ತೆಲಂಗಾಣದ ಕದನದಲ್ಲಿ ಗೆಲುವಿಗೆರಾಜ್ಯದ ಗೂಬೆಗಳ ಮಾಟದ ಹಾವಳಿ


Team Udayavani, Nov 17, 2018, 2:53 PM IST

gul-5.jpg

ಸೇಡಂ: ನ.14 ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಿಂದ ಸೇಡಂ ಮಾರ್ಗವಾಗಿ ಹೈದ್ರಾಬಾದಗೆ ಸಾಗಿಸಲಾಗುತ್ತಿದ್ದ ಅದೃಷ್ಟದ ಗೂಬೆಗಳನ್ನು ಪೊಲೀಸರು ವಶಪಡಿಕೊಂಡ ಘಟನೆಗೆ ಹೊಸ ತಿರುವು ದೊರೆಯಲಾರಂಭಿಸಿದೆ.

ಅರಣ್ಯ ಜೀವಿ ಗೂಬೆಗಳ ಪ್ರಕಾರಗಳಲ್ಲಿ ಅದೃಷ್ಟದ ಗೂಬೆ (ಲಕ್ಷ್ಮೀ ಕಟಾಕ್ಷದ) ಗಳನ್ನು ಧನ ಲಾಭ, ವಶೀಕರಣ, ಮಾಟ ಮಂತ್ರಗಳಲ್ಲಿ ಬಳಸುವುದು ತಿಳಿದ ವಿಷಯವಾದರೆ, ಇತ್ತೀಚೆಗೆ ದೊರೆತ ಗೂಬೆಗಳನ್ನು ತೆಲಂಗಾಣದ ಚುನಾವಣೆಯಲ್ಲಿ ಗೆಲುವಿಗಾಗಿ ಬಲಿ ಕೊಡಲು ಕೊಂಡೊಯ್ಯಲಾಗುತ್ತಿತ್ತು ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ತೆಲಂಗಾಣ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಪ್ರತಿನಿತ್ಯ ಚುರುಕಿನ ಪ್ರಚಾರದಲ್ಲಿ ರಾಜಕಾರಣಿಗಳು ತೊಡಗಿದ್ದಾರೆ. ಅಲ್ಲದೇ ಗೆಲ್ಲಲು ಹವಣಿಸುವ ಅನೇಕರು ವಿವಿಧ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಇದರಲ್ಲಿ ಕೆಲವರು ಮಾಟ ಮಂತ್ರಕ್ಕೆ ಮೊರೆ ಹೋಗಿದ್ದಾರೆ. ಗೂಬೆಗಳನ್ನು ಬಲಿಕೊಟ್ಟು ಮಂತ್ರ-ತಂತ್ರದ ಮೂಲಕ ಗೆಲ್ಲುವ ಹುನ್ನಾರಕ್ಕೆ ಕೈ ಹಾಕಿದ್ದು, ಈಗ ಜನರ
ಆಕ್ರೋಶಕ್ಕೆ ಕಾರಣವಾಗಿದೆ. 

ಇತ್ತೀಚೆಗೆ ಜಮಖಂಡಿ, ಶಹಾಪುರ ಮೂಲದ ಆರು ಜನರನ್ನು ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ಸುಶೀಲಕುಮಾರ ತಂಡ ಬಂಧಿಸಿ ಅವರಿಂದ ದೊರೆತ ಎರಡು ಬೃಹತ್‌ ಗಾತ್ರದ ಗೂಬೆಗಳನ್ನು ಚಿತ್ತಾಪುರ ಅರಣ್ಯ ಇಲಾಖೆ ಉಪ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ನಂತರ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಾಗ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಹೈದ್ರಾಬಾದ ಮೂಲದ ಕೆಲ ರಾಜಕಾರಣಿಗಳು ಗೂಬೆಗಳನ್ನು ಬಳಸಿ ಗೆಲ್ಲಲು ಸಂಚು ರೂಪಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಂಧಿತ ಗೂಬೆ ಸಾಗಾಟಗಾರರು ಮತ್ತು ರಾಜಕಾರಣಿಗಳ ನಡುವೆ ಮಧ್ಯವರ್ತಿಗಳು ಇರುವುದು ತಿಳಿದು ಬಂದಿದೆ.

ಮಾಟ-ಮಂತ್ರ ಹೆಚ್ಚು: ದೀಪಾವಳಿ, ಅಮವಾಸ್ಯೆ ಮತ್ತು ಚುನಾವಣೆ ಸಂದರ್ಭದಲ್ಲಿ ತೆಲಂಗಾಣದ ಹೈದ್ರಾಬಾದ್‌, ಮೇದಕ, ರಂಗಾರೆಡ್ಡಿ, ವಿಕಾರಾಬಾದ ಜಿಲ್ಲೆಗಳ ಕೆಲವೆಡೆ ಗೂಬೆಗಳನ್ನು ಮಾಟ ಮಂತ್ರಕ್ಕಾಗಿ ಬಳಸುವ ಪ್ರಕರಣಗಳು ಕಂಡು ಬಂದಿವೆ. ಫೆಬ್ರವರಿ ತಿಂಗಳಲ್ಲಿ ಹೈದ್ರಾಬಾದನಲ್ಲಿ ಗೂಬೆಗಳ ಕಣ್ಣು ಕಿತ್ತಿ, ಮಂತ್ರಿಸಿ ಬಿಟ್ಟು ಹೋಗಲಾಗಿತ್ತು. ವಶೀಕರಣಕ್ಕಾಗಿ ಗೂಬೆಗಳ ಕಣ್ಣು ಮತ್ತು ಮಾಂಸಗಳ ಬಳಕೆ ಮಾಡಲಾಗುತ್ತಿದೆ

ಗೂಬೆಗಳನ್ನು ಸಾಗಿಸುತ್ತಿದ್ದ ಆರೋಪಿತರು ನೀಡಿದ ಮಾಹಿತಿ ಪ್ರಕಾರ ಸೇಡಂನಲ್ಲಿ ಕೆಲ ಮಧ್ಯವರ್ತಿಗಳು ಗೂಬೆಗಳನ್ನು
ಪಡೆದು, ಬೇರೆಡೆ ಸಾಗಿಸುತ್ತಿದ್ದರು. ಆರೋಪಿಗಳು ಸಹ ಮಧ್ಯವರ್ತಿಗಳಿಗೆ ಗೂಬೆಗಳನ್ನು ನೀಡಲು ತೆರಳುತ್ತಿದ್ದರು. ತನಿಖೆ ಜಾರಿಯಲ್ಲಿದೆ. ಮಧ್ಯವರ್ತಿಗಳ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಮುಜಬೋದ್ದಿನ್‌, ಚಿತ್ತಾಪುರ ವಲಯ ಅರಣ್ಯಾಧಿಕಾರಿ 

„ಶಿವಕುಮಾರ ಬಿ. ನಿಡಗುಂದ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.