ಜವಾಹರಲಾಲ್ ನೆಹರು ಸ್ಮರಣೆ; ನ.14 ಮಕ್ಕಳ ದಿನಾಚರಣೆ,  ಬಾಲ್ಯದ ದಿನವದು ಚಿರಂತನವಾಗಿರಲಿ


Team Udayavani, Nov 14, 2020, 11:52 AM IST

14-november-2.gif

ಬಾಲ್ಯವೆಂದರೆ ಹಾಗೆ ಏನೂ ತಿಳಿಯದ ಮುಗ್ಧ ಸ್ಥಿತಿ. ಮಣ್ಣಿನಲ್ಲಿ ಮನೆ ಮಾಡಿ, ಎಲೆಗಳನ್ನು ಕತ್ತರಿಸಿ ಪದಾರ್ಥ ತಯಾರಿಸಿ ಅಮ್ಮನ ಸೀರೆ ಉಟ್ಟು ಟೀಚರ್‌ ನಂತೆ ವರ್ತಿಸುವ ಆ ದಿನ ಬಹುಶಃ ಮತ್ತೆ ಮತ್ತೆ ನೆನೆದರೆ ಎಲ್ಲರಿಗೂ ಮನದಲ್ಲಿ ಮಂದಹಾಸ ಮೂಡುತ್ತದೆ. ನೆನಪುಗಳು ಅತಿ ಸುಂದರ, ಬೆಳೆದಂತೆ ನಮ್ಮ ಬುದ್ಧಿ ವಿಕಸನ ಹೊಂದಿ ನೆನಪುಗಳ ವ್ಯೂಹದಲ್ಲಿ ಅದು ಅವಿಸ್ಮರಣೀಯ ಇತಿಹಾಸವಾಗಿ ಉಳಿದುಬಿಡುತ್ತದೆ. ಹೋದ ಹೋದಂತೆ ಅದು ಮಸುಕಾದರೂ ನಮ್ಮ ಅರಿವಿನ ಸಂಕೋಲೆಗಳಿಂದ ದೂರ ನಡೆಯುವುದಿಲ್ಲ.

ಇದೆಲ್ಲ ಮಕ್ಕಳ ದಿನಾಚರಣೆ ಹತ್ತಿರ ಬರುತ್ತಿದ್ದಂತೆ ಒಕ್ಕರಿಸಿ ಬಂದು ಬೀಡುತ್ತವೆ. ಶಾಲೆ ಕಾಲೇಜುಗಳಲ್ಲಿ ಹುಟ್ಟು ಹಬ್ಬದಂತೆ ಆಚರಿಸುವ   ಹಬ್ಬ ಇಂದಿನ ಮಕ್ಕಳನ್ನು ನೋಡುವಾಗ ಹಂಬಲಿಸಿ ಮರೆಯಾಗುತ್ತದೆ. ತಪ್ಪೋ ಸರಿಯೋ, ಇಂದಿನ ಮಕ್ಕಳು ಇಂತಹ ಬಾಲ್ಯದ ನೆನಪುಗಳನ್ನು ಅನುಭವಿಸುತ್ತಿಲ್ಲ ಎಂಬ ಅಪವಾದ ಆಗಾಗ ಕೇಳಿಬರುತ್ತದೆ. ಬದಲಾಗಿ ವೀಡಿಯೋ ಗೇಮ್‌, ಟಿ.ವಿ., ಮೊಬೈಲ್‌ನಲ್ಲಿಯೇ ಸಮಯ ಕಳೆಯುತ್ತಾರೆ. ಅವರಿಗೆ ಮನೆಯ ಮುಂದೆ ಅರಳುವ ಹೂವಿನ ಗಿಡ, ಪಕ್ಕದ ಮನೆಯ ಬದಿಯಲ್ಲಿರುವ ಮರ ಯಾವುದು ಎಂಬ ಸಾಮಾನ್ಯ ಜ್ಞಾನವೂ ಇರುವುದಿಲ್ಲ. ಅದಕ್ಕಾಗಿ ಮಕ್ಕಳ ಬಾಲ್ಯವನ್ನು ನೆನಪಿಸಲು ಹಾಗೂ ಜಾಗೃತಿ ಮೂಡಿಸಲು ಮಕ್ಕಳ ದಿನಾಚರಣೆಯ ನೆಪದಲ್ಲಿ ಅನಿವಾರ್ಯ ಕಾರ್ಯವಾಗಬೇಕಿದೆ.

ಮಕ್ಕಳ ಪಾಲನೆಯಲ್ಲಿ ಹೆತ್ತವರಿಗೆ ಕಿವಿಮಾತು
ಮಕ್ಕಳನ್ನು ಅತಿ ಮುದ್ದು ಮಾಡುವುದು ಹಾಗೂ ಮಕ್ಕಳನ್ನು ಪ್ರೀತಿಸದೆ  ಬೆಳೆಸುವುದರಿಂದ ಅವರು ಬಾಲ್ಯದಲ್ಲಿ ಅಪರಾಧಗೈಯಲು ಹಾಗೂ ಮನೋರೋಗಗಳಿಗೆ ಒಳಗಾಗಿ ಯಾವುದರಲ್ಲೂ ಆಸಕ್ತಿ ಇಲ್ಲದಂತಾಗಿ ಮಾಡಿಬಿಡುತ್ತಾರೆ ಎಂಬುದು ಸುಪ್ರಸಿದ್ಧ ಮನೋವಿಜ್ಞಾನಿ ಆಡ್ಲರ್‌ ಅವರ ಅಭಿಪ್ರಾಯ.

