ತಂಗಿ ಸಾವಿನ ಸೇಡು ತೀರಿಸಿಕೊಂಡ ಸೋದರ!


Team Udayavani, Nov 18, 2018, 6:00 AM IST

krishna-pooja.jpg

ಕಲಬುರಗಿ: ತನ್ನ ತಂಗಿಗಾದ ಅನ್ಯಾಯದ ಸೇಡು ತೀರಿಸಿಕೊಳ್ಳಲು ಸಹೋದರನೊಬ್ಬ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ ಘಟನೆ ಗುರುವಾರ ನಗರ ಹೊರವಲಯದ ರಾಮನಗರದಲ್ಲಿ ನಡೆದ ವಿಷಯ ತನಿಖೆಯಿಂದ ಬಹಿರಂಗವಾಗಿದೆ.

ರಾಮನಗರದಲ್ಲಿ ನಡೆದ ಗೃಹಿಣಿ ಶರ್ಮಿಳಾ ಸಂಜಯ ಕಾವಲೆ (27) ಕೊಲೆ ಪ್ರಕರಣವನ್ನು ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಶರ್ಮಿಳಾ ಕೊಲೆ ಪ್ರಕರಣ ಸಂಬಂಧ 26 ವರ್ಷದ ಶಿವಾಜಿ ನಗರದ ನಿವಾಸಿ ಕೃಷ್ಣ ಲಾಲಪ್ಪ ಗಾಜರೆ ಎಂಬಾತನನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಕೃಷ್ಣ ತನ್ನ ಸಹೋದರಿಯನ್ನು ವರಿಸಬೇಕಿದ್ದ ಸಹೋದರ ಮಾವ ಸಂಜಯನನ್ನು ಶರ್ಮಿಳಾ ಮದುವೆಯಾಗಿದ್ದರಿಂದ ಕೃಷ್ಣನ ತಂಗಿ ಪೂಜಾ ಮಾನಸಿಕವಾಗಿ ನೊಂದು ಕಾಯಿಲೆಯಿಂದ ನರಳಿ ಮೃತಪಟ್ಟಿದ್ದಳು. ಈ ಹಿನ್ನೆಲೆಯಲ್ಲಿ ಶರ್ಮಿಳಾ ಮೇಲೆ ದ್ವೇಷ ಬೆಳೆಸಿಕೊಂಡು ಅವಳ ಕೊಲೆಗೆ ಸಂಚು ಹೂಡಿದ್ದ ಕೃಷ್ಣ ಗುರುವಾರ ಶರ್ಮಿಳಾ ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾಗಿ ಆರೋಪಿ ಬಾಯಿಟ್ಟಿದ್ದಾನೆ ಎಂದು ಎಸ್‌ಪಿ ಎನ್‌. ಶಶಿಕುಮಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಂಗಿ ಸಾವಿನ ಸೇಡು:
ಕೊಲೆಯಾದ ಶರ್ಮಿಳಾ ಪತಿ ಸಂಜಯ ಕುಮಾರ ಮತ್ತು ಆರೋಪಿ ಕೃಷ್ಣ ಸೋದರ ಮಾವ-ಅಳಿಯ ಸಂಬಂಧಿಗಳಾಗಿದ್ದಾರೆ. ಸಂಜಯ ಆರೋಪಿ ಕೃಷ್ಣನಿಗೆ ಅಕ್ಕನ ಮಗ. ಅಂತೆಯೇ ಕೃಷ್ಣನ ತಂಗಿ ಪೂಜಾ ಎಂಬಾಕೆಯನ್ನು ಸಂಜಯನಿಗೆ ಕೊಟ್ಟು ವಿವಾಹ ಮಾಡಬೇಕೆಂದು ಇಬ್ಬರ ಮನೆಯವರು ಮಾತುಕತೆ ನಡೆಸುತ್ತಿದ್ದರು. ಆದರೆ, ಪೂಜಾಳನ್ನು ಮದುವೆಯಾಗಲು ಸಂಜಯ ನಿರಾಕರಿಸಿ, ಆಳಂದ ತಾಲೂಕಿನ ಸರಸಂಬಾ ಗ್ರಾಮದ ನಿವಾಸಿಯಾಗಿದ್ದ ಶರ್ಮಿಳಾಳನ್ನು 3 ವರ್ಷಗಳ ಹಿಂದೆ ಮದುವೆಯಾಗಿದ್ದ.

