ಸಾಹಸ ಮನೋಭಾವದ ಕೈಟ್‌ ಬ್ರದರ್ಸ್‌!


Team Udayavani, Nov 15, 2018, 3:19 PM IST

96.jpg

ಸರ್ಕಾರಿ ಶಾಲೆಯ ವಾಸ್ತವತೆ ಕುರಿತಂತೆ ವೃಷಭ್‌ ಶೆಟ್ಟಿ ನಿರ್ದೇಶನದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡುಗೆ ರಾಮಣ್ಣ ರೈ’ ಚಿತ್ರ ಜೋರು ಸುದ್ದಿ ಮಾಡಿದ್ದು ಎಲ್ಲರಿಗೂ ಗೊತ್ತು. ಕನ್ನಡದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಅನೇಕ ಚಿತ್ರಗಳು ಬಂದಿವೆ. ಒಂದಷ್ಟು ಸುದ್ದಿಯನ್ನೂ ಮಾಡಿವೆ. ಈಗ ಆ ಸಾಲಿಗೆ ಹೊಸಬರ “ಕೈಟ್‌ ಬ್ರದರ್ಸ್‌’ ಹೊಸ ಸೇರ್ಪಡೆ. ಈ ಶೀರ್ಷಿಕೆ ಕೇಳಿದಾಗ, ವಿಮಾನ ಕಂಡು ಹಿಡಿದ ರೈಟ್‌ ಬ್ರದರ್ಸ್‌ ನೆನಪಾಗುತ್ತೆ. ಆ ಸಹೋದರರಂತೆ, ಈ “ಕೈಟ್‌ ಬ್ರದರ್ಸ್‌’ರದ್ದು ಒಂದು ಯಶೋಗಾಥೆಯ ಚಿತ್ರಣ ಇಲ್ಲಿದೆ. ಈ ಚಿತ್ರದ ಮೂಲಕ ವಿರೇನ್‌ ಸಾಗರ್‌ ಬಗಾಡೆ ನಿರ್ದೇಶಕರಾಗುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಇವರದೇ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇಷ್ಟರಲ್ಲೇ ಸೆನ್ಸಾರ್‌ ಮಂಡಳಿಗೆ ಹೋಗಲು ಅಣಿಯಾಗಿದೆ ಚಿತ್ರತಂಡ.

ಈ “ಕೈಟ್‌ ಬ್ರದರ್ಸ್‌’ ಕಥೆ ಏನು? “ಇದೊಂದು ಅಡ್ವೆಂಚರಸ್‌ ಡ್ರಾಮಾ’ ಎಂಬ ಉತ್ತರ ನಿರ್ದೇಶಕರದ್ದು. “ಮಕ್ಕಳ ಮೃದು ಮನಸ್ಸಿನೊಳಗೆ ಸಾಹಸ ಮನೋಭಾವ ಕೂಡ ಇರುತ್ತೆ. ಅವರನ್ನು ಪ್ರೋತ್ಸಾಹಿಸಿದರೆ, ಆ ಮಕ್ಕಳು ಏನು ಬೇಕಾದರೂ ಸಾಧಿಸಬಲ್ಲರು. ಅವರ ಮುಗ್ಧತೆ ಜೊತೆಗೊಂದು ಸಾಮಾಜಿಕ ಕಳಕಳಿ ಇರುವ ಅಂಶವೂ ಇದೆ ಎಂಬುದರ ಚಿತ್ರಣವಿಲ್ಲಿದೆ. ಇಲ್ಲಿ ಪ್ರಮುಖವಾಗಿ ಸರ್ಕಾರಿ ಶಾಲೆ ಕುರಿತ ವಿಷಯವಿದೆ. ಅದೇ ಚಿತ್ರದ ಹೈಲೈಟ್‌ ಕೂಡ. “ಸರ್ಕಾರಿ ಶಾಲೆ’ಯಿಂದ ತನ್ನ ಗೆಳೆಯರೆಲ್ಲರೂ ವಂಚಿತರಾಗುತ್ತಿದ್ದಾರೆ ಎಂಬ ತಿಳಿಯುವ ಸಾಹಸಿ ಮನೋಭಾವದ ಹುಡುಗನೊಬ್ಬ, ಕಾಳಜಿ ವಹಿಸಿ, ಪುನಃ ಹೇಗೆ ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಯನ್ನು ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಾನೆ ಎಂಬುದು ಕಥಾವಸ್ತು. ರಾಮಾಯಣದಲ್ಲಿ ಹನುಮಂತ ಶ್ರೀರಾಮನಿಗೋಸ್ಕರ ಸಾಗರ ದಾಟಿ ಹೇಗೆ ಲಂಕೆಗೆ ಹಾರಿದ್ದನೋ, ಇಲ್ಲಿ ಶ್ರೀರಾಮ ಎಂಬ ಗೆಳೆಯ ತನ್ನ ಮತ್ತೂಬ್ಬ ಗೆಳೆಯ ಹನುಮಂತನಿಗಾಗಿ ಹಳ್ಳಿ ಬಿಟ್ಟು, ಬೆಂಗಳೂರಿನಂತಹ ನಗರಕ್ಕೆ ಹೋಗಿ, ಅಲ್ಲಿಂದ ಇನ್ನೆಲ್ಲಿಗೋ ಸಾಗಿ ಯಾವ ಸಾಧನೆ ಮಾಡುತ್ತಾನೆ ಎಂಬುದೇ ಚಿತ್ರದ ಸಾರಾಂಶ’ ಎನ್ನುತ್ತಾರೆ ನಿರ್ದೇಶಕ ವಿರೇನ್‌ ಸಾಗರ್‌ ಬಗಾಡೆ.

