“ಇಂದಿನ ಸ್ಥಿತಿ ತುರ್ತು ಪರಿಸ್ಥಿತಿಗಿಂತಲೂ ಗಂಭೀರ’: ಅರುಣ್ ಶೌರಿ
Team Udayavani, Nov 20, 2018, 4:56 PM IST
ಮುಂಬಯಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರಿಗೆ ತುರ್ತು ಪರಿಸ್ಥಿತಿಯನ್ನು ಹೇರಿದ್ದಕ್ಕಾಗಿ ಹೆಚ್ಚು ವಿಷಾದ ಆಗಿತ್ತು, ಆದರೆ ಇಂದಿನ ಪರಿಸ್ಥಿತಿಯು 1975-77ರಲ್ಲಿದ್ದಕ್ಕಿಂತಲೂ ಹೆಚ್ಚು ಗಂಭೀರವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ರವಿವಾರ ಹೇಳಿದ್ದಾರೆ.
ಒಂದೊಮ್ಮೆ ಸಂಪೂರ್ಣ ವಿಪಕ್ಷವು ಒಗ್ಗಟ್ಟಾದರೆ ಮತ್ತು ಪ್ರತಿಯೊಂದು ಸ್ಥಾನದಲ್ಲಿ ಬಿಜೆಪಿಯ ವಿರುದ್ಧ ಓರ್ವ ಅಭ್ಯರ್ಥಿಯ ತತ್ತÌವನ್ನು ಅನುಸರಣೆ ಮಾಡಿದರೆ 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಥವನ್ನು ನಿಲ್ಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ. ಪತ್ರಕರ್ತನಿಂದ ರಾಜಕಾರಣಿಯಾಗಿ ತಿರುಗಿದ ಶೌರಿ ಅವರು ಇಲ್ಲಿ ಟಾಟಾ ಲಿಟರೇಚರ್ ಫೆಸ್ಟಿವಲ್ನಲ್ಲಿ ನ್ಯಾಯಾಂಗ ವ್ಯವಸ್ಥೆಯೊಳಗೆ ಅಪಾಯ ಎಂಬ ವಿಷಯದ ಮೇಲೆ ಆಯೋಜಿತ ಚರ್ಚೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು.
ಚದುರಿಹೋದ ವಿಪಕ್ಷ
1975ರಲ್ಲಿ (ತುರ್ತು ಪರಿಸ್ಥಿತಿಯ ಸಮಯದಲ್ಲಿ) ಒಂದು ಉತ್ತಮ ವ್ಯಾಖ್ಯಾನಿತ ವಿಪಕ್ಷವಿತ್ತು, ಆದರೆ ಇಂದು ವಿಪಕ್ಷ ಚದುರಿಹೋಗಿದೆ. ಇಂದಿರಾ ಮತ್ತು ನರೇಂದ್ರ ಮೋದಿ ಅವರ ನಡುವಿನ ವ್ಯತ್ಯಾಸವೆಂದರೆ ಇಂದಿರಾ ತಮ್ಮ ಕ್ರಮಗಳ ಬಗ್ಗೆ ಪಶ್ಚಾತ್ತಾಪ ಹೊಂದಿದ್ದರೆಂದು ಹೇಳಬಹುದಾಗಿದೆ ಎಂದು ಶೌರಿ ನುಡಿದಿದ್ದಾರೆ.
ಮಿತಿಯೊಂದನ್ನು ಹೊಂದಿದ್ದರು
ಇಂದು ಯಾವುದೇ ಪಶ್ಚಾತ್ತಾಪವಿಲ್ಲ. ಇಂದಿರಾ ವಿಷಯದಲ್ಲಿ ಹೇಳುವುದಾದರೆ ಅವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸುಮಾರು 1,75,000 ಜನರನ್ನು ಜೈಲಿನಲ್ಲಿ ಬಂಧಿಯಾಗಿರಿಸಿಕೊಂಡಿದ್ದರಾದರೂ ಅದರ ಹಿಂದೆ ಒಂದು ಮಿತಿ ಎಂಬುದನ್ನು ಹೊಂದಿದ್ದರು ಮತ್ತು ಯಾವತ್ತೂ ಅದನ್ನು ದಾಟಿ ಸಾಗಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ, ಇಂದು ಅಂತಹ ಮಿತಿಯ ಬಗ್ಗೆ ಯಾವುದೇ ಚಿಂತನೆ ಅಥವಾ ಗ್ರಹಿಕೆಯಿಲ್ಲ ಎಂದವರು ತಿಳಿಸಿದ್ದಾರೆ.
ತುರ್ತುಪರಿಸ್ಥಿತಿ 19 ತಿಂಗಳ ಕಾಲ ನಡೆಯಿತು, ಆದರೆ ಇಂದು ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಿರಂತರ ಜಾರಿಯಲ್ಲಿದೆ. … ಹಾಗಾಗಿ ಇಂದಿನ ಪರಿಸ್ಥಿತಿ 1975ರಲ್ಲಿ ಇದ್ದಕ್ಕಿಂತಲೂ ಹೆಚ್ಚು ಗಂಭೀರವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಶೌರಿ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