ಶ್ರೀಕೃಷ್ಣಮಠದಲ