ರೈತರ ಅಂಗೈಲಿ ಜಮಿನಿನ ಸಮಗ್ರ ಚಿತ್ರಣ


Team Udayavani, Nov 18, 2018, 6:35 AM IST

websuite.jpg

ಬೆಂಗಳೂರು: ಮೊಬೈಲ್‌ನಲ್ಲಿ ದಾಖಲಾಗುವ ಕೇವಲ ಅಕ್ಷಾಂಶ-ರೇಖಾಂಶಗಳಿಂದ ರೈತರು ಈಗ ತಮ್ಮ ಜಮೀನಿನ ಮಣ್ಣಿನ ಫ‌ಲವತ್ತತೆ ಅರಿಯಬಹುದು. ಈ ಮೂಲಕ ಅನಗತ್ಯ ರಸಗೊಬ್ಬರ ಬಳಕೆಗೆ ಕಡಿವಾಣ ಬೀಳಲಿದ್ದು, ಶೇ.40ರಷ್ಟು ರಾಸಾಯನಿಕ ವೆಚ್ಚ ತಗ್ಗಿಸಬಹುದು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗವು ತುಮಕೂರು ಸಿದ್ಧಗಂಗಾ ತಾಂತ್ರಿಕ ಸಂಸ್ಥೆ ಸಹಯೋಗದಲ್ಲಿ “ಮಣ್ಣು ಪರೀಕ್ಷೆ ಬೆಳೆ ಸ್ಪಂದನೆ ಪ್ರಾಯೋಜನೆ’ಯಲ್ಲಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದು, ದೇಶದಲ್ಲಿ ಮೊಟ್ಟಮೊದಲ ಬಾರಿಗೆ ತುಮಕೂರಿನಲ್ಲಿ ಈ ತಂತ್ರಜ್ಞಾನದ ಪ್ರಯೋಗ ನಡೆಯುತ್ತಿದೆ. ಇದು ಯಶಸ್ವಿಯಾದರೆ, ದೇಶಕ್ಕೆ ಈ ತಂತ್ರಜ್ಞಾನ ಮಾದರಿ ಆಗಲಿದೆ. ಈ ನಿಟ್ಟಿನಲ್ಲಿ ಭೂಪಾಲ್‌ನ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಆಸಕ್ತಿ ತೋರಿಸಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ನಿಂತು ಮೊಬೈಲ್‌ನಲ್ಲಿರುವ “ಕಂಪಾಸ್‌’ ಮೇಲೆ ಕ್ಲಿಕ್‌ ಮಾಡಿದರೆ ಸಾಕು, ಎರಡೂ ತುದಿಗಳಲ್ಲಿ ಅಕ್ಷಾಂಶ-ರೇಖಾಂಶಗಳು ಕಾಣಿಸುತ್ತವೆ. ಅದನ್ನು ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ “ಕೃಷಿ ಗಣಕ’ದಲ್ಲಿ ನಮೂದಿಸಿದರೆ, ಜಮೀನಿನ ಫ‌ಲವತ್ತತೆಯ ಇಡೀ ಚಿತ್ರಣ ಸಿಗುತ್ತದೆ. ಜತೆಗೆ ನೀವು ಬೆಳೆಯುವ ಬೆಳೆಗೆ ಇಳುವರಿ ಗುರಿಯನ್ನು ತಿಳಿಸಿದರೆ, ಅದಕ್ಕೆ ಅಗತ್ಯವಿರುವ ರಸಗೊಬ್ಬರದ ಮಾಹಿತಿಯನ್ನೂ ನೀಡುತ್ತದೆ. ಇದರಿಂದ ಅನಗತ್ಯ ಗೊಬ್ಬರ ಬಳಕೆ ತಪ್ಪಲಿದೆ. ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಈ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ತುಮಕೂರು ಜಿಲ್ಲೆಯಲ್ಲಿ ಒಂದೇ ಹಂಗಾಮಿನ ಕೇವಲ ಒಂದು ಬೆಳೆಯಲ್ಲಿ ಕನಿಷ್ಠ ಎರಡು ಕೋಟಿ ರೂ. ಉಳಿತಾಯ ಮಾಡಬಹುದು!

ಈಗಿರೋದು ಬೆಳೆಗೆ ತಕ್ಕಂತೆ ಗೊಬ್ಬರ
ಪ್ರಸ್ತುತ ರೈತರು ಬೆಳೆಗೆ ತಕ್ಕಂತೆ ಗೊಬ್ಬರ ಹಾಕುತ್ತಿದ್ದಾರೆ. ಆದರೆ, ಮಣ್ಣಿನ ಫ‌ಲವತ್ತತೆಗೆ ಅನುಗುಣವಾಗಿ ಬಿತ್ತನೆ ಹಾಗೂ ರಸಗೊಬ್ಬರ ಬಳಕೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಜಿಪಿಎಸ್‌ ಮೂಲಕ ಸುಮಾರು ಹತ್ತು ಸಾವಿರ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ, ಆ ಎಲ್ಲ ದತ್ತಾಂಶಗಳನ್ನು ಜಿಐಎಸ್‌ನಲ್ಲಿ ಹಾಕಿ, ಮಣ್ಣಿನ ಫ‌ಲವತ್ತತೆ ನಕ್ಷೆ ತಯಾರಿಸಲಾಗಿದೆ. ಅದೇ ರೀತಿ, ಮತ್ತೂಂದೆಡೆ 1970ರಿಂದ ಈವರೆಗಿನ 50ಕ್ಕೂ ಹೆಚ್ಚು ಬೆಳೆಗಳ ಇಳುವರಿ ಗುರಿ ಸಮೀಕರಣಗಳನ್ನು ಮಾಡಿದ್ದು, ಆ ಮಾಹಿತಿಯನ್ನೂ ಹಾಕಲಾಗಿದೆ. ಇದರಿಂದ ರೈತರಿಗೆ ಮಣ್ಣಿನಲ್ಲಿರುವ ಪೋಷಕಾಂಶಗಳ ಪ್ರಮಾಣ ಮತ್ತು ಆ ಜಮೀನಿನ ಇಳುವರಿ ಸಾಮರ್ಥ್ಯ ಎರಡೂ ಸಿಗುತ್ತದೆ.

