ಪತ್ರಕರ್ತ ಸಂತೋಷ್ ತಮ್ಮಯ್ಯ ಸೆರೆ; ಜಾಮೀನಿನ ಮೇಲೆ ಬಿಡುಗಡೆ
Team Udayavani, Nov 14, 2018, 7:18 AM IST
ಮಡಿಕೇರಿ: ಇಸ್ಲಾಂ ಧರ್ಮ ಹಾಗೂ ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದಡಿ ಅಂಕಣಕಾರ, ಪತ್ರಕರ್ತ ಮಾಣಿಪಂಡ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪ ಪೊಲೀಸರು ಮಂಗಳವಾರ ಬಂಧಿಸಿ, ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ, ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ.
ನ.5ರಂದು ಗೋಣಿಕೊಪ್ಪದಲ್ಲಿ ಪ್ರಜ್ಞಾ ಕಾವೇರಿ ಸಂಘಟನೆ ಆಯೋಜಿಸಿದ್ದ “ಟಿಪ್ಪು ಕರಾಳ ಮುಖಗಳ ಅನಾವರಣ’ ಕಾರ್ಯಕ್ರಮದಲ್ಲಿ ಸಂತೋಷ್ ಅವರು ಇಸ್ಲಾಂ ಧರ್ಮ ಹಾಗೂ ಪ್ರವಾದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಸ್ಥಳೀಯ ಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು. ಈ ವರದಿಯನ್ನಾಧರಿಸಿ ಸಿದ್ದಾಪುರದ ಅಸ್ಕರ್ ಪೊಲೀಸರಿಗೆ ದೂರು ನೀಡಲಾಗಿತ್ತು. ಸಂತೋಷ್ ಅವರನ್ನು ಬಂಧಿಸಬೇಕೆಂಬ ಒತ್ತಾಯ ಜಿಲ್ಲೆಯ ಮುಸ್ಲಿಂ ಸಮುದಾಯದಿಂದ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೋ ಣಿಕೊಪ್ಪ ಪೊಲೀಸರು ಮಂಗಳವಾರ ಅವರನ್ನು ಅವರ ಪತ್ನಿಯ ತವರು ಮನೆ ತುಮಕೂರಿನ ಮಧುಗಿರಿಯಲ್ಲಿ ಬಂಧಿಸಿ, ಮಧ್ಯಾಹ್ನ ಪೊನ್ನಂಪೇಟೆ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಬಳಿಕ, ಜಾಮೀನಿನ ಮೇಲೆ ಅವರು ಬಿಡುಗಡೆ ಹೊಂದಿದ್ದಾರೆ. ಈ ಮಧ್ಯೆ, ಸಂತೋಷ್ ಬಂಧನ ವಿರೋಧಿಸಿ ಹಿಂದೂಪರ ಸಂಘಟನೆಗಳು ಮಂಗಳವಾರ ಗೋಣಿಕೊಪ್ಪದಲ್ಲಿ ಪ್ರತಿಭಟನೆ ನಡೆಸಿದವು. ಪಟ್ಟಣದಲ್ಲಿ ಕೆಲಕಾಲ ಬಂದ್ ಆಚರಿಸಲಾಯಿತು. ಸಂತೋಷ್ ಅವರನ್ನು ವೈದ್ಯಕೀಯ ಪರೀಕ್ಷೆ ಹಾಗೂ ನ್ಯಾಯಾಲಯಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಸಂಘಟನೆಗಳ ಕಾರ್ಯಕರ್ತರು ಸಂತೋಷ್ ಪರ ಘೋಷಣೆ ಕೂಗಿದರು. ಇದೇ ವೇಳೆ, ಪ್ರವಾದಿಗೆ ಸಂತೋಷ್ ಅಗೌರವ ತೋರಿದ್ದಾರೆಂದು ಆರೋಪಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಮಂಗಳವಾರ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಈ ನಡುವೆ, ಜನಾಂಗೀಯ ನಿಂದನೆ ಮಾಡಿರುವ ಆಸಿಫ್ ಎಂಬಾತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಕೊಡಗು ಬಂದ್ಗೆ ಹಿಂದೂ ಸುರಕ್ಷಾ ವೇದಿಕೆ ಕರೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