ಮೇವು ಸಂಗ್ರಹಕ್ಕಾಗಿ ಮಳೆ ಆಶ್ರಿತ ರೈತರ ಹರಸಾಹಸ


Team Udayavani, Nov 17, 2018, 4:45 PM IST

17-november-20.gif

ಕನಕಗಿರಿ: ಒಣ ಬೇಸಾಯ ಪ್ರದೇಶವಾಗಿರುವ ತಾಲೂಕಿನಲ್ಲಿ ಮಳೆ ಬಂದರೆ ಮಾತ್ರ ಬೆಳೆ, ಇಲ್ಲವಾದರೇ ದೇವರೇ ಗತಿ ಎನ್ನುವಂತಹ ಪರಿಸ್ಥಿತಿ ಇದೆ. ಈ ಬಾರಿ ಮುಂಗಾರು, ಹಿಂಗಾರು ಮಳೆಗಳು ಸಂಪೂರ್ಣವಾಗಿ ಕೈಕೊಟ್ಟಿದರಿಂದ ಹುಲಿಹೈದರ್‌, ನವಲಿ, ಮುಸಲಾಪುರ, ಕನಕಗಿರಿ ಭಾಗದ ರೈತರು ಕಂಗಾಲಾಗಿದ್ದಾರೆ. ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳುವುದರ ಜೊತೆಗೆ ಜಾನುವಾರುಗಳಿಗೆ ಮೇವು ಸಂಗ್ರಹಿಸುವುದೇ ರೈತರಿಗೆ ಸವಾಲಿನ ಕೆಲಸವಾಗಿದೆ.

ಕನಕಗಿರಿ ತಾಲೂಕು ಒಣ ಬೇಸಾಯ ಪ್ರದೇಶವಾಗಿದ್ದು, ಈ ಭಾಗದ ರೈತರು ಜಾನುವಾರಗಳಿಗೆ ಮೇವು ಸಂಗ್ರಹಿಸಲು ನೀರಾವರಿ ಭಾಗವಾದ ಗಂಗಾವತಿ, ಕಾರಟಗಿಯತ್ತ ಅಲೆದಾಡುತ್ತಿದ್ದಾರೆ. ನೀರಾವರಿ ಭಾಗದಲ್ಲಿ ಬಿತ್ತನೆ ಮಾಡಿದ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಭತ್ತದ ಮೇವು ಸಂಗ್ರಹಿಸಲು ಮುಂದಾಗಿದ್ದಾರೆ. ನೀರಾವರಿ ಭಾಗದಲ್ಲಿ ಬೇಸಿಗೆ ಬೆಳೆಗೆ ನೀರು ಹರಿಸುವ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ. ಆದ್ದರಿಂದ ನೀರಾವರಿ ಆಶ್ರಿತ ರೈತರ ತಮ್ಮ ಜಾನುವಾರಗಳಿಗೆ ಮೇವು ಬೇಕೆಂದು ಮಾರಾಟಕ್ಕೆ ಮುಂದಾಗುತ್ತಿಲ್ಲ. ಇನ್ನು ಒಣ ಬೇಸಾಯ ಪ್ರದೇಶದ ರೈತರು ಒಂದು ಟ್ರ್ಯಾಕ್ಟರ್‌ ಮೇವಿಗೆ 4ರಿಂದ 5 ಸಾವಿರ ರೂ. ನೀಡಿ ಖರೀದಿ ಮಾಡುತ್ತಿದ್ದಾರೆ.

ಗೋಶಾಲೆ ಪ್ರಾರಂಭಿಸಿಲ್ಲ: ಕನಕಗಿರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಸರ್ಕಾರ ಘೋಷಿಸಿದೆ. ಆದರೆ ಇವರೆಗೂ ಯಾವುದೇ ಬರ ಕಾಮಗಾರಿ, ಗೋ ಶಾಲೆಯನ್ನೂ ಪ್ರಾರಂಭಿಸಿಲ್ಲ. ಕೆಲ ರೈತರು ಮೇವು ಇಲ್ಲದಿರುವ ಕಾರಣ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈ ಭಾಗದ ರೈತರು ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆಯನ್ನು ಪ್ರಾರಂಭಿಸಬೇಕೆಂಬುವುದು ರೈತರ ಒತ್ತಾಯಿಸುತ್ತಿದ್ದಾರೆ.

ಮೇವಿನ ಕೊರತೆ ಇರುವ ರೈತರಿಗೆ ಪಶು ಸಂಗೋಪನೆ ಇಲಾಖೆಯಿಂದ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಮೇವಿನ ಬೀಜಗಳು ಬಿತ್ತನೆ ಮಾಡಿ 40 ದಿನಗಳಲ್ಲಿ ಮೇವು ಕಟಾವು ಮಾಡಬಹುದು. ಈ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಬಹುದು.
. ಡಾ| ಮಲ್ಲಯ್ಯ ತಾಲೂಕು ಪಶು ವೈದ್ಯಾಧಿಕಾರಿ.

ಕನಕಗಿರಿ, ಹುಲಿಹೈದರ್‌, ನವಲಿ ಭಾಗದಲ್ಲಿ ಗೋ ಶಾಲೆ ಪ್ರಾರಂಭಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಜಾನುವಾರುಗಳನ್ನು ಉಳಿಸಿಕೊಳ್ಳಲು ಹಣ ನೀಡಿ ಮೇವು ಖರೀದಿ ಮಾಡುತ್ತಿದ್ದೇವೆ.
. ರಾಘವೇಂದ್ರ, ರೈತ

ಗೋ ಶಾಲೆಯನ್ನು ಪ್ರಾರಂಭಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇವೆ. ಗೋ ಶಾಲೆ ಪ್ರಾರಂಭವಾಗಲು 1 ತಿಂಗಳ ಆಗಬಹುದು. ಮೇವಿನ ಅವಶ್ಯಕತೆ ಇರುವ ರೈತರು ಟ್ಯಾಕ್ಟರ್‌ ತೆಗೆದುಕೊಂಡು ಬಂದರೆ ನಾನೇ ಮೇವು ಖರೀದಿ ಮಾಡಿಕೊಡುತ್ತೇನೆ.
.ಬಸವರಾಜ ದಢೇಸುಗೂರು, ಶಾಸಕ.

„ಶರಣಪ್ಪ ಗೋಡಿನಾಳ 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.