ಬೇಸಿಗೆ ಮುನ್ನವೇ ಕುಡಿವ ನೀರಿನ ಸಮಸ್ಯೆ ಉಲ್ಬಣ


Team Udayavani, Nov 18, 2018, 12:06 PM IST

bid-2.jpg

ಭಾಲ್ಕಿ: ಬೇಸಿಗೆ ಪ್ರಾರಂಭವಾಗುವ ಮುನ್ನವೇ ತಾಲೂಕಿನಾದ್ಯಂತ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆರಂಭದಲ್ಲಿ ಉತ್ತಮವಾಗಿದ್ದ ಮುಂಗಾರು ಮಳೆ ನಂತರದ ದಿನಗಳಲ್ಲಿ ಮಳೆ ಕಣ್ಮರೆಯಾಗಿ, ಹಿಂಗಾರು ಮಳೆಯೂ ಬಾರದಿರುವುದರಿಂದ ಜನ ಜಾನುವಾರಗಳು ನೀರಿಗಾಗಿ ಪರಿತಪಿಸುವಂತಾಗಿದೆ.

ಕಳೆದ ಸಾಲಿನಲ್ಲಿ ಉತ್ತಮ ಮಳೆಯಾಗಿ ಎಲ್ಲವೂ ಚನ್ನಾಗಿತ್ತು. ಆದರೆ ಈ ವರ್ಷ ಪ್ರಾರಂಭದ ಜೂನ್‌, ಜುಲೈ ತಿಂಗಳಲ್ಲಿ ಸ್ವಲ್ಪಮಟ್ಟಿಗೆ ಮಳೆಯಾಗಿದ್ದು ಬಿಟ್ಟರೆ ಇಲ್ಲಿಯ ವರೆಗೆ ಹೇಳಿಕೊಳ್ಳುವಂತಹ ಮಳೆಯಾಗಿಲ್ಲ. ಹೀಗಾಗಿ ಕುಡಿಯುವ ನೀರಿಗಾಗಿ ತಾಲೂಕಿನ ಗ್ರಾಮಸ್ಥರು ಪರದಾಡುವಂತಾಗಿದೆ.
ಚಳಿಗಾಲದಲ್ಲಿಯೇ ಇಷ್ಟು ಸಮಸ್ಯೆಯಾಗಿದೆ. ಇನ್ನು ಬೇಸಿಗೆ ಕಾಲದಲ್ಲಿ ಎಂತಹ ಪರಿಸ್ಥಿತಿ ಉಂಟಾಗಬಹುದು ಎಂದು ಜನರಿಗೆ ಚಿಂತೆ ಕಾಡತೊಡಗಿದೆ.

ತೇಗಂಪೂರ ಗ್ರಾಮದಲ್ಲಿ ಕೆಲವು ವರ್ಷಗಳ ಹಿಂದೆ ಕೊರೆದ ಹತ್ತು ಕೊಳವೆ ಬಾವಿಗಳಿವೆ. ಆದರೆ ಅವು ನೀರಿಲ್ಲದೆ ಬತ್ತಿ ಹೋಗಿವೆ. ಈಚೆಗೆ 3 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಆದರೆ ಪ್ರಯೋಜನವಾಗಿಲ್ಲ. 700 ಅಡಿ ಆಳದ ವರೆಗೆ ಕೊರೆದರೂ ನೀರು ಲಭ್ಯವಾಗಿಲ್ಲ ಎಂದು
ಹೇಳುತ್ತಾರೆ ತೇಗಂಪೂರ ಗ್ರಾಮದ ನಿವಾಸಿಗರು. ತಾಲೂಕು ಆಡಳಿತದಿಂದ ತೇಗಂಪೂರ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದೆ. ಆದರೆ ಕುಟುಂಬವೊಂದಕ್ಕೆ 6 ಕೊಡ ಮಾತ್ರ ನೀರು ಲಭಿಸುತ್ತಿದೆ. ಆದರೆ ಅಗತ್ಯವಿರುವ ಹೆಚ್ಚಿನ ನೀರು ಪಡೆಯಲು ದೂರದ ಹೊಲಗಳಿಗೆ ಮಕ್ಕಳು, ಮಹಿಳೆಯರು ಸೇರಿ ಅಲಿಯಬೇಕಾಗಿದೆ ಎನ್ನುವುದು ಗ್ರಾಮಸ್ಥರ ಅಳಲು.

ಅ.26ರರಿಂದ ತಾಲೂಕಿನ ತೇಗಂಪೂರ ಗ್ರಾಮದಲ್ಲಿ ಮಾತ್ರ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನ  ಒಟ್ಟು 44 ಗ್ರಾಮಗಳಲ್ಲಿ ನೀರಿನ ತೊಂದರೆ ಇದೆ. ಇವುಗಳಲ್ಲಿ 8 ಗ್ರಾಮಗಳಿಗೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡುವ ಬಗ್ಗೆ ತಾಲೂಕು ಆಡಳಿತದಿಂದ ನೀರು ಸರಬರಾಜು ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ತಹಶೀಲ್ದಾರ್‌ ಮನೋಹರ ಸ್ವಾಮಿ ಮಾಹಿತಿ ನೀಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಗ್ರಾಮ ಸಮೀಪದ ಮಹಾದೇವ ಮಂದಿರ ಹತ್ತಿರ 10 ಎಕರೆ ಪ್ರದೇಶದ ಕೆರೆಯನ್ನು ಇನ್ನೂ ಆಳವಾಗಿ ಹೂಳೆತ್ತುವ ಕಾರ್ಯವಾಗಬೇಕು. ಅಲ್ಲದೇ ಕೆರೆಗೆ ತಡೆಗೋಡೆ ನಿರ್ಮಿಸಿ, ತುಂಬಿದ ಕೆರೆಯ ನೀರು ಹರಿದುಹೋಗಲು ಇರುವ ನಾಲೆ, ತಡೆಗೋಡೆ ದುರಸ್ತಿಗೆ ಮುಂದಾಗಬೇಕು ಎನ್ನುವುದು ಗ್ರಾಮಸ್ಥರ  ಒತ್ತಾಯ.

ತಾಲೂಕಿನ ಪ್ರತಿ ಗ್ರಾಮಗಳಲ್ಲೂ ಕೆರೆಗಳಿವೆ. ಈ ಕೆರೆಗಳಿಗೆ ಕಾಯಕಲ್ಪ ನೀಡಿದಲ್ಲಿ ಮಳೆ ಅಭಾವದಿಂದ ಉಂಟಾಗುವ ನೀರಿನ ತೊಂದರೆ ತಪ್ಪಿಸಬಹುದು ಎನ್ನುವುದು ಚಿಂತಕರ ಅಭಿಮತವಾಗಿದೆ. 

„ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.