ಹೊಗಳಿದ್ದನ್ನು ಸ್ಮರಿಸಿದರು. ಅವರ ಪ್ರಭಾವದಿಂದ ಹಡೇìಕರ ಮಂಜಪ್ಪ ಅವರು ಪತ್ರಿಕೆ ಮೂಲಕ ಸ್ವಾತಂತ್ರ್ಯ  ಚಳವಳಿ ಜಾಗೃತಿ ಮೂಡಿಸಿ ಕರ್ನಾಟಕದ ಗಾಂಧೀಜಿ ಎಂದು ಪ್ರಸಿದ್ದಿಯಾದವರು. ಹೀಗಾಗಿ ಕರ್ನಾಟಕಕ್ಕೂ ಗಾಂಧೀಜಿ ಅವರಿಗೂ ಅವಿನಾಭಾವ ಸಂಬಂಧವಿತ್ತು ಎಂದು ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಎಂ.ಪಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಪಿ.ಸಿ. ಕಲಹಾಳ, ಕ.ಸಾ.ಮ.ಸ ವೇದಿಕೆ ಸದಸ್ಯ ಸೋಮು ಹೊಂಗಲ, ಭೀಮಸಿ ಆವಿನ ಇದ್ದರು. ಪ್ರೊ| ಆರ್‌.ಬಿ. ಚಿನಿವಾಲರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಬೋಸ್ಲೆ ಸ್ವಾಗತಿಸಿ, ಎಂ.ಡಿ. ಚಲವಾದಿ ವಂದಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.