ಹಾಗೆಯೇ ಒಂದು ಮಗುವಿನೆದುರು ಇನ್ನೊಂದು ಮಗುವನ್ನು ಹೀಯಾಳಿಸಿ ಮಾತನಾಡಿದಾಗ ಆ ಮಗುವಿಗೆ ತಾನು ಇನ್ನೊಂದು ಮಗುವಿಗಿಂತ ಕೀಳು ಎಂಬ ಮನೋಭಾವ ಬೆಳೆಯುತ್ತದೆ. ಇದರಿಂದಾಗಿ ಆತ್ಮವಿಶ್ವಾಸ ಕುಗ್ಗಿ ಆ ಮಗು ಸ್ವತಂತ್ರವಾಗಿ ಏನನ್ನೂ ಮಾಡಲಾರದ ಪರಿಸ್ಥಿತಿ ಎದುರಿಸುತ್ತದೆ. ಯಾವಾಗಲೂ ಮಕ್ಕಳ ಭವಿಷ್ಯ ಅವರ ಮನಸ್ಸಿನ ಬೆಳವಣಿಗೆಯನ್ನು ಅವಲಂಬಿಸಿರುವುದರಿಂದ ಅವರ ಆರೋಗ್ಯದ ಜತೆಗೆ ಮಕ್ಕಳ ಮನೋವಿಜ್ಞಾನಕ್ಕೂ ಮಹತ್ವ ನೀಡಬೇಕು.

ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂಬ ಮಾತಿದೆ.  ಇದು ಅಕ್ಷರಶಃ ನಿಜ. ಆದರೆ ಬರಬರುತ್ತಾ ಇದು ಬದಲಾಗುತ್ತಿದೆ. ಆದ್ದರಿಂದ ಸಾಧ್ಯವಾದಷ್ಟು ಮಕ್ಕಳಿಗೆ ವಾಸ್ತವದ ಅರಿವನ್ನು ಮಾಡಿ ಸುತ್ತಾ, ಸ್ವಾವಲಂಬನೆಯ ಬದುಕನ್ನು ಕಲಿಸುವುದು ಒಳಿತು, ಅಂದಾಗ ಮಾತ್ರ ಒಂದು ಮಗು ಮುಂದಿನ ಸಮಾಜದ ಒಳ್ಳೆಯ ಪ್ರಜೆಯಾಗಲು ಸಾಧ್ಯ.

ಮಕ್ಕಳ ಕಲ್ಯಾಣಕ್ಕಾಗಿ ಶ್ರಮ
ಮಕ್ಕಳ ಹಕ್ಕು, ಹಿತರಕ್ಷಣೆ, ಯೋಗ ಕ್ಷೇಮ, ಮಕ್ಕಳ ಆರೋಗ್ಯ, ಶಿಕ್ಷಣ  ಮತ್ತು ಅಭಿವೃದ್ಧಿಗೆ ಶ್ರಮಿಸುವ ಉದ್ದೇಶದಿಂದ ಜಗತ್ತಿನಾದ್ಯಂತ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.

ದಿನಾಚರಣೆ ಆರಂಭಗೊಂಡಿದ್ದು ಹೇಗೆ?
ವಿ.ಎನ್‌. ಕುಲಕರ್ಣಿ ಎನ್ನುವವರು 1951ರಲ್ಲಿ ವಿಶ್ವ ಸಂಸ್ಥೆಯ ಒಂದು ಯೋಜನೆಯಡಿಯಲ್ಲಿ ಇಂಗ್ಲೆಂಡ್‌ನ‌ ಮಕ್ಕಳ ಅಭಿವೃದ್ಧಿಗಾಗಿ ದುಡಿಯುತ್ತಿದ್ದರು. ಆ ದಿನಗಳಲ್ಲಿ ಬಡ ಮಕ್ಕಳ ಅಭಿವೃದ್ಧಿಗಾಗಿ ನಿಧಿ ಸಂಗ್ರಹಕ್ಕೆ ರಾಣಿ ಎಲಿಜಬೆತ್‌-2 ಅವರ ಜನ್ಮದಿನವನ್ನು ಧ್ವಜ ದಿನಾಚರಣೆಯನ್ನಾಗಿ ಆಚರಿಸಿ, ಧನ ಸಂಗ್ರಹಿಸಲಾಗುತ್ತಿತ್ತು. ಈ ಸಂದರ್ಭ ಕುಲಕರ್ಣಿಯವರು ಭಾರತದಲ್ಲೂ ಇಂತಹ ಯೋಜನೆ ಜಾರಿಗೆ ಬರಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ವಿಶ್ವ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಸ್ತಾವವನ್ನು ಮುಂದಿಟ್ಟರು. ಎಲ್ಲರೂ ಈ ಬಗ್ಗೆ ಚರ್ಚಿಸಿ ದೇಶದ ಮೊದಲ ಪ್ರಧಾನಿ ಪಂ| ಜವಾಹರಲಾಲ್‌ ನೆಹರೂ ಅವರ ಜನ್ಮ ದಿನವಾದ ನ. 14ರಂದು ಮಕ್ಕಳ ದಿನ ಎಂದು ಆಚರಿಸಲು ಘೋಷಿಸಲಾಯಿತು. ಜಗತ್ತಿನಾದ್ಯಂತ ನವೆಂಬರ್‌ 20, 1954ರಂದು ವಿಶ್ವಸಂಸ್ಥೆ ಮಕ್ಕಳ ದಿನವನ್ನು ಆಚರಿಸಲು ಕರೆ ನೀಡಲಾಯಿತು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.