ಢಾಕಾ ಟೆಸ್ಟ್‌: ಬಾಂಗ್ಲಾದೇಶ ಮೇಲುಗೈ


Team Udayavani, Nov 14, 2018, 8:27 AM IST

x-49.jpg

ಢಾಕಾ: ಆತಿಥೇಯ ಬಾಂಗ್ಲಾದೇಶ ವಿರುದ್ಧ ಢಾಕಾದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ನಲ್ಲಿ ಜಿಂಬಾಬ್ವೆ ಹಿನ್ನಡೆ ಅನುಭವಿಸಿದೆ. ಬಾಂಗ್ಲಾದ 7 ವಿಕೆಟಿಗೆ 522 ಡಿಕ್ಲೇರ್ಡ್ ಮೊತ್ತಕ್ಕೆ ಉತ್ತರವಾಗಿ ಜಿಂಬಾಬ್ವೆ ಮೂರನೇ ದಿನದಾಟದ ಅಂತ್ಯಕ್ಕೆ 304 ರನ್‌ ಗಳಿಸಿ ಆಲೌಟಾಗಿದೆ. ಕೊನೆಯ ಆಟಗಾರ ಗಾಯದ ಸಮಸ್ಯೆಯಿಂದ ಬ್ಯಾಟಿಂಗಿಗೆ ಬರಲಿಲ್ಲ. ಇದರಿಂದಾಗಿ ಜಿಂಬಾಬ್ವೆ ಮೊದಲ ಇನ್ನಿಂಗ್ಸ್‌ನಲ್ಲಿ  218 ರನ್‌ ಹಿನ್ನಡೆ ಅನುಭವಿಸಿದೆೆ. ಇನ್ನೆರಡು ದಿನಗಳ ಆಟ ಬಾಕಿ ಉಳಿದಿದ್ದು ಬಾಂಗ್ಲಾ ಗೆಲುವಿನ ನಿರೀಕ್ಷೆಯಲ್ಲಿದೆ.

ಬ್ರೆಂಡನ್‌ ಟಯ್ಲರ್‌, ಪೀಟರ್‌ ಮೂರ್‌ ಅವರ ಜವಾಬ್ದಾರಿಯ ಆಟದಿಂದಾಗಿ ಜಿಂಬಾಬ್ವೆ ಹೀನಾಯ ನಿರ್ವಹಣೆಯಿಂದ ಪಾರಾಗಿದೆ. ಟಯ್ಲರ್‌ ಮತ್ತು ಮೂರ್‌ 6ನೇ ವಿಕೆಟಿಗೆ 139 ರನ್ನುಗಳ ಜತೆಯಾಟ ನಡೆಸಿದ್ದರಿಂದ ಜಿಂಬಾಬ್ವೆ ಹೋರಾಟ ನಡೆಸುವುದು ಸಾಧ್ಯವಾಗಿದೆ. 131 ರನ್ನಿಗೆ 5 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದ್ದ ತಂಡವನ್ನು ಟಯ್ಲರ್‌ ಮತ್ತು ಮೂರ್‌ ಮೇಲಕ್ಕೆತ್ತಿದ್ದರು. ಟಯ್ಲರ್‌ ಶತಕ ಸಿಡಿಸಿ ಸಂಭ್ರಮಿಸಿದರೆ ಮೂರ್‌ 83 ರನ್ನಿಗೆ ಆಟ ಮುಗಿಸಿದರು. ಇವರಿಬ್ಬರು 20 ರನ್‌ ಅಂತರದಲ್ಲಿ ಪೆವಿಲಿಯನ್‌ ಸೇರಿದ್ದರಿಂದ ಜಿಂಬಾಬ್ವೆ ಮತ್ತೆ ಸಂಕಷ್ಟಕ್ಕೆ ಬಿದ್ದಿದೆ. 

ಜಿಂಬಾಬ್ವೆಗೆ ಪ್ರಬಲ ಹೊಡೆತ ನೀಡಿದವರು ತೈಜುಲ್‌ ಇಸ್ಲಾಮ್‌. ನಿರಂತರ ದಾಳಿ ನಡೆಸಿದ ಅವರು 5 ವಿಕೆಟ್‌ ಕಿತ್ತು ಬಾಂಗ್ಲಾ ಮೇಲುಗೈ ಸಾಧಿಸುವಂತೆ ಮಾಡಿದರು. ಅವರು 107 ರನ್ನಿಗೆ 5 ವಿಕೆಟ್‌ ಹಾರಿಸಿದ್ದಾರೆ.  ಈ ಮೊದಲು ಬಾಂಗ್ಲಾ ಮುಶಿಕರ್‌ ರಹೀಂ ಅವರ ದ್ವಿಶತಕ (219 ಔಟಾಗದೆ) ಮತ್ತು ಮೊಮಿನುಲ್‌ ಹಕ್‌ (161) ಅವರ ಶತಕದ ನೆರವಿನಿಂದ 7 ವಿಕೆಟಿಗೆ 522 ರನ್‌ ಪೇರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡಿತ್ತು.

ಸಂಕ್ಷಿಪ್ತ ಸ್ಕೋರು
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ 7 ವಿಕೆಟಿಗೆ 522 ಡಿಕ್ಲೇರ್ಡ್; ಜಿಂಬಾಬ್ವೆ  ಮೊದಲ ಇನ್ನಿಂಗ್ಸ್‌ 304 (ಬ್ರಾನ್‌ ಚರಿ 53, ಬ್ರೆಂಡನ್‌ ಟಯ್ಲರ್‌ 110, ಪೀಟರ್‌ ಮೂರ್‌  83, ತೈಜುಲ್‌ ಇಸ್ಲಾಮ್‌ 107ಕ್ಕೆ 5, ಮೆಹದಿ ಹಸನ್‌ ಮಿರಾಜ್‌ 61ಕ್ಕೆ 3).

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.