ಇದೇ ವೇಳೆ ತನ್ನ ಮದುವೆ ನಿಂತಿದ್ದರಿಂದ ಪೂಜಾ ಅನಾರೋಗ್ಯಕ್ಕೆ ತುತ್ತಾಗಿ, ಮೂಗು ಮತ್ತು ಹಲ್ಲಿನಲ್ಲಿ ರಕ್ತ ಸ್ರಾವವಾಗುತ್ತಿತ್ತು. ಹೀಗಾಗಿ ವರ್ಷದ ಹಿಂದೆ ಪೂಜಾಳನ್ನು ಹೆಚ್ಚಿನ ಚಿಕಿತ್ಸೆಗೆಂದು ಸೊಲ್ಲಾಪುರದ ಯಶೋಧರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶರ್ಮಿಳಾ ಪೂಜಾಳನ್ನು ನೋಡಲೆಂದು ಯಶೋಧರ ಆಸ್ಪತ್ರೆಗೆ ಭೇಟಿ ನೀಡಿದ್ದಳು. ಇದಾದ ಅರ್ಧ ಗಂಟೆಯಲ್ಲಿ ಪೂಜಾ ಅಸುನೀಗಿದ್ದು, ಶರ್ಮಿಳಾ ಭಾನಾಮತಿ ಮಾಡಿಸಿದ್ದರಿಂದ ಪೂಜಾ ಮೃತಪಟ್ಟಿರಬೇಕೆಂಬ ಅನುಮಾನ ಕೃಷ್ಣನಲ್ಲಿ ಹುಟ್ಟಿಕೊಂಡಿತ್ತು.

ಕೊಲೆ ಮಾಡಿ ತಂಗಿಗೆ ಶ್ರದ್ಧಾಂಜಲಿ:
ಸಹೋದರಿ ಪೂಜಾ ಮೃತಪಟ್ಟ ನಂತರ ಶರ್ಮಿಳಾಳ ಮೇಲೆ ಕೃಷ್ಣನಿಗೆ ದ್ವೇಷ ಕಾಡುತ್ತಿತ್ತು. ನ.15ರಂದು ಶರ್ಮಿಳಾ ಒಬ್ಬಳೇ ಮನೆಯಲ್ಲಿದ್ದಾಗ ಕೃಷ್ಣ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಕೊಲೆ ಮಾಡಿದ ನಂತರ ಹಂತಕ ಪ್ರಕರಣದ ದಾರಿ ತಪ್ಪಿಸುವ ಉದ್ದೇಶದಿಂದ ಮನೆಯಲ್ಲಿನ ವಸ್ತುಗಳನ್ನು ಚಿಲ್ಲಾಪಿಲ್ಲಿ ಮಾಡಿ, ಶರ್ಮಿಳಾಳ ಮಾಂಗ್ಯಲ ಸರ, ಮತ್ತಿತರ ಆಭರಣ ಮತ್ತು ಆಕೆಯ ಮೊಬೈಲ್‌, ಹಣ ತೆಗೆದುಕೊಂಡು ಅಲ್ಲಿಂದ ಕಾಲ್ಕಿತ್ತಿದ್ದ. ಬಳಿಕ ಹಂತಕ ಕೃಷ್ಣ ತನ್ನ ಮನೆಗೆ ಹೋಗಿ ಮೃತ ತಂಗಿ ಪೂಜಾಳ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
 

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.