ಅಯ್ಯಪ್ಪ ಭಕ್ತರಿಗೆ ಲಾಠಿ ಪ್ರಹಾರ


Team Udayavani, Nov 20, 2018, 8:58 AM IST

ayyappa.jpg

ಶಬರಿಮಲೆ/ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿದ್ದ ಸುಮಾರು 80ಕ್ಕೂ ಅಧಿಕ ಮಂದಿ ಅಯ್ಯಪ್ಪ ಭಕ್ತರ ಮೇಲೆ ರವಿವಾರ ತಡರಾತ್ರಿ ಲಾಠಿ ಪ್ರಹಾರ ನಡೆಸಲಾಗಿದೆ. ಜತೆಗೆ ಅವರನ್ನು ವಶಪಡೆದದ್ದು ಮಾತ್ರವಲ್ಲದೆ ಕೇಸು ದಾಖಲಿಸಲಾಗಿದೆ. 

ಸನ್ನಿಧಾನಂ ಬಳಿಗೆ ತೆರಳುವ 18 ಮೆಟ್ಟಿಲುಗಳ ಬಳಿಯೇ ಇರುವ ಸುತ್ತು ಚಪ್ಪರ (ನಡಪಂಥಲ್‌) ಬಳಿ 80ಕ್ಕೂ ಅಧಿಕ ಭಕ್ತರು ಸೇರಿದ್ದರು. ನಿಷೇಧಾಜ್ಞೆ ಉಲ್ಲಂ ಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಟ್ಟಣಂತಿಟ್ಟ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಭಕ್ತರು ಸುತ್ತು ಚಪ್ಪರ ಪ್ರವೇಶಿಸಲು ಮುಂದಾಗಿ ಅಲ್ಲಿ ವಿಶ್ರಮಿಸ ಬಯಸಿದ್ದರು. ಆದರೆ ರಾತ್ರಿ 10 ಗಂಟೆಯ ಬಳಿಕ ದೇಗುಲದ ಮುಖ್ಯ ಆವರಣ (ಸನ್ನಿಧಾನಂ) ಬಳಿಯಾರೂ ಇರುವಂತಿಲ್ಲ ಎಂದು ಮೊದಲೇ ಸೂಚಿಸಿದ್ದರಿಂದ ಪೊಲೀಸರು ಬಾಗಿಲು ತೆರೆಯಲು ಒಪ್ಪಲಿಲ್ಲ. ಕೋಪಗೊಂಡ ಭಕ್ತರು ಅಲ್ಲಿಗೆ ನುಗ್ಗಲು ಮುಂದಾದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆಯಲು ವಿಫ‌ಲರಾದ ಸಂದರ್ಭದಲ್ಲಿ ಲಾಠಿ ಪ್ರಹಾರ ನಡೆಸಿದ್ದಾರೆ ಮತ್ತು ಬಂಧಿಸಲಾಗಿದೆ. ಪೊಲೀಸರು ಭಕ್ತರ ವಿರುದ್ಧವಾಗಿ ನಡೆದುಕೊಂಡಿಲ್ಲ. ನಿಷೇಧಾಜ್ಞೆ ಉಲ್ಲಂ ಸಿದವರನ್ನು ಕಾನೂನಿನ ಅನ್ವಯ ಬಂಧಿಸಲಾಗಿದೆ ಎಂದು ಪಟ್ಟಣಂತಿಟ್ಟ ಎಸ್‌ಪಿ ಪ್ರತೀಶ್‌ ಕುಮಾರ್‌ ಹೇಳಿದ್ದಾರೆ. ಸೋಮವಾರ ಬೆಳಗ್ಗೆ 3 ಗಂಟೆಗೆ ದೇಗುಲದ ಬಾಗಿಲು ತೆರೆದಾಗ ಕೇವಲ ಬೆರಳೆಣಿಕೆಯ ಅಯ್ಯಪ್ಪ ಭಕ್ತರು ಮಾತ್ರ ಇದ್ದರು.

ಸಿಎಂ ಸಮರ್ಥನೆ, ಆಕ್ರೋಶ: ಪೊಲೀಸರ ಕ್ರಮಕ್ಕೆ ಬಿಜೆಪಿ, ಯುವ ಮೋರ್ಚಾ ಪ್ರಬಲವಾಗಿ ಆಕ್ಷೇಪ ಮಾಡಿವೆ. ಜತೆಗೆ ಕೇರಳಾದ್ಯಂತ ಪ್ರತಿಭಟನೆ ನಡೆಸಿವೆ. ಕಲ್ಲಿಕೋಟೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪೊಲೀಸರ ಕ್ರಮ ಸಮರ್ಥಿಸಿಕೊಂಡಿದ್ದಾರೆ. ಬಂಧಿಸಲಾಗಿರುವವರೆಲ್ಲರೂ ಅಯ್ಯಪ್ಪ ಭಕ್ತರೇ ಅಲ್ಲ. ಅವರು ಅಲ್ಲಿ ಇದ್ದರು ಎನ್ನುವುದಕ್ಕೆ ಘಟನೆಯೇ ಸಾಕ್ಷಿ ಎಂದಿದ್ದಾರೆ. ತೊಂದರೆ ಕೊಡುವ ಉದ್ದೇಶದಿಂದಲೇ ಅಲ್ಲಿ ಸೇರಿದ್ದರು ಎಂದಿದ್ದಾರೆ. ಪೊಲೀಸರ ಕ್ರಮ ಖಂಡಿಸಿ ಕೇರಳದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆ, ರಸ್ತೆ ತಡೆ ನಡೆಸಲಾಗಿದೆ. ಕೇರಳ ಹೈಕೋರ್ಟ್‌ ಕೂಡ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. 

