9 ದಿನಗಳ ಗೋವಾ ಚಲನಚಿತ್ರೋತ್ಸವಕ್ಕೆ ಚಾಲನೆ ಇಂದು


Team Udayavani, Nov 20, 2018, 6:00 AM IST

goa.jpg

ಪಣಜಿ: ಒಂಭತ್ತು ದಿನಗಳ 49ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಇಫಿ) ಮಂಗಳವಾರ (ನ.20) ಆರಂಭವಾಗಲಿದ್ದು, ಪ್ರವಾಸಿಗರ ರಾಜ್ಯವಾದ ಗೋವಾದ ಚಿತ್ರನಗರಿ ಪಣಜಿ ಅತ್ಯಂತ ಸಂಭ್ರಮದಿಂದ ಸಿದ್ಧಗೊಂಡಿದೆ.

ನ.20 ರಿಂದ 28 ರವರೆಗೆ ನಡೆಯುವ 49 ನೇ ಇಫಿ ಚಲನಚಿತ್ರೋತ್ಸವದಲ್ಲಿ ಒಟ್ಟು 68 ದೇಶಗಳ 212 ಸಿನಿಮಾಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗೊಳ್ಳುವವು. ಚಿತ್ರೋತ್ಸವದ ಉದ್ಘಾಟನೆ ಅಪರಾಹ್ನ 4.30ಕ್ಕೆ ನಗರದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೋವಾದ ಗೌರ್ನರ್‌ ಮೃದುಲಾ ಸಿನ್ಹಾ ಉದ್ಘಾಟಿಸುವರು. ಕೇಂದ್ರ ಸಚಿವ ರಾಜ್ಯವರ್ಧನ್‌ಸಿಂಗ್‌ ರಾಥೋಡ್‌, ಗೋವಾದ ಲೋಕೋಪಯೋಗಿ ಖಾತೆ ಸಚಿವ ಸುಧೀರ್‌ ಮಾಧವ್‌ ದವಾಲಿಕರ್‌ ಪಾಲ್ಗೊಳ್ಳುವರು. ಚಿತ್ರೋತ್ಸವದ ಉದ್ಘಾಟನೆ ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಳ್ಳುವರು.

ಸ್ಥಳ ಬದಲಿಲ್ಲ: ಈ ಬಾರಿ ಚಲನಚಿತ್ರೋತ್ಸವವನ್ನು ಡೋನಾ ಪೋಲಾದಲ್ಲಿ ನಿರ್ಮಿಸಲಾಗುವ ಹೊಸ ಸಂಕೀರ್ಣದಲ್ಲಿ ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿತ್ತಾದರೂ, ಈಗ ಹಿಂದಿನ ಐನಾಕ್ಸ್‌ ಆವರಣದಲ್ಲೇ ನಡೆಸಲಾಗುತ್ತಿದೆ. ಚಿತ್ರೋತ್ಸವಕ್ಕೆ ದಿ ಎಸ್ಪರ್ನ ಪೇಪರ್ ಎಂಬ ಚಿತ್ರದ ಮೂಲಕ ಚಾಲನೆ ಸಿಗಲಿದೆ. ಈ ಚಿತ್ರವನ್ನು ಅಮೆರಿಕದ ಜೂಲಿಯನ ಲಾಂಡಾಯಿಸ್‌ ನಿರ್ದೇಶಿಸಿದ್ದು, ಕಾದಂಬರಿಕಾರ ಹೆನ್ರಿ ಜೇಮ್ಸ ರ ಕಾದಂಬರಿ ಆಧಾರಿತವಾದದ್ದು.

ಈ ಬಾರಿಯ ವಿಶೇಷ: ಭಾರತೀಯ ಪನೋರಮಾ ವಿಭಾಗದಲ್ಲಿ ಒಟ್ಟಿ  26 ಕಥಾ ಹಾಗೂ 21 ಕಥೆಯೇತರ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಈ ವಿಭಾಗದ ಉದ್ಘಾಟನಾ ಚಿತ್ರವಾಗಿ ಮಲಯಾಳಂನ ನಿರ್ದೇಶಕ ಷಾಜಿ ಎನ. ಕರುಣ್‌ ನಿರ್ದೇಶಿತ ಚಿತ್ರ ಒಲು ಪ್ರದರ್ಶನಗೊಳ್ಳಲಿದೆ. ಕಥೇತರ ವಿಭಾಗದಲ್ಲಿ ಆದಿತ್ಯ ಸುಹಾಸ್‌ ಜಂಬಳೆ ಅವರು ನಿರ್ದೇಶಿಸಿದ ಖರ್ವಾಸ್‌ ಪ್ರದರ್ಶನಗೊಳ್ಳಲಿದೆ. ಬಂಗಾಳಿ, ಮಲಯಾಳಂ, ಮರಾಠಿ ಸೇರಿ ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳು ಈ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.ಬಹಳ ಪ್ರಮುಖವಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯ ವಿಭಾಗದಡಿ 15 ಚಲನಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಈ ಪೈಕಿ 3 ಭಾರತೀಯ ಚಲನಚಿತ್ರಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿವೆ. ಚಲನ ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ದೂರದರ್ಶನ ವಾಹಿನಿಯಲ್ಲಿ ಸಂಜೆ 4. 30 ರಿಂದ ನೇರ ಪ್ರಸಾರವಾಗಲಿದೆ.

ತುಳು ಚಲನಚಿತ್ರ  ಪ್ರದರ್ಶನ
ಈ ಚಿತ್ರೋತ್ಸವ ತುಳು ಚಲನಚಿತ್ರ ರಂಗಕ್ಕೆ ಮಹತ್ವದ ಮೈಲಿಗಲ್ಲು. ಯಾಕೆಂದರೆ ಭಾರತೀಯ ಪನೋರಮಾ ವಿಭಾಗಕ್ಕೆ ಕನ್ನಡದ ಯಾವ ಚಲನಚಿತ್ರವೂ ಆಯ್ಕೆಯಾಗಿಲ್ಲ. ಪ್ರಾದೇಶಿಕ ಭಾಷಾ ಚಲನಚಿತ್ರ ವಿಭಾಗದಡಿ ಅಭಯಸಿಂಹ ನಿರ್ದೇಶಿಸಿದ ತುಳು ಚಲನಚಿತ್ರ ಪಡ್ಡಾಯಿ ಪ್ರದರ್ಶನಗೊಳ್ಳುತ್ತಿದೆ. ಕರ್ನಾಟಕದ ಪರವಾಗಿ ಎಂಬಂತೆ ಪ್ರದರ್ಶನಗೊಳ್ಳುತ್ತಿರುವ ಏಕೈಕ ಚಲಚನಿತ್ರವಿದು.

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.