ಕುಂದಾಪುರ-ಆನಗಳ್ಳಿ-ಬಸ್ರೂರು ಮಾರ್ಗಕ್ಕಿಲ್ಲ ಸಾರ್ವಜನಿಕ ಸಂಚಾರ ಸಾರಿಗೆ


Team Udayavani, Nov 13, 2018, 2:45 AM IST

anagalli-road-12-11.jpg

ಆನಗಳ್ಳಿ: ಎರಡು ಪ್ರಮುಖ ಪಟ್ಟಣಗಳಾದ ಬಸ್ರೂರು ಹಾಗೂ ಕುಂದಾಪುರವನ್ನು ಬೆಸೆಯುವ ಹತ್ತಿರದ ಮಾರ್ಗವಾದ ಬಸ್ರೂರು – ಆನಗಳ್ಳಿ – ಸಂಗಮ್‌ ರಸ್ತೆಯು ಕಿರಿದಾಗಿರುವುದು ಹಾಗೂ ಹೊಂಡ – ಗುಂಡಿಗಳಿಂದಾಗಿ ಬಸ್‌ ಆರಂಭಕ್ಕೆ ತೊಡಕಾಗಿ ಪರಿಣಮಿಸಿದೆ.

ಬಹುದಿನಗಳ ಬೇಡಿಕೆ
ಕುಂದಾಪುರದಿಂದ ಬಸ್ರೂರಿಗೆ ತೆರಳಬೇಕಾದರೆ ಆನಗಳ್ಳಿ ಹತ್ತಿರದ ಮಾರ್ಗವಾಗಿದೆ. ಅದರಲ್ಲೂ ಆನಗಳ್ಳಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು, ಈ ಗ್ರಾಮ ಎರಡೂ ಪ್ರಮುಖ ಪಟ್ಟಣಗಳಿಗೆ ಸಮಾನ ಅಂತರದಲ್ಲಿದೆ. ಬಸ್‌ ವ್ಯವಸ್ಥೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಇಲ್ಲಿನ ಇಕ್ಕಟ್ಟಾದ ರಸ್ತೆಯೇ ಸಮಸ್ಯೆಯಾಗಿದೆ.

ಹದಗೆಟ್ಟ ರಸ್ತೆ
ಇನ್ನೂ ಈ ರಸ್ತೆ ಕೂಡ ಸಂಪೂರ್ಣ ಹದಗೆಟ್ಟು ಹೋಗಿದ್ದು, ಹೊಂಡ – ಗುಂಡಿಗಳಿಂದ ಕೂಡಿದೆ. ಕಾರಣ ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಸಮಸ್ಯೆ
ಆನಗಳ್ಳಿಯಿಂದ ಬಸ್ರೂರು ಹಾಗೂ ಕುಂದಾಪುರ ಪೇಟೆಗೆ ತೆರಳುವ ಶಾಲಾ- ಕಾಲೇಜು ವಿದ್ಯಾರ್ಥಿಗಳು ನಡೆದುಕೊಂಡು, ರಿಕ್ಷಾ ಅಥವಾ ಇನ್ನಿತರ ವಾಹನಗಳ ಮೂಲಕವೇ ತೆರಳ ಬೇಕಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು 4-5 ಕಿ.ಮೀ. ನಡೆದುಕೊಂಡೇ ಕಾಲೇಜಿಗೆ ತೆರಳುತ್ತಾರೆ. ಕುಂದಾಪುರ – ಸಂಗಮ್‌ – ಆನಗಳ್ಳಿ- ಬಸ್ರೂರು ಮಾರ್ಗವಾಗಿ ಬಸ್‌ ಆರಂಭಿಸಿದರೆ ನೂರಾರು ವಿದ್ಯಾರ್ಥಿಗಳ ಜತೆಗೆ ನೂರಾರು ಮಂದಿಗೆ ಪ್ರಯೋಜನವಾಗಲಿದೆ. 

ಹತ್ತಿರದ ಮಾರ್ಗ
ಬಸ್ರೂರಿನಿಂದ ಕುಂದಾಪುರಕ್ಕೆ ಮೂಡ್ಲಕಟ್ಟೆ – ಕೋಣಿ ಮೂಲಕವಾಗಿ ರಾಜ್ಯ ಹೆದ್ದಾರಿಯಲ್ಲಿ ಸುಮಾರು 8 ಕಿ.ಮೀ. ದೂರವಿದೆ. ಅದೇ ಆನಗಳ್ಳಿ ಮಾರ್ಗವಾಗಿ ಕೇವಲ 5 ಕಿ.ಮೀ. ಅಷ್ಟೇ ದೂರವಾಗಲಿದೆ. ಅಂದರೆ ಸುಮಾರು 3 ಕಿ.ಮೀ. ಹತ್ತಿರವಾಗಲಿದೆ. ಅದಲ್ಲದೆ ಬಸ್ರೂರಿನಿಂದ ತಲ್ಲೂರು, ಹೆಮ್ಮಾಡಿ, ಬೈಂದೂರು ಕಡೆಗೆ ತೆರಳುವುದಾದರೂ ಇದು ಹತ್ತಿರದ ಮಾರ್ಗ. 

ಜಿ.ಪಂ. ಸಭೆಯಲ್ಲಿ ಪ್ರಸ್ತಾಪ
ಆನಗಳ್ಳಿ ಜನರಿಗೆ ಕಿರಿದಾದ ರಸ್ತೆಯಿಂದಾಗಿ ಬಸ್‌ ಆರಂಭಕ್ಕೆ ತೊಂದರೆಯಾಗುತ್ತಿರುವುದರ ಕುರಿತು ನನ್ನ ಗಮನಕ್ಕೆ ಬಂದಿದೆ. ಈ ವಿಚಾರವನ್ನು ನಾನು ಮುಂದಿನ ಜಿಲ್ಲಾ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿ, ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು. 
– ಲಕ್ಷ್ಮೀ ಮಂಜು ಬಿಲ್ಲವ,  ಸ್ಥಳೀಯ ಜಿ.ಪಂ. ಸದಸ್ಯರು

ಬಸ್‌ ಇಲ್ಲದೆ ಸಮಸ್ಯೆ
ಈ ಮಾರ್ಗವಾಗಿ ಬಸ್‌ ಆರಂಭಿಸಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿದೆ. ಕಿರಿದಾದ ಸೇತುವೆಯಿತ್ತು. ಅದನ್ನು ಕೂಡ 2 ವರ್ಷಗಳ ಹಿಂದೆ ಅಗಲೀಕರಣಗೊಳಿಸಲಾಗಿದೆ. ಆದರೆ ಬಸ್ರೂರಿನಿಂದ ಆನಗಳ್ಳಿ, ಕುಂದಾಪುರದವರೆಗೂ ಇಕ್ಕಟ್ಟಾದ ರಸ್ತೆ ಇರುವುದರಿಂದ ಬಸ್‌ ಆರಂಭಕ್ಕೆ ಸಮಸ್ಯೆಯಾಗಿದೆ. ಆನಗಳ್ಳಿಯ ಜನರ ಈ ಸಮಸ್ಯೆಯನ್ನು ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿದಲ್ಲಿ ರಸ್ತೆ ಅಗಲೀಕರಣವಾಗಬಹುದು. ಆಗ ಬಸ್‌ ಸಂಚಾರವೂ ಆರಂಭವಾಗುತ್ತದೆ.
– ಆನಂದ ಬಳ್ಕೂರು, ನಿತ್ಯ ಪ್ರಯಾಣಿಕರು

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.