ಅಂದಹಾಗೆ, ಚಿತ್ರಕ್ಕೆ ಇತ್ತೀಚೆಗೆ ಹಾಡುಗಳ ಧ್ವನಿಮುದ್ರಣವಾಗಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅನೀಶ್‌ ಚೆರಿಯನ್‌ ಸಂಗೀತ ನೀಡಿದ್ದಾರೆ. ಅನನ್ಯ ಭಟ್‌, “ಚುಟು ಚುಟು’ ಖ್ಯಾತಿಯ ರವೀಂದ್ರ ಸೊರಗಾವಿ, ಬಾಲಿವುಡ್‌ ಗಾಯಕ ಕೇಶವ ಕುಮಾರ್‌ ಮತ್ತು ನಿರ್ದೇಶಕ ವಿರೇನ್‌ ಸಾಗರ್‌ ಬಗಾಡೆ ಕೂಡ ಹಾಡಿದ್ದಾರೆ. ಸಿಂಪಲ್‌ ಸುನೀ, ವಿರೇನ್‌ ಸಾಗರ್‌ ಬಗಾಡೆ ಸಾಹಿತ್ಯವಿದೆ. ಚಿತ್ರದಲ್ಲಿ ಸಮರ್ಥ್ ಆಶಿ, ಪ್ರಣೀಲ್‌ ನಾಡಿಗೇರ್‌ ಪ್ರಮುಖ ಆಕರ್ಷಣೆ. ಉಳಿದಂತೆ ಶ್ರೇಯಾ ಹರಿಹರ್‌, ವಿನೋದ್‌ ಬಗಾಡೆ, ಅನಂತ್‌ ದೇಶಪಾಂಡೆ, ಪ್ರಭು ಹಂಚನಾಳ್‌, ರಾಜೀವ ಸಿಂಗ್‌ ಹಲವಾಯಿ ಸೇರಿದಂತೆ ಉತ್ತರ ಕರ್ನಾಟಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ಅಶೋಕ್‌ ಕಶ್ಯಪ್‌ ಛಾಯಾಗ್ರಹಣವಿದೆ. ಸಂತೋಷ್‌ ರಾಧಾಕೃಷ್ಣನ್‌ ಸಂಕಲನ ಮಾಡಿದ್ದಾರೆ. ಭಜರಂಗ ಸಿನಿಮಾ ಬ್ಯಾನರ್‌ನಲ್ಲಿ ರಜನಿಕಾಂತ್‌ರಾವ್‌ ಬಳ್ವಿ ಮತ್ತು ಮಂಜುನಾಥ್‌ ಬಿ.ಎಸ್‌. ಚಿತ್ರ ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.