ಗುರಪ್ಪ ಮಾವ ಬಂದ


Team Udayavani, Nov 15, 2018, 6:00 AM IST

q-2.jpg

ಭಟ್ರಳ್ಳಿ ಅನ್ನುವ ಪುಟ್ಟ ಹಳ್ಳಿಯಲ್ಲಿ ಒಂದು ಪುಟ್ಟ ಶಾಲೆ ಇತ್ತು. ಅನಾಥ ಮಕ್ಕಳ ಶಾಲೆ ಅದು. ಪ್ರಕಾಶಪ್ಪ ಅದರ ಮುಖ್ಯೋಪಾಧ್ಯಾಯರಾಗಿದ್ದರು. ಅವರು ಮಕ್ಕಳಿಗೆ ಪಾಠ ಹೇಳಿಕೊಡುವುದರ ಜೊತೆಗೆ ತೋಟದ ಕೆಲಸ, ಅಡುಗೆ ಕೆಲಸ ಎಲ್ಲಾನೂ ಹೇಳ್ಕೊಡ್ತಾ ಇದ್ದರು.

ಅಡುಗೆ ಮಾಡುವ ನಾರಣಪ್ಪ ಮತ್ತು ಲಕ್ಷ್ಮಮ್ಮ ರುಚಿಯಾಗಿ ಅಡುಗೆ ಮಾಡಿ ಮಕ್ಕಳಿಗೆಲ್ಲ ಪ್ರೀತಿಯಿಂದ ಬಡಿಸುತ್ತಿದ್ದರು.
ಮಕ್ಕಳಿಗೆ ತಾವು ಅನಾಥರೆಂಬ ಪ್ರಜ್ಞೆ ಕಾಡದಂತೆ ಮಕ್ಕಳನ್ನು ಬೆಳೆಸುತ್ತಿದ್ದರು. ನಾರಣಪ್ಪ ಮತ್ತು ಲಕ್ಷ್ಮಮ್ಮರಿಗೆ ಮಕ್ಕಳಿಲ್ಲದ ಕಾರಣ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುತ್ತಿದ್ದರು. ಅವರ ಊಟ ವಸತಿಯನ್ನು ಸಹ ಪ್ರಕಾಶಪ್ಪನವರೆ ನೋಡಿಕೊಳ್ಳುತ್ತಿದ್ದರು. ಮೊದಮೊದಲು ದೇಣಿಗೆ ಎತ್ತಿ, ಕೈಯಿಂದ ಕಸೂತಿ ಕೆಲಸ ಮಾಡಿಸಿ ಅದರ ಮಾರಾಟದಿಂದ ಮಕ್ಕಳ ಊಟೋಪಚಾರ, ಬಟ್ಟೆ ಎಲ್ಲವನ್ನೂ ನಿಭಾಯಿಸುತ್ತಿದ್ದರು.

ಒಮ್ಮೆ ಒಬ್ಬ ಆಗಂತುಕ ಬಂದು ಪ್ರಕಾಶಪ್ಪನವರ ಹತ್ತಿರ ಸ್ವಾಮಿ ಇಲ್ಲಿ ಹತ್ತಿರದಲ್ಲೆಲ್ಲಾದರೂ ಭೋಜನ ಶಾಲೆ ಇದೆಯೇ ಎಂದು ಕೇಳಿದ. ನಂತರ ಪ್ರಕಾಶಪ್ಪ ಆತನನ್ನು ಕೈಕಾಲು ತೊಳೆದುಕೊಳ್ಳಲು ಹೇಳಿ ನಂತರ ಲಕ್ಷ್ಮಮ್ಮನನ್ನು ಕರೆದು ಊಟ ಕೊಡಿಸಿದರು. ಆಮೇಲೆ ಆಗಂತುಕ ತನ್ನ ಪರಿಚಯ ಹೇಳಿಕೊಂಡ. ಆಗಂತುಕನ ಹೆಸರು ಗುರಪ್ಪ. ಅವನು ಅಲೆಮಾರಿಯಾಗಿದ್ದ. ಕಾಡುಗಳನ್ನು ಸುತ್ತುವುದು, ಬೆಟ್ಟಗುಡ್ಡ ಹತ್ತುವುದು, ಹಳ್ಳಕೊಳ್ಳಗಳಲ್ಲಿಳಿದು ಅದರ ಅಂದಚೆಂದ ನೋಡುವುದು, ಕಷ್ಟದಲ್ಲಿರುವವರಿಗೆ ನೆರವು ನೀಡುವುದು, ಹಳ್ಳಿಗಳಲ್ಲಿ, ಕಾಡುಗಳಲ್ಲಿ ಸಿಕ್ಕಿದ ಕೆಲಸ ಮಾಡಿ ಅವರು ಕೊಟ್ಟಷ್ಟನ್ನು ಪಡೆದು ಹೊಟ್ಟೆ ಹೊರೆದುಕೊಳ್ಳುತ್ತಿದ್ದ.

ಗುರಪ್ಪನ ಪರಿಚಯದಿಂದ ಪ್ರಕಾಶಪ್ಪನಿಗೆ ತುಂಬಾ ಸಂತೋಷವಾಯಿತು. ಅವರು “ನಮ್ಮ ಶಾಲೆಯ ಮಕ್ಕಳಿಗೂ ಸಹ ಪ್ರಕೃತಿಯ ಸೌಂದರ್ಯದ ಅರಿವಾಗಬೇಕು. ಆದರೆ ಇದುವರೆಗೂ ಅಂತಹ ಯಾವುದೇ ಪ್ರಯತ್ನವನ್ನು ನಾನು ಮಾಡಿಲ್ಲ. ನೀನು ಒಪ್ಪಿ ದೊಡ್ಡ ಮನಸ್ಸು ಮಾಡಿದರೆ ನಮ್ಮ ಮಕ್ಕಳಿಗೆ ಅಂತಹ ಸೌಭಾಗ್ಯ ದೊರೆಯುತ್ತದೆ.’ ಎಂದು ಕೇಳಿಕೊಂಡರು. ಗುರಪ್ಪ “ಹಸಿದವನಿಗೆ ಊಟ ಕೊಟ್ಟಿರಿ, ಇರುವುದಕ್ಕೆ ಜಾಗ ಕೊಡುತ್ತೇನೆ ಎನ್ನುತ್ತಿದ್ದೀರ. ಇದಕ್ಕಿಂತ ನನಗಿನ್ನೇನು ಬೇಕು’ ಎಂದು ಸಂತೋಷದಿಂದ ಒಪ್ಪಿದನು. ಪ್ರಕಾಶಪ್ಪನಿಗೆ ಸ್ವರ್ಗವೇ ಕೈಗೆಟುಕಿದಷ್ಟು ಸಂತೋಷವಾಯಿತು. ಅಂದಿನಿಂದ ಗುರಪ್ಪ ಮಕ್ಕಳನ್ನು ಬೆಟ್ಟ ಗುಡ್ಡಗಳಿಗೆ ಕರೆದೊಯ್ದು, ನಿಸರ್ಗವನ್ನು ಪರಿಚಯಿಸಿ, ಹಳ್ಳ ತೊರೆಗಳಲ್ಲೆಲ್ಲಾ ನಡೆಸಿ ಮಕ್ಕಳಿಗೆ ಅಚ್ಚುಮೆಚ್ಚಿನ ಗುರಪ್ಪ ಮಾವನಾದ.

ತುಳಸಿ ವಿಜಯಕುಮಾರಿ

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.