ಕೋಡಿ: ಬೂತಾಯಿ ಹಬ್ಬ ! 


Team Udayavani, Nov 15, 2018, 8:48 AM IST

w-28.jpg

ಕುಂದಾಪುರ: ಕೋಡಿ ಕಡಲ ಕಿನಾರೆಯಲ್ಲಿ ಬುಧವಾರ ಮೀನುಗಾರಿಕೆಗೆ ತೆರಳಿದ್ದ ಬೀಜಾಡಿಯ ಕರಾವಳಿ ಫ್ರೆಂಡ್ಸ್‌ನ ಕೈರಂಪಣಿ ಬಲೆಯ ದೋಣಿಗೆ ರಾಶಿ – ರಾಶಿಯಾಗಿ ಬೈಗೆ (ಬೂತಾಯಿ) ಮೀನುಗಳು ಸಿಕ್ಕಿವೆ. ಸುಮಾರು 3 ಸಾವಿರ ಕೆ.ಜಿ.ಯಷ್ಟು ಮೀನುಗಳು ಬಲೆಗೆ ಬಿದ್ದಿವೆ. ಎಳೆಯುವ ಸಂದರ್ಭ ಬಲೆ ಹರಿದ ಕಾರಣ ಅಷ್ಟೇ ಪ್ರಮಾಣದ ಮೀನುಗಳು ತಪ್ಪಿಸಿಕೊಂಡು ಹೋಗಿವೆ.

ಮುಗಿಬಿದ್ದ ಜನ
ಬೆಳಗ್ಗೆ 6.30ರ ಸುಮಾರಿಗೆ ಕೈರಂಪಣಿ ದೋಣಿಗೆ ಅಪಾರ ಪ್ರಮಾಣದ ಮೀನು ಸಿಕ್ಕಿದೆ ಎನ್ನುವ ಸುದ್ದಿ ಪರಿಸರದಲ್ಲಿ ಹಬ್ಬಿದ್ದು, ಮೀನು ಖರೀದಿಗಾಗಿ ಸ್ಥಳೀಯರು ಮುಗಿಬಿದ್ದರು. ದೋಣಿಯವರಿಗೆ ಸಿಕ್ಕಿದ ಮೀನುಗಳನ್ನು ಕೋಟದ ಫಿಶ್‌ಮೀಲ್‌ಗೆ ನೀಡಲಾಗಿದೆ. ದಡಕ್ಕೆ ಬಂದು ಬಿದ್ದ ಮೀನುಗಳನ್ನು ಸ್ಥಳೀಯರು ಹಂಚಿಕೊಂಡರು. ಬಲೆಯ ಸಾಮರ್ಥ್ಯಕ್ಕಿಂತ ಹೆಚ್ಚು ಮೀನು ಬಿದ್ದ ಕಾರಣ ಎಳೆಯುವಾಗ ತುಂಡಾಗಿ ಅರ್ಧದಷ್ಟು ಮೀನುಗಳು ಸಮುದ್ರಸೇರಿವೆ. ಬಳಿಕ ದೋಣಿಯಲ್ಲಿದ್ದ 16 ಮಂದಿಯೊಂದಿಗೆ ಸ್ಥಳೀಯ 50 ಮಂದಿ ಸೇರಿ ಬಲೆಯನ್ನು ದಡಕ್ಕೆ ಎಳೆದು ತಂದರು. ತಲಾ 40 ಕೆ.ಜಿ.ಯಂತೆ 54 ಬಾಕ್ಸ್‌ಗಳಲ್ಲಿ ಮೀನುಗಳನ್ನು ತುಂಬಿ ಮಾರಾಟ ಮಾಡಲಾಗಿದೆ. ಬಾಕ್ಸೊಂದಕ್ಕೆ 1 ಸಾವಿರ ರೂ. ನಿಗದಿ ಮಾಡಲಾಗಿತ್ತು. ದೋಣಿಯವರಿಗೆ 50-60 ಸಾವಿರ ರೂ. ಲಭಿಸಿದ್ದು, ಒಟ್ಟಾರೆಯಾಗಿ 1.25 ಲಕ್ಷ ರೂ. ಮೌಲ್ಯದ ಮೀನು ಸಿಕ್ಕಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಇತ್ತೀಚೆಗೆ ಪಡುಬಿದ್ರಿ ಸಮೀಪದ ಹೆಜಮಾಡಿ ತೀರದಲ್ಲಿ ಭಾರೀ ಪ್ರಮಾಣದಲ್ಲಿ ಬೊಳಿಂಜೇರ್‌ (ಸಿಲ್ವರ್‌ ಫಿಶ್‌) ಮೀನುಗಳು ಕೈರಂಪಣಿ ಮೀನುಗಾರರಿಗೆ ಲಭಿಸಿದ್ದವು.

ಕಾರಣವೇನು ?
ಮೀನುಗಾರರ ಪ್ರಕಾರ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಬೂತಾಯಿ ಮೀನುಗಳು ದಡಕ್ಕೆ ಬಂದಿವೆ. ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ದೋಣಿಗಳ ಎಂಜಿನ್‌ ಶಬ್ದಕ್ಕೆ ಹೆದರಿ ಮೀನುಗಳು ಗುಂಪಾಗಿ ಹೋಗುತ್ತಿದ್ದು, ಅದೇ ವೇಳೆ ಅಲೆಗಳ ಅಬ್ಬರದಿಂದಾಗಿ ದಡದತ್ತ ತೇಲಿಬಂದಿರಬಹುದು ಎನ್ನುತ್ತಾರೆ ಅವರು.

ಆಶಾದಾಯಕ ಬೆಳವಣಿಗೆ
ಹಿಂದಿನ ವರ್ಷಗಳಲ್ಲಿ ಈ ಸಮಯದಲ್ಲಿ ಇದರ ಅರ್ಧದಷ್ಟು ಕೂಡ ಬೈಗೆ ಮೀನು ಸಿಗುತ್ತಿರಲಿಲ್ಲ. ಈ ವರ್ಷ ಬುಲ್‌ಟ್ರಾಲ್‌, ಲೈಟ್‌ ಫಿಶಿಂಗ್‌ ನಿಷೇಧಿಸಿರುವುದರಿಂದ ಮೀನಿನ ಮರಿಗಳೆಲ್ಲ ಉಳಿದು ಈಗ ಹೇರಳವಾದ ಮೀನು ಸಿಗುತ್ತಿದೆ. ಇದೊಂದು ಆಶಾದಾಯಕ ಬೆಳವಣಿಗೆ. 
ಮಂಜು ಬಿಲ್ಲವ,  ಗಂಗೊಳ್ಳಿ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.