ಸಂಪುಟ ಸಭೆಗೆ ಹಾಜರು, ಅರ್ಧಕ್ಕೇ ನಿರ್ಗಮನ
Team Udayavani, Nov 20, 2018, 6:00 AM IST
ಬೆಂಗಳೂರು: ಕಳೆದ ನಾಲ್ಕು ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದ ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ
ಸೋಮವಾರದ ಸಂಪುಟ ಸಭೆಗೆ ಹಾಜರಾಗಿದ್ದರು. ಆದರೆ, ಸಂಪುಟ ಸಭೆಯ ನಡುವೆಯೇ ಮುಖ್ಯಮಂತ್ರಿಯವರ ಮಾತಿನಿಂದ ಅಸಮಾಧಾನಗೊಂಡು ಅರ್ಧಕ್ಕೇ ಎದ್ದು ಹೋದರು.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬೆಲ್ಲ ವದಂತಿಗಳು ಹರಡಿದ್ದವು. ಕಬ್ಬು ಬೆಳೆಗಾರರ ಬಾಕಿ ಪಾವತಿ ವಿಚಾರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ನಿಮ್ಮ ಕಾರ್ಖಾನೆಯಿಂದಲೂ ರೈತರಿಗೆ ಹಣ ಪಾವತಿಯಾಗಬೇಕಿದೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿ ನೀವು ರೈತರ ಪ್ರತಿಭಟನೆ ತಡೆಯಬಹುದಿತ್ತು.ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬಹುದಿತ್ತು ಎಂದು ಹೇಳಿದರು. ಇದರಿಂದ ಬೇಸರಗೊಂಡ ರಮೇಶ ಜಾರಕಿಹೊಳಿ ಸಂಪುಟ ಸಭೆಯಿಂದ ನಿರ್ಗಮಿಸಿದರು. ನಂತರ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆಂಬ ಮಾತುಗಳು ಕೇಳಿಬಂದವು. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಮೇಶ ಜಾರಕಿಹೊಳಿ ರಾಜೀನಾಮೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.
ರಮೇಶ ಜಾರಕಿಹೊಳಿ ಸಹ ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಮೂಲಗಳ ಪ್ರಕಾರ ಕಳೆದ ನಾಲ್ಕು ಸಂಪುಟ ಸಭೆಗೆ ರಮೇಶ್ ಜಾರಕಿಹೊಳಿ ಗೈರು ಹಾಜರಾಗಿದ್ದರು. ಸತತ ಐದು ಬಾರಿ ಗೈರು ಹಾಜರಾದರೆ ಸಂಪುಟದಿಂದ ತೆಗೆಯಲು ಅವಕಾಶವಿದೆ. ಆರ್ಟಿಐ ಕಾರ್ಯಕರ್ತರೊಬ್ಬರು ಈ ಬಗ್ಗೆ ಮಾಹಿತಿ ಸಹ ಪಡೆದು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು.
ಹೀಗಾಗಿ, ಸೋಮವಾರದ ಸಭೆಗೆ ರಮೇಶ ಜಾರಕಿಹೊಳಿ ಹಾಜರಾದರು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಂಪುಟ ಸಭೆಗೆ ಹಾಜರಾಗುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