ಮಳೆ ಕೊಯ್ಲು: ಕೊಡಿಯಾಲ ಗ್ರಾ.ಪಂ. ಮಾದರಿ ನಡೆ 


Team Udayavani, Nov 17, 2018, 12:06 PM IST

17-november-8.gif

ಕಾಣಿಯೂರು: ಅಂತರ್ಜಲ ಹೆಚ್ಚಳಕ್ಕೆ ಪೂರಕವಾಗಿ ಇಂಗು ಗುಂಡಿಗಳ ಜತೆ ಮಳೆಕೊಯ್ಲು ಘಟಕ ನಿರ್ಮಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಭೂಮಿಗೆ ಇಂಗಿಸುವುದು ಪ್ರಸ್ತುತ ದಿನಗಳಲ್ಲಿ ತೀರಾ ಆವಶ್ಯ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಸುಳ್ಯ ತಾಲೂಕು ಕೊಡಿಯಾಲ ಗ್ರಾ.ಪಂ. ತನ್ನ ಕಟ್ಟಡದಲ್ಲೆ ಮಳೆ ನೀರು ಕೊಯ್ಲು ಘಟಕ ನಿರ್ಮಿಸಿ, ಮಾದರಿ ಕಾರ್ಯ ಮಾಡಿದೆ.

ಭವಿಷ್ಯಕ್ಕೆ ಪ್ರಯೋಜನ
ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ಭೂಮಿಯೊಳಗೆ ಇಂಗಿದ ನೀರು ಬ್ಯಾಂಕ್‌ನಲ್ಲಿಟ್ಟ ಹಣದಂತೆ ಎನ್ನುತ್ತಾರೆ ಹಿರಿಯರು. ಈ ಹಿಂದಿನ ಕಾಲದಲ್ಲಿ ಎಂತಹ ಬೇಸಿಗೆಯಲ್ಲೂ ಕುಡಿಯುವ ನೀರಿಗೆ, ಕೃಷಿಗೆ ನೀರಿಗೆ ಅಷ್ಟೊಂದು ತಾಪತ್ರಯ ಇರಲಿಲ್ಲ. ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುರಿಯುವ ಮಳೆ ನೀರು ಕೆರೆ, ಬಾವಿ, ಮಣ್ಣಿನ ಕಟ್ಟಗಳಲ್ಲಿ ಶೇಖರಣೆಯಾಗುತ್ತಿತ್ತು. ಆದರೆ ಈಗ ಕೆರೆ, ಬಾವಿ, ಮಣ್ಣಿನ ಕಟ್ಟಗಳು ಕಾಣಸಿಗುವುದೇ ವಿರಳ. ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ನಮ್ಮ ಅಂತರ್ಜಲ ಮಟ್ಟ ಹೆಚ್ಚಳಗೊಂಡು ಭವಿಷ್ಯದ ದಿನಗಳಿಗೆ ಪ್ರಯೋಜನವಾಗಲಿದೆ. 

ಸ್ವಯಂ ಪ್ರೇರಣೆಯಿಂದ ಅಳವಡಿಕೆ
ಹಲವು ಕಡೆಗಳಲ್ಲಿ ಕೆಲವು ಉತ್ಸಾಹಿಗಳು ತಮ್ಮ ಮನೆಯಲ್ಲಿ ಮಳೆ ಕೊಯ್ಲು, ಜಲ ಮರುಪೂರಣ ಘಟಕವನ್ನು ನಿರ್ಮಿಸಿದ್ದಾರೆ. ಇದರಿಂದ ಅವರ ಕೊಳವೆ ಬಾವಿಯಲ್ಲಿ ಬೇಸಿಗೆಯಲ್ಲೂ ನೀರಿನ ಮಟ್ಟ ಈ  ಹಿಂದಿನಂತೆ ಕುಸಿತವಾಗಿಲ್ಲ. ಮಳೆಕೊಯ್ಲಿನ ಮೂಲಕ ಮಳೆ ನೀರನ್ನು ಬಾವಿಗೆ ನೀರು ಇಂಗಿಸಿದರಿಂದ ನೀರು ಬಿರು ಬೇಸಿಗೆಯಲ್ಲೂ ಸಿಗುತ್ತದೆ.

