ನವಿಮುಂಬಯಿ ರಂಗಭೂಮಿ ಫೈನ್‌ಆರ್ಟ್ಸ್: 27ನೇ ವಾರ್ಷಿಕೋತ್ಸವ ಸಂಭ್ರಮ


Team Udayavani, Nov 21, 2018, 12:08 PM IST

1911mum03.jpg

ನವಿಮುಂಬಯಿ: ಸೃಜನಶೀಲತೆ, ಸಂಶೋಧನಾ ಮನೋಭಾವ, ಕಾಲ್ಪನಿಕವಾಗಿ ಯೋಚಿಸುವ ಶಕ್ತಿಯನ್ನು ನೀಡುವ ರಂಗಭೂಮಿ ಸಮಾಜದ ಕನ್ನಡಿ ಯಾಗಿದೆ. ಸಮಾಜದ ಪರಿ ವರ್ತನೆಗೆ ನಟಿಸುವ ಕಲಾವಿದರು ಸಮಾಜಮುಖೀ ಚಿಂತನೆಗಳ ಪ್ರತಿಬಿಂಬಗಳು. ಸಾಮಾಜಿಕ ಪರಿಸರ ಕಲುಷಿತವಾಗುತ್ತಿರುವ ಬದಲಾವಣೆಯ ಈ ಕಾಲಘಟ್ಟದಲ್ಲಿ ಸ್ವಾಸ್ಥ ಸಮಾಜವನ್ನು ಕಟ್ಟುವಲ್ಲಿ ರಂಗಭೂಮಿ ತಂಡಗಳ ಜವಾಬ್ದಾರಿ ಮಹತ್ತರವಾಗಿದೆ ಎಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ ನುಡಿದರು.

ನ. 18 ರಂದು ಸಂಜೆ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಸಭಾಂಗಣದಲ್ಲಿ ನಡೆದ ರಂಗಭೂಮಿ ಫೈನ್‌ಆರ್ಟ್ಸ್ ನವಿಮುಂಬಯಿ ಇದರ 27 ನೇ ವಾರ್ಷಿಕೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಶ್ರೀ ಶನೀಶ್ವರ ಮಂದಿರದ ಅಂಗಸಂಸ್ಥೆಯಾದ ರಂಗಭೂಮಿ ಫೈನ್‌ ಆರ್ಟ್ಸ್ ಕಳೆದ 27 ವರ್ಷ ಗಳಿಂದ ಅನೇಕ ಕಲಾವಿದರನ್ನು ಸೃಷ್ಟಿಸಿದೆ. ತಾಳಮದ್ದಳೆ, ಯಕ್ಷಗಾನ, ನಾಟಕೋತ್ಸವಗಳ ಮೂಲಕ ಸಾಂಸ್ಕೃತಿಕ ವೈಭವಗಳನ್ನು ಅನಾವರ ಣಗೊಳಿಸಿದೆ. ಜಾತ್ರೆ ಗಳಿಗಿಂತಲೂ ಅಪಾರ ಸಂಖ್ಯೆಯಲ್ಲಿ ಸೇರಿದ ಪ್ರೇಕ್ಷಕರು ಕಲಾವಿದರನ್ನು ಪ್ರೋತ್ಸಾಹಿಸಿ ಗೌರವಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನುಡಿದು ಶುಭಹಾರೈಸಿದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಕಾರ್ಯಾಧ್ಯಕ್ಷ ಸಂಜೀವ ಹೆಗ್ಡೆ ಅವರು ಮಾತನಾಡಿ, ಉತ್ತಮ ಮನಸ್ಸು, ಹೃದಯವಂತಿಕೆ ಬೆಳೆಸುವ ಮನೋವೃತ್ತಿ ಕಲಾವಿದರಲ್ಲಿರಬೇಕು. ಭಾರತೀಯ ಸಂಸ್ಕೃತಿ ತಿಳಿಸಲು ರಂಗ  ಭೂಮಿಗೆ ಉತ್ತೇಜನ ನೀಡ ಬೇಕು ಎಂದು ನುಡಿದರು.

ಬಿಲ್ಲವರ ಅಸೋಸಿಯೇಶನ್‌ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಪೂಜಾರಿ, ಬಂಟ್ಸ್‌ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನಂದಿಕೂರು, ನವಿಮುಂಬಯಿ ಮಾಜಿ ನಗರ ಸೇವಕ ಸುರೇಶ್‌ ಶೆಟ್ಟಿ ಅವರು ಮಾತನಾಡಿ ಶುಭಹಾರೈಸಿದರು. ಸಮಾರಂಭದಲ್ಲಿ ರಂಗನಟ ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು, ಸಮಾಜ ಸೇವಕ ಉದ್ಯಮಿ ಗೋಪಾಲ ವೈ. ಶೆಟ್ಟಿ, ಸಂಘಟಕ, ಉದ್ಯಮಿ ಶ್ಯಾಮ್‌ ಎನ್‌. ಶೆಟ್ಟಿ ಅವರನ್ನು ವೇದಿಕೆಯ ಗಣ್ಯರು ಸಮ್ಮಾನಿಸಿದರು.