ಇದೇ ವೇಳೆ ಕೊಚ್ಚಿ ಪ್ರಸ್‌ ಕ್ಲಬ್‌ನಲ್ಲಿ ಮೂವರು ಮಹಿಳೆಯರು ಶಬರಿಮಲೆ ಪ್ರವೇಶದ ನಿಟ್ಟಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕೋಲಾಹಲ ಉಂಟಾಗಿದೆ.

ತುರ್ತು ಪರಿಸ್ಥಿತಿಗಿಂತ ಹೆಚ್ಚು: ಲಾಠಿ ಪ್ರಹಾರ, ಕೇಸು ದಾಖಲು ಕ್ರಮವನ್ನು ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಅಲೊ#àನ್ಸ್‌ ಕಣ್ಣಂಥಾನಂ ದೇಗುಲ ಯುದ್ಧ ಭೂಮಿಯಂತಾಗಿದೆ. ಲಾಠಿ ಪ್ರಹಾರದ ಕ್ರಮ ತುರ್ತು ಪರಿಸ್ಥಿತಿಗಿಂತಲೂ ಕಠಿಣ ದಿನಗಳನ್ನು ನೆನಪಿಸಿದೆ. ಭಕ್ತರು ಉಗ್ರರಲ್ಲ. ಅವರು ತೀರ್ಥಯಾತ್ರೆಗಾಗಿ ಬಂದವರು ಎಂದಿದ್ದಾರೆ. ಕೇಂದ್ರ ಸರಕಾರದ ವತಿಯಿಂದ 100 ಕೋಟಿ ರೂ. ನೆರವನ್ನು ಕ್ಷೇತ್ರಕ್ಕೆ ಬಿಡುಗಡೆ ಮಾಡಲಾಗಿದೆ ಎಂದರು.

ಟಿಡಿಬಿಯಿಂದ ಮೇಲ್ಮನವಿ: ಎಲ್ಲಾ ವಯೋಮಿತಿಯ ಮಹಿಳೆಯರಿಗೆ ದೇಗುಲ ಪ್ರವೇಶಾವಕಾಶಕ್ಕೆ ಸೆ.28ರಂದು ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತಿರುವಾಂಕೂರು ದೇವಸ್ವಂ ಮಂಡಳಿ ಸೋಮವಾರ ಮೇಲ್ಮನವಿ ಸಲ್ಲಿಸಿದೆ. ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ನಿರ್ಮಾಣ ಇನ್ನೂ ಬಾಕಿ ಇದೆ. ಹೀಗಾಗಿ, ತೀರ್ಪು ಅನುಷ್ಠಾನಕ್ಕೆ ಸಮಯಾವಕಾಶ ನೀಡಬೇಕು. ಈಗಾಗಲೇ ಇದ್ದ ವ್ಯವಸ್ಥೆ ಆಗಸ್ಟ್‌ನಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದೆ ಎಂದು ಅರಿಕೆ ಮಾಡಿಕೊಳ್ಳಲಾಗಿದೆ.

“ಆಪರೇಷನ್‌ ಬ್ಲೂ ಸ್ಟಾರ್‌’ಗೆ ಸಮ
ಶಬರಿಮಲೆ ಸನ್ನಿಧಾನಂನಲ್ಲಿ ನಡೆದ ಪೊಲೀಸರ ಕ್ರಮ “ಆಪರೇಷನ್‌ ಬ್ಲೂ ಸ್ಟಾರ್‌’ಗೆ ಸಮ ಎಂದಿದ್ದಾರೆ ಕೇರಳ ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ. ಪಿಣರಾಯಿ ವಿಜಯನ್‌ ಅವರೇನು ಹಿಟ್ಲರ್‌ ಮಾದರಿ ಆಡಳಿತ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ದೇಗುಲದಲ್ಲಿದ್ದವರು ನಿಜವಾದ ಭಕ್ತರೇ ಹೊರತು ಬಿಜೆಪಿ ಕಾರ್ಯಕರ್ತರಲ್ಲ ಎಂದಿದ್ದಾರೆ. ಮಂಗಳವಾರ ಯುಡಿಎಫ್ ವತಿಯಿಂದ ಕೇರಳಾದ್ಯಂತ ನಿಷೇಧಾಜ್ಞೆ ಉಲ್ಲಂ ಸುವ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು ಚೆನ್ನಿತ್ತಲ. 1984ರಲ್ಲಿ ಅಮೃತಸರದ ಸ್ವರ್ಣಮಂದಿರದಲ್ಲಿ ಸಿಕ್ಖ್ ಭಯೋತ್ಪಾದಕ ಬಿಂದ್ರನ್‌ವಾಲೆ ಮತ್ತು ಸಂಗಡಿಗರನ್ನು ನಿಗ್ರಹಿಸಲು ಸೇನೆ “ಬ್ಲೂ ಸ್ಟಾರ್‌ ಕಾರ್ಯಾಚರಣೆ’ ನಡೆಸಿತ್ತು.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.