ಪ್ರಧಾನಿ ಮೋದಿ ಬಲಿಷ್ಠ ವ್ಯಕ್ತಿ: ರಜನಿ
Team Udayavani, Nov 14, 2018, 9:44 AM IST
ಚೆನ್ನೈ: ಮುಂದಿನ ಲೋಕಸಭೆ ಚುನಾವಣೆಗಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿಪಕ್ಷಗಳ ಮೈತಿಕೂಟ ರಚನೆಗೆ ಮುಂದಾಗುತ್ತಿರುವಂತೆಯೇ ತಮಿಳುನಾಡಿನಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಪ್ರಧಾನಿ ನರೇಂದ್ರ ಮೋದಿಯೇ ಅತ್ಯಂತ ಬಲಿಷ್ಠ ವ್ಯಕ್ತಿ ಎಂದು ಪರೋಕ್ಷ ವಾಗಿ ಹೇಳಿದ್ದಾರೆ. ಚೆನ್ನೈನಲ್ಲಿ ಮಂಗಳವಾರ ಮಾತನಾಡಿದ ಅವರು, ಬಲಶಾಲಿಯಾಗಿರುವ ಒಬ್ಬನ ವಿರುದ್ಧ ಹತ್ತು ಮಂದಿ ಒಟ್ಟುಗೂಡುತ್ತಾರೆ ಎಂದಾದರೆ ಶಕ್ತಿಶಾಲಿ ಯಾರು ಎಂದು ತಿಳಿಯ ಬೇಕಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಿದ್ದರೆ ಪ್ರಧಾನಿ ಮೋದಿಯವರು ಬಲಶಾಲಿಯೇ ಎಂಬ ಪ್ರಶ್ನೆಗೆ “2019ರಲ್ಲಿ ನಿರ್ಧಾರವಾಗಲಿದೆ’ ಎಂದರು.
ಸೋಮವಾರ ಮಾತನಾಡಿದ್ದ ವೇಳೆ ಬಿಜೆಪಿ ಇತರ ಪಕ್ಷಗಳಿಗೆ ಅಪಾಯಕಾರಿ ಯಾಗಿದೆ ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಎಂದು ವಿವರಣೆ ನೀಡಿದ್ದಾರೆ ತಲೈವಾ. ಒಂದು ವೇಳೆ ಪ್ರತಿಪಕ್ಷಗಳು ಬಿಜೆಪಿ ಅಪಾಯಕಾರಿ ಎಂದು ತಿಳಿದುಕೊಂಡರೆ ಅದು ಅವರಿಗೆ ಅಪಾಯಕಾರಿಯಾಗಿರ ಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಏನು ಎಂಬುದರ ಬಗ್ಗೆ ಜನರೇ ನಿರ್ಧರಿಸಲಿದ್ದಾರೆ ಎಂದಿದ್ದಾರೆ. ತಮ್ಮ ಮಾತುಗಳ ಹಿಂದೆ ಬಿಜೆಪಿ ಇದೆ ಎಂಬ ವಾದ ಸರಿಯಲ್ಲ. ತಮ್ಮ ನಡೆ-ನುಡಿಯ ಹಿಂದೆ ದೇವರು ಮತ್ತು ತಮಿಳುನಾಡಿನ ಜನರು ಇದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಂಗÙ ವಾರ ಚೆನ್ನೈನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ರನ್ನು ಭೇಟಿ ಯಾಗಿದ್ದರು. ಬಳಿಕ ಮಾತನಾಡಿದ ಅವರು, ಮಹಾಮೈತ್ರಿ ಕೂಟ ಎನ್ನುವುದು ನಿಜವಾಗಲಿದೆ ಎಂದಿದ್ದಾರೆ. ರಜನಿಕಾಂತ್ ಪ್ರಧಾನಿ ಮೋದಿ ಬಲಿಷ್ಠ ವ್ಯಕ್ತಿ ಎಂದಿರುವ ಬಗ್ಗೆ ಉತ್ತರಿಸಿದ ಯೆಚೂರಿ 2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜ ಪೇಯಿ ಚುನಾವಣೆಯಲ್ಲಿ ಸೋತಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್