ರಂಗಭೂಮಿ ಫೈನ್‌ಆರ್ಟ್ಸ್ ನವಿಮುಂಬಯಿ ಇದರ ಅಧ್ಯಕ್ಷ ತಾರನಾಥ ಶೆಟ್ಟಿ ಪುತ್ತೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಆದ್ಯಪಾಡಿ ಅವರು ಗಣ್ಯರನ್ನು ಪರಿಚಯಿಸಿ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಜತೆ ಕಾರ್ಯದರ್ಶಿ ತಾರಾ ಆರ್‌. ಬಂಗೇರ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ಸಮ್ಮಾನ ಪತ್ರವನ್ನು ಪದಾಧಿಕಾರಿಗಳಾದ ಸತೀಶ್‌ ಎರ್ಮಾಳ್‌, ವಿ. ಕೆ. ಸುವರ್ಣ ಪಡುಬಿದ್ರೆ, ಅನಿಲ್‌ ಕುಮಾರ್‌ ಹೆಗ್ಡೆ ಅವರು ವಾಚಿಸಿದರು. ಜಗದೀಶ್‌ ಶೆಟ್ಟಿ ವಂದಿಸಿದರು.

ವೇದಿಕೆಯಲ್ಲಿ ತಲೋಜಾ ಭಾರತ್‌ ಕೋಚ್‌ ಬಿಲ್ಡರ್ನ ನಿರ್ದೇಶಕ ಸದಾಶಿವ ಶೆಟ್ಟಿ, ನೆರೂಲ್‌ ಶ್ರೀ ಮಣಿಕಂಠ ಸೇವಾ ಸಂಘದ ಅಧ್ಯಕ್ಷ ಸಂಜೀವ ಎನ್‌. ಶೆಟ್ಟಿ, ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಬಂಗೇರ, ತುಳುಕೂಟ ಐರೋಲಿಯ ಉಪಾಧ್ಯಕ್ಷ ನಾಗೇಶ್‌ ಶೆಟ್ಟಿ ಬೈಕಾಡಿ ಹೆದ್ದಾರಿಮನೆ, ಉದ್ಯಮಿ ಮೋಹನ್‌ ಶೆಟ್ಟಿ ಮಜ್ಜಾರ್‌, ರಾಜೇಶ್‌ ಗೌಡ, ಮೀರಾ ಪಾಟೀಲ್‌ ಮತ್ತಿತರರು  ಉಪಸ್ಥಿತರಿದ್ದರು.

ಸದಸ್ಯರುಗಳಾದ ರೂಪಾ ಡಿ. ಶೆಟ್ಟಿ, ಅನಿಲ್‌ ಕುಮಾರ್‌ ಹೆಗ್ಡೆ, ರಘು ಮೂಲ್ಯ, ಉಷಾ ಶೆಟ್ಟಿ, ಆದ್ಯಪಾಡಿಗುತ್ತು ಕರುಣಾಕರ ಎಸ್‌. ಆಳ್ವ, ಜಗದೀಶ್‌ ಶೆಟ್ಟಿ ಬೆಳ್ಕಲೆ, ಕೃಷ್ಣ ಕೋಟ್ಯಾನ್‌, ನಿತೇಶ್‌ ಶೆಟ್ಟಿ, ಗೀತಾ ಎಸ್‌. ಶೆಟ್ಟಿ ತಾರಾ ಕೆ. ಶೆಟ್ಟಿ ಮೊದಲಾದವರು ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಸದಸ್ಯರಿಂದ, ಪರಿಸರದ ವಿವಿಧ ಸಂಘ-ಸಂಸ್ಥೆಗಳಿಂದ ನೃತ್ಯ ವೈವಿಧ್ಯ ನಡೆಯಿತು. ಪ್ರಕಾಶ್‌ ಶೆಟ್ಟಿ ಧರ್ಮ ನಗರ ರಚಿಸಿ, ಸತೀಶ್‌ ಎರ್ಮಾಳ ಸಹಕಾರದೊಂದಿಗೆ, ಅನಿಲ್‌ ಕೆ. ಹೆಗ್ಡೆ ಅವರ ನಿರ್ದೇಶನದಲ್ಲಿ ರಂಗಭೂಮಿ ಕಲಾವಿದರಿಂದ ಏರೆಗ್ಲಾ ಪನೊಡಿc ತುಳು ನಾಟಕ ಪ್ರದರ್ಶನಗೊಂಡಿತು.

ಶ್ರೀ ಶನೀಶ್ವರ ಮಂದಿರ ನೆರೂಲ್‌, ಶ್ರೀ ಮೂಕಾಂಬಿಕಾ ಮಂದಿರದ ಘನ್ಸೋಲಿ, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ಹಾಗೂ ನವಿಮುಂಬಯಿ ಪರಿಸರದ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ನೂರಾರು ಸಂಖ್ಯೆಯಲ್ಲಿ ಕಲಾಭಿಮಾನಿಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.