ಈ ಸಂಬಂಧ http://krishiganaka.sit.ac.in  ಅಭಿವೃದ್ಧಿಪಡಿಸಲಾಗಿದ್ದು, ಈ ಎಲ್ಲ ಮಾಹಿತಿಯನ್ನೂ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ರೈತರು ಮೊಬೈಲ್‌ನಲ್ಲಿ ಸಂಗ್ರಹಿಸಿದ ಅಕ್ಷಾಂಶ-ರೇಖಾಂಶಗಳನ್ನು ಹಾಕಿದ ತಕ್ಷಣ ಪಕ್ಕದ ಕಾಲಂನಲ್ಲಿ ಜಮೀನಿನ ಇಳುವರಿಯ ಸರಾಸರಿ ಸಾಮರ್ಥ್ಯ ಬರುತ್ತದೆ. ಅದರಲ್ಲಿ ಇಳುವರಿ ಗುರಿ ನಮೂದಿಸುತ್ತಿದ್ದಂತೆ ಆ ಬೆಳೆಗೆ ಬೇಕಾದ ರಸಗೊಬ್ಬರ ಪ್ರಮಾಣ ದೊರೆಯುತ್ತದೆ. ಅದನ್ನು ಆಧರಿಸಿ ರೈತರು ಬೆಳೆಯಬಹುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದ ವಿಜ್ಞಾನಿ ಡಾ.ಪಿ.ಕೆ. ಬಸವರಾಜ ವಿವರಿಸಿದರು.

ಇಂದು ಲೋಕಾರ್ಪಣೆ
ಕೃಷಿ ಗಣಕವು ಕನ್ನಡ, ಇಂಗ್ಲಿಷ್‌, ಹಿಂದಿ, ತಮಿಳು ಸೇರಿದಂತೆ ಹತ್ತು ಭಾಷೆಗಳಲ್ಲಿ ಪರಿಚಯಿಸಲಾಗಿದೆ. ಭಾನುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಈ ವೆಬ್‌ಸೈಟ್‌ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಪ್ರಯೋಗ ಯಶಸ್ವಿಯಾದರೆ, ಇದೇ ಮಾದರಿಯನ್ನು ದೇಶಾದ್ಯಂತ ಅಳವಡಿಸುವ ಬಗ್ಗೆ ಭಾರತೀಯ ಮಣ್ಣು ವಿಜ್ಞಾನ ಸಂಸ್ಥೆ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಚರ್ಚೆ ಕೂಡ ನಡೆದಿದೆ ಎಂದು ಡಾ.ಬಸವರಾಜ ಹೇಳಿದರು.

ಒಂಬತ್ತು ಜಿಲ್ಲೆಗಳು ಯಾವುವು?
ತುಮಕೂರು, ಚಿತ್ರದುರ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿನ ಸುಮಾರು 10 ಸಾವಿರ ಮಣ್ಣಿನ ಮಾದರಿ ಸಂಗ್ರಹಿಸಲಾಗಿದೆ. ಕಂದಾಯ ಗ್ರಾಮಗಳ ಸಂಖ್ಯೆ ಆಧರಿಸಿ ಖುದ್ದು ತಜ್ಞರು ಸ್ಥಳಕ್ಕೆ ತೆರಳಿ ಮಾದರಿ ಸಂಗ್ರಹಿಸಿದ್ದಾರೆ. ಈ ತಂತ್ರಜ್ಞಾನವು ಶೇ. 70ರಷ್ಟು ನಿಖರತೆಯನ್ನು ಹೊಂದಿದೆ.

ಏನು ವ್ಯತ್ಯಾಸ?
ಮಣ್ಣಿನ ಆರೋಗ್ಯ ಕಾರ್ಡ್‌ ರೈತರ ಕೈಸೇರಲು ತಿಂಗಳು ಹಿಡಿಯುತ್ತದೆ. ಅಷ್ಟೊತ್ತಿಗೆ ಬಿತ್ತನೆಯಾಗಿ, ರಸಗೊಬ್ಬರವೂ ಹಾಕಲಾಗಿರುತ್ತದೆ. ಹಾಗಾಗಿ, ನಿರೀಕ್ಷಿತ ಪ್ರಯೋಜನ ಆಗುವುದಿಲ್ಲ. ಆದರೆ, “ಕೃಷಿ ಗಣಕ’ದಲ್ಲಿ ಕೆಲವೇ ನಿಮಿಷಗಳಲ್ಲಿ ರೈತನ ಅಂಗೈನಲ್ಲಿ ಈ ಮಾಹಿತಿ ಲಭ್ಯವಾಗುವುದರಿಂದ ಸಮಯ ಉಳಿತಾಯದ ಜತೆಗೆ ಇಳುವರಿ ಗುರಿ ಆಧಾರಿತ ರಸಗೊಬ್ಬರ ಪ್ರಮಾಣ ತಿಳಿಯಬಹುದು.

– ವಿಜಯಕುಮಾರ್‌ ಚಂದರಗಿ
 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.