ವೇತನ ವಿಳಂಬ ಖಂಡಿಸಿ ಸಾಮೂಹಿಕ ರಜೆಗೆ ಆಗ್ರಹ
Team Udayavani, Nov 15, 2018, 5:31 PM IST
ಯಲಬುರ್ಗಾ: ಸ್ಥಳೀಯ ಪಟ್ಟಣದ ಪಪಂ ಕಚೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ನೌಕರರ ವೇತನ ವಿಳಂಬ ಖಂಡಿಸಿ ಪೌರ ಸೇವಾ ನೌಕರರು ಬುಧವಾರ ಸಾಮೂಹಿಕ ಅನಿರ್ಧಿಷ್ಟಾವಧಿ ರಜೆ ಮಂಜೂರು ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ರಮೇಶ ಅಳವಂಡಿಕರಗೆ ಮನವಿ ಸಲ್ಲಿಸಿದರು.
ಪೌರ ಸೇವಾ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕುಮಾರ ಸರಗಣಾಚಾರ ಮಾತನಾಡಿ, ಪಪಂನಲ್ಲಿ ಕಾರ್ಯನಿರ್ವಹಿಸುವ ಪೌರ ನೌಕರರಿಗೆ ಐದಾರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸಕಾಲಕ್ಕೆ ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಸ್ಥಗಿತ ವೇತನ ಹಾಗೂ ಹಬ್ಬದ ಮುಂಗಡ ಕೂಡ ಪಾವತಿಸಲಿಲ್ಲ, ಹೀಗಾಗಿ ಹಬ್ಬಗಳ ಆಚರಣೆ ಮಾಡದೇ ನಮ್ಮ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿವೆ. ವೇತನ ಪಾವತಿಯಾಗದೇ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ. ಶೀಘ್ರದಲ್ಲಿ ಬಾಕಿ ವೇತನ ಪಾವತಿ ಮಾಡಬೇಕು ಇಲ್ಲದಿದ್ದರೇ ಪೌರ ಸೇವಾ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟ ರಜೆಯಲ್ಲಿ ಮುಂದುವರಿಯುತ್ತೇವೆ ಎಂದು ಎಚ್ಚರಿಸಿದರು.
ಮನವಿ ಪತ್ರ ಸ್ವೀಕರಿಸಿ ತಹಶೀಲ್ದಾರ್ ರಮೇಶ ಅಳವಂಡಿಕರ್ ಮಾತನಾಡಿ, ಪೌರ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಶೀಘ್ರದಲ್ಲಿ ವೇತನ ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ವೇತನ ಪಾವತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದರು. ಪೌರ ಸೇವಾ ನೌಕರರಾದ ರಮೇಶ ಬೆಲೇರಿ, ಬಸವಲಿಂಗಪ್ಪ ಭಾಸ್ಕರ್, ರವಿ ಪೋತೆದಾರ್, ಉಮೇಶ ಬೇಲಿ, ನಾರಾಯಣ ಗಂಗಾಖೇಡ, ಯಂಕಣ್ಣ ಜೋಶಿ, ಚೆನ್ನಯ್ಯ ಹಿರೇಮಠ, ಸುಭಾಷ ಭಾವಿಮನಿ, ಸೀಮಣ್ಣ ಬನ್ನಿಮರದ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು