ದರ್ಶನ ಸುಗಮ: ಮಂಡಲ ಪೂಜೆ, ಸಂಕ್ರಾಂತಿ ಪ್ರಯುಕ್ತ ತೆರೆದ ದೇಗುಲ


Team Udayavani, Nov 17, 2018, 6:36 AM IST

1.jpg

ಶಬರಿಮಲೆ/ಪಂಪಾ: ಮಂಡಲ ಪೂಜೆ- ಮಕರ ವಿಳಕ್ಕು ಉತ್ಸವಕ್ಕಾಗಿ ಶಬರಿಮಲೆ ಅಯ್ಯಪ್ಪ ದೇಗುಲವನ್ನು ಶುಕ್ರವಾರ ತೆರೆಯ ಲಾಗಿದ್ದು, ವಿವಾದದ ನಡುವೆಯೂ ಈ ಬಾರಿಯ ಯಾತ್ರೆ ನಿರ್ವಿಘ್ನವಾಗಿ ಸಾಗುವ ಲಕ್ಷಣ ಗೋಚರಿಸಿದೆ. ಏಕೆಂದರೆ, ಒಂದೆಡೆ ಎಲ್ಲ ವಯೋ ಮಿತಿಯ ಮಹಿಳೆಯರು ದೇಗುಲ ಪ್ರವೇಶ ಮಾಡಬಹುದು ಎಂಬ ಸೆ.28ರ ತೀರ್ಪು ಜಾರಿಗೆ ಸಮಯಾವಕಾಶ ಕೋರಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸುಪ್ರೀಂ ಕೋರ್ಟ್‌ಗೆ ಶನಿವಾರ ಅಥವಾ ಸೋಮವಾರ ಮನವಿ ಸಲ್ಲಿಸಲು ಮುಂದಾಗಿದೆ. ಇನ್ನೊಂದೆಡೆ ದೇಗುಲ ಪ್ರವೇಶಿಸಿಯೇ ಸಿದ್ಧ ಎಂದು ಹಠ ತೊಟ್ಟು ಕೊಚ್ಚಿ ವಿಮಾನ ನಿಲ್ದಾಣದಲ್ಲಿ 10 ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದ ಹೋರಾಟಗಾರ್ತಿ ತೃಪ್ತಿ ದೇಸಾಯಿ ಪೊಲೀಸರ ಸೂಚನೆ ಮೇರೆಗೆ ಪುಣೆಗೆ ವಾಪಸಾಗಿದ್ದಾರೆ. ಹೀಗಾಗಿ ಸದ್ಯಕ್ಕೆ ಮಹಿಳೆಯರ ಪ್ರವೇಶವಿಲ್ಲದೆಯೇ ಯಾತ್ರೆ ಪೂರ್ಣಗೊಳ್ಳುವ ಸುಳಿವು ಸಿಕ್ಕಿದಂತಾಗಿದೆ.

ಬದಲಾಯಿತು ನಿಲುವು
ಸೆ.28ರ ತೀರ್ಪಿಗೆ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಹೇಳಿಕೊಂಡಿದ್ದ ಕೇರಳ ಸರಕಾರ ಭಕ್ತರ ಒತ್ತಡಕ್ಕೆ ಬಾಗಿದೆ. ತೀರ್ಪಿನ ಅನುಷ್ಠಾನಕ್ಕೆ ಹೆಲಿಕಾಪ್ಟರ್‌ ಬಳಕೆ ಮತ್ತು ಇತರ ದಾರಿ ಕಂಡು ಕೊಳ್ಳಲು ಮುಂದಾಗಿದ್ದ ವಿಜಯನ್‌ ನೇತೃತ್ವದ ಎಲ್‌ಡಿ ಎಫ್ ಸರಕಾರ ಗುರುವಾರವೇ ಟಿಡಿಬಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿತ್ತು. ಅದರಂತೆ ತಿರುವನಂತಪುರದಲ್ಲಿ ಟಿಡಿಬಿ ಅಧ್ಯಕ್ಷ ಎ. ಪದ್ಮಕುಮಾರ್‌ ಮಾತನಾಡಿ, ಈ ಬಗ್ಗೆ ಮುಖ್ಯಮಂತ್ರಿ ಜತೆ ಶನಿವಾರ ಚರ್ಚೆ ನಡೆಸುತ್ತೇವೆ. ಬಳಿಕ ಸಾಧ್ಯವಾದರೆ ನ.17ರಂದು ಇಲ್ಲವಾದಲ್ಲಿ ಸೋಮವಾರ ವಕೀಲರ ಮೂಲಕ ಸು.ಕೋ.ನಲ್ಲಿ ಸಮಯಾವಕಾಶ ಕೋರಲಿದ್ದೇವೆ ಎಂದು ಹೇಳಿದ್ದಾರೆ. 

ಹಿಂದಿರುಗಲು ನಿರ್ಧಾರ
ಶುಕ್ರವಾರ ಬೆಳಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತರ ಐವರು ಹೋರಾಟಗಾರರ ಜತೆಗೆ ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿ ಆಗಮಿಸಿದ್ದ ಹೋರಾಟಗಾರ್ತಿ ತೃಪ್ತಿ ದೇಸಾಯಿ ಪುಣೆಗೆ ವಾಪಸಾಗಿದ್ದಾರೆ. ಆದರೆ ಜ.20ರೊಳಗಾಗಿ ಮತ್ತೆ ಬರುವುದಾಗಿ ಹೇಳಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸೇರಿದ್ದ ದೊಡ್ಡ ಸಂಖ್ಯೆಯ ಪ್ರತಿಭಟನಕಾರರಿಂದಾಗಿ ತೃಪ್ತಿ ಮತ್ತು ಸಂಗಡಿಗರಿಗೆ ವಿಮಾನ ನಿಲ್ದಾಣದಿಂದ ಹೊರಬರಲು ಸಾಧ್ಯವೇ ಆಗಲಿಲ್ಲ. ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೃಪ್ತಿ ದೇಸಾಯಿ, ಹೆದರಿಕೆಯಿಂದ ವಾಪಸಾಗುತ್ತಿಲ್ಲ. ಕಾನೂನು, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಮನವಿ ಮಾಡಿದ್ದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ. 

ಜಾಮೀನು ನಿರಾಕರಣೆ
ಇದೇ ವೇಳೆ, ಶಬರಿಮಲೆ ದೇಗುಲ ಆವರಣ ಪ್ರವೇಶಿಸಿದ್ದ ರೆಹನಾ ಫಾತಿಮಾಗೆ ಜಾಮೀನು ನೀಡಲು ಕೇರಳ ಹೈಕೋರ್ಟ್‌ ನಿರಾಕರಿಸಿದೆ. ಆಕೆಯ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ. 

ತೆರೆದ ದೇಗುಲ ಬಾಗಿಲು
ಎಲ್ಲ ವಯೋಮಿತಿಯ ಮಹಿಳೆಯರು ದೇಗುಲ ಪ್ರವೇಶ ಮಾಡಬಹುದು ಎಂದು ಸೆ.28ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ಮೂರನೇ ಬಾರಿಗೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆದಿದೆ. ಶುಕ್ರವಾರ ಸಂಜೆ 5 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ಎ.ವಿ.ಉಣ್ಣಿಕೃಷ್ಣನ್‌ ನಂಬೂದಿರಿ ಬಾಗಿಲು ತೆರೆದರು. ಮುಖ್ಯ ತಂತ್ರಿ ಕಂದರಾರು ರಾಜೀವರಾರು ಒಳ ಪ್ರವೇಶ ಮಾಡಿದಾಗ ಅಯ್ಯಪ್ಪ ಭಕ್ತರು “ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಘೋಷಣೆ ಕೂಗಿದರು. 

ಪ್ರಮುಖ ದಿನಗಳು
41 ದಿನ- ಡಿ.27ರ ವರೆಗೆ ಮಂಡಲ ಪೂಜೆಗಾಗಿ ತೆರೆದಿರಲಿರುವ ಸಮಯ
ಡಿ.28-29- ದೇಗುಲ ಮುಚ್ಚಲಿದೆ.
ಡಿ.30-ಜ.20- ಮಕರವಿಳಕ್ಕು ಸಂದರ್ಭಕ್ಕಾಗಿ ತೆರೆಯಲಿರುವ ದಿನಗಳು.

15 ಸಾವಿರ- ಭದ್ರತೆಗಾಗಿನ ಪೊಲೀಸ್‌ ಸಿಬಂದಿ
860 ಮಹಿಳಾ ಪೊಲೀಸರು
25 ಕೋಟಿ- ಈ ಸಾಲಿನಲ್ಲಿ  ದೇಗುಲಕ್ಕೆ ಭೇಟಿ ನೀಡಲಿರುವ ಸಂಭಾವ್ಯ ಭಕ್ತರು.

ರಾತ್ರಿ 10ರ ಬಳಿಕ ಅನುಮತಿ ಇಲ್ಲ
ಶಬರಿಮಲೆ ದೇಗುಲದ ಮುಖ್ಯ ಆವರಣ (ಸನ್ನಿಧಾನಂ) ದಲ್ಲಿ ರಾತ್ರಿ ಹತ್ತರ ಬಳಿಕ ಯಾರನ್ನೇ ಆಗಲಿ ಉಳಿದು ಕೊಳ್ಳಲು ಅವಕಾಶ ನೀಡದೇ ಇರಲು ಪೊಲೀಸರು ತೀರ್ಮಾ ನಿಸಿ ದ್ದಾರೆ. ಅದಕ್ಕೆ ಸಂಬಂಧಿಸಿ ದಂತೆ ಕಟ್ಟಪ್ಪಣೆಯನ್ನು ಭದ್ರತಾ ಸಿಬಂದಿಗೆ ಈಗಾಗಲೇ ನೀಡಲಾಗಿದೆ.

ಜ.20ರ ವರೆಗೆ ಮಹಿಳೆಯರು ದೇಗುಲ ಪ್ರವೇಶಿಸದಂತೆ ಕಾಯಲಿದ್ದೇವೆ. ತೃಪ್ತಿ ದೇಸಾಯಿ ವಾಪಸಾಗಿದ್ದು ನಮ್ಮ ಹೋರಾಟಕ್ಕೆ ಸಂದ ಜಯ.
ರಾಹುಲ್‌ ಈಶ್ವರ್‌, ಅಯ್ಯಪ್ಪ ಧರ್ಮ ಸೇನಾದ ಅಧ್ಯಕ್ಷ

ಭಕ್ತರಿಗೆ ಎಲ್ಲ  ರೀತಿಯ ಅನುಕೂಲಗಳನ್ನು ರಾಜ್ಯ ಸರಕಾರ ಕಲ್ಪಿಸಿಕೊಟ್ಟಿದೆ. ಆಗಸ್ಟ್‌ನಲ್ಲಿ  ಉಂಟಾಗಿದ್ದ ಪ್ರವಾಹದಿಂದ ನಿರ್ಮಿಸಲಾಗಿದ್ದ ಮೂಲ ಸೌಕರ್ಯ ನಾಶವಾಗಿತ್ತು.
ಕಡಕಂಪಳ್ಳಿ  ಸುರೇಂದ್ರನ್‌, ಕೇರಳ ಮುಜರಾಯಿ ಸಚಿವ

ಈ ಸಾಲಿನಲ್ಲಿ  ಭಕ್ತರಿಗೆ ಅಗತ್ಯವಾಗಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರಕಾರ ವಿಫ‌ಲವಾಗಿದೆ. ಟಿಡಿಬಿಯ ಪ್ರಯತ್ನ ಈ ನಿಟ್ಟಿನಲ್ಲಿ  ಏನೇನೂ ಸಾಲದು.
ರಮೇಶ್‌ ಚೆನ್ನಿತ್ತಲ, ಕೇರಳ ವಿಪಕ್ಷ ನಾಯಕ

ತೃಪ್ತಿ ದೇಸಾಯಿಯವರೇ, ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲೆಂದು ಬಂದಿರುವ ನೀವು 41 ದಿನಗಳ ವ್ರತಾಚರಣೆ ಮಾಡಿದ್ದೀರಾ? ನಿಮ್ಮ ಇರುಮುಡಿ ಕಟ್ಟು  ಎಲ್ಲಿದೆ?
ಶೋಭಾ ಕರಂದ್ಲಾಜೆ, ಬಿಜೆಪಿ ನಾಯಕಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.