ಧರ್ಮ ರಕ್ಷಣೆಗೆ ಮಠಾಧಿಧೀಶರು ಒಂದಾಗಲಿ


Team Udayavani, Nov 12, 2018, 5:08 PM IST

dvg-3.jpg

ಹರಪನಹಳ್ಳಿ: ವಿಜ್ಞಾನ, ರಾಜಕೀಯದ ಲಾಭಕ್ಕಾಗಿ ಧರ್ಮ ನಾಶದ ವ್ಯವಸ್ಥಿತ ಸಂಚು ನಡೆಯುತ್ತಿದೆ. ಆದ್ದರಿಂದ ಧರ್ಮದ ರಕ್ಷಣೆಗೆ ಮಠಾಧಿಧೀಶರು ಒಂದಾಗಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠಾಧ್ಯಕ್ಷ ಡಾ| ಪ್ರಸನ್ನ ರೇಣುಕಾ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.

ತಾಲೂಕಿನ ಸಿಂಗ್ರಿಹಳ್ಳಿ ಗ್ರಾಮದಲ್ಲಿ ಭಾನುವಾರ ಶಿವ ಗಣಪತಿ ದೇವಾಲಯದ ಉದ್ಘಾಟನೆ, ಸಾಮೂಹಿಕ ವಿವಾಹ ಮತ್ತು ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

ವೈಚಾರಿಕತೆ ಹಾಗೂ ಧಾರ್ಮಿಕ ಸುಧಾರಣೆಯ ಹೆಸರಿನಲ್ಲಿ ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರಲಾಗುತ್ತಿದೆ. ಇಂಥವರ ಬಗ್ಗೆ
ಉದಾಸೀನ ಮಾಡಿದರೆ ಧರ್ಮ ಅವನತಿಯತ್ತ ಸಾಗುತ್ತದೆ. ವೀರಶೈವ ಧರ್ಮಕ್ಕೆ ಜಾತ್ಯತೀತವಾಗಿ ಎಲ್ಲಾ ಸಮುದಾಯಕ್ಕೆ ಮಾರ್ಗದರ್ಶನ, ಸಂಸ್ಕಾರ ನೀಡಿರುವ ಹೆಗ್ಗಳಿಕೆಯಿದೆ.  ಭಕ್ತರು ನಿಷ್ಠೆ, ಸಹಿಷ್ಣತೆ, ರಾಷ್ಟ್ರಾಭಿಮಾನ ಮೈಗೂಡಿಸಿಕೊಂಡು ನಡೆದುಕೊಳ್ಳುವುದು ಅವಶ್ಯಕವಾಗಿದೆ. ಧರ್ಮವು ಕೇವಲ ವೇದಿಕೆ ಸಮಾರಂಭಕ್ಕೆ ಸೀಮಿತವಾಗಿಲ್ಲ, ಧಾರ್ಮಿಕ ನುಡಿಯನ್ನು ಭಕ್ತರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಉಜ್ಜಯಿನಿ ಪೀಠಾಧ್ಯಕ್ಷ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೆ ನ್ಯಾಯಾಲಯಗಳು ಇಲ್ಲದ ಸಮಯದಲ್ಲಿ ದೇವಾಲಯಗಳೇ ನ್ಯಾಯಾಲಯಗಳಾಗಿದ್ದವು. ಅಪರಾಧಗಳನ್ನು ಕಡಿಮೆ ಮಾಡುವಂತಹ ಸಾಮರ್ಥ್ಯ ದೇವಸ್ಥಾನಗಳಿಗಿದೆ.

ದೇವಾಲಯಗಳು ಭಯ, ಭಕ್ತಿ ಮೂಲಕ ಮನುಷ್ಯರ ಮನಪರಿವರ್ತನೆ ಮಾಡುವ ಕೇಂದ್ರಗಳಾಗಿವೆ ಎಂದರು. ಭಾರತ ಮಂದಿರಗಳ ದೇಶವಾಗಿದ್ದು, ಇಲ್ಲಿ  ವಸ್ಥಾನಗಳಿಲ್ಲದ ಒಂದು ಗ್ರಾಮವೂ ಕಾಣಿಸುವುದಿಲ್ಲ. ವಿದೇಶಗರು ತಮ್ಮ ದೇಹವನ್ನು ಪ್ರೀತಿಸುತ್ತಾರೆ. ಆದರೆ ಭಾರತದಲ್ಲಿ ದೇಹಕ್ಕಿಂತ ಹೆಚ್ಚಾಗಿ ದೇವರನ್ನು ಪ್ರೀತಿಸುತ್ತಾರೆ. ತಾವು ದುಡಿದ ಹಣವನ್ನು ದೇವರಿಗೆ ದಾನ ಮಾಡುವ ಸಂಸ್ಕೃತಿ, ಪರಂಪರೆ ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ತಿಳಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ್‌ ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ನವ ದಂಪತಿಗಳಿಗೆ ಮಠಾಧೀಶರ ಆಶೀರ್ವಾದ ಸಿಗುವುದರಿಂದ ಯೋಗ ಪ್ರಾಪ್ತಿಯಾಗುತ್ತದೆ. ದೇವಸ್ಥಾನ ಉದ್ಘಾಟನೆ ಮೂಲಕ ನವ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳು ನಿಜಕ್ಕೂ ಧನ್ಯರು ಎಂದರು.

ಶ್ರೀಗಳ ಸಾನ್ನಿಧ್ಯದಲ್ಲಿ 7 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ನಂದಿಹಳ್ಳಿ ಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿಂಗ್ರಿಹಳ್ಳಿ ಕೊಟ್ರೇಶ್ವರ ಸ್ವಾಮೀಜಿ, ನೀಲಗುಂದ ಚನ್ನಬಸವ ಸ್ವಾಮೀಜಿ, ಐನಹಳ್ಳಿ ಮಹೇಶ್ವರ ಸ್ವಾಮೀಜಿ, ಲೆಕ್ಕದೇವರ ಮಠ ಬಸವರಾಜಪ್ಪ, ಚಿರಸ್ತಹಳ್ಳಿ ಮಲ್ಲಿಕಾರ್ಜುನ್‌ ಕಲ್ಮಠ, ಗ್ರಾ.ಪಂ ಅಧ್ಯಕ್ಷ ಮಂಜ್ಯನಾಯ್ಕ, ದೇವಸ್ಥಾನ ಸಮಿತಿ ಜಯಪ್ರಕಾಶ್‌ ಬಣಕಾರ್‌, ದೇವೇಂದ್ರಪ್ಪ, ಕೋಟ್ರಯ್ಯಸ್ವಾಮಿ, ಬಸವರಾಜಪ್ಪ, ವೀರಯ್ಯ, ಸೋಮಪ್ಪ, ವಿರಭದ್ರಪ್ಪ, ಬಸಪ್ಪ, ಸಿದ್ದಲಿಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.