ಉದ್ಯೋಗ  ಖಾತರಿಯಲ್ಲಿ ನಿರ್ಮಾಣ
ಕೊಡಿಯಾಲ ಗ್ರಾ.ಪಂ.ನಲ್ಲಿ ಮಳೆಕೊಯ್ಲ ಘಟಕವನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಯೋಜನೆಯಲ್ಲಿ ಮಾಡಲಾಗಿದೆ. ಅಂದಾಜು 1.45 ಲಕ್ಷ ರೂ ವೆಚ್ಚದ ಈ ಕಾಮಗಾರಿಯಲ್ಲಿ 140 ಮಾನನ ದಿನಗಳ ಕೆಲಸ ಮಾಡಲಾಗಿದೆ. ಮಳೆ ಕೊಯ್ಲು ಘಟಕದ ನೀರು ಇಂಗಲು ಟ್ಯಾಂಕ್‌ ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರಕಾರದ ಉದ್ಯೋಗ ಖಾತರಿ ಯೋಜನೆಯ ಮೂಲಕ ಕೊಳವೆ ಬಾವಿಗಳಿಗೆ ಜಲ ಮರುಪೂರಣ ಘಟಕ ನಿರ್ಮಾಣಕ್ಕೆ ಅವಕಾಶವಿದೆ. ಗ್ರಾ.ಪಂ.ನಲ್ಲಿ ಉದ್ಯೋಗ ಚೀಟಿ ಮಾಡಿಸಿಕೊಂಡು ಯೋಜನೆಯ ಕುರಿತಾದ ಕೆಲ ದಾಖಲೆಗಳನ್ನು ನೀಡಿ ತಮ್ಮ ಮನೆಗಳಲ್ಲೂ ಈ ಘಟಕವನ್ನು ಆರಂಭಿಸಬಹುದು.

ಮಾದರಿ ಯೋಜನೆ 
ಇಂತಹ ಪ್ರಯತ್ನವನ್ನು ಎಲ್ಲ ಗ್ರಾ.ಪಂ.ಗಳು ಅನುಷ್ಠಾನಕ್ಕೆ ತಂದರೆ ಮಾದರಿ ಯೋಜನೆಯಾಗಿ ರೂಪುಗೊಳ್ಳಲು ಸಾಧ್ಯ. ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿಯೂ ಇದು ಸಹಕಾರಿ ಯಾಗಲಿದೆ. ಭೂಮಿ ಯಲ್ಲೂ ತೇವಾಂಶ ನಿಲ್ಲುವ ಜತೆಗೆ ವ್ಯರ್ಥವಾಗಿ ಹರಿದು ಹೋಗುವ ನೀರು ನಮ್ಮ ಭೂಮಿಯಲ್ಲೇ ಇಂಗುತ್ತದೆ.

ಜಲಸಂರಕ್ಷಣೆ ಉದ್ದೇಶ
ಜಲ ಸಂರಕ್ಷಣೆಯ ಹಿತದೃಷ್ಟಿಯಿಂದ ತಾ.ಪಂ. ನಿರ್ದೇಶನದಂತೆ ಆಡಳಿತ ಮಂಡಳಿಯ ಸಹಕಾರದಲ್ಲಿ ಉದ್ಯೋಗ ಖಾತರಿ ಯೋಜನೆಯ ಮೂಲಕ ಈ ಘಟಕ ನಿರ್ಮಿಸಲಾಗಿದೆ. ಸಾರ್ವಜನಿಕರಿಗೂ ಮಳೆಕೊಯ್ಲು ಘಟಕ ನಿರ್ಮಾಣ ಮಾಡಲು ಪೂರಕವಾಗಿ ಸಂದೇಶ ನೀಡುವ ದೃಷ್ಟಿಯಿಂದ ಈ ಘಟಕವನ್ನು ಮಾಡಲಾಗಿದೆ.
– ಮೋಹನ್‌ ಸಾಲಿಯಾನ್‌,
ಅಧ್ಯಕ್ಷರು ಕೊಡಿಯಾಲ ಗ್ರಾ.ಪಂ,

ಎಲ್ಲರಿಗೂ ಸಂದೇಶ
ಈ ಘಟಕವನ್ನು ಉದಾಹರಣೆಯಾಗಿಟ್ಟುಕೊಂಡು ಸಾರ್ವಜನಿಕರೂ ಮಳೆಕೊಯ್ಲು ಘಟಕ ಅನುಷ್ಠಾನ ಮಾಡವಂತಾಗಲಿ ಎಂಬ ಆಶಾಭಾವನೆ ಇದೆ. ಸ್ಥಳೀಯಾಡಳಿದಲ್ಲಿ ಇಂತಹ ಕೆಲಸ ಮಾಡಿದರೆ ಎಲ್ಲರಿಗೂ ಸಂದೇಶ ತಲುಪುವಂತಾಗುತ್ತದೆ. ಈ ನಿಟ್ಟಿನಲ್ಲಿ ಮಳೆಕೊಯ್ಲು ಘಟಕ ನಿರ್ಮಾಣ ಮಾಡಲಾಗಿದೆ.
 - ಹೂವಪ್ಪ ಗೌಡ,
   ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಕೊಡಿಯಾಲ

 ಪ್ರವೀಣ ಚೆನ್ನಾವರ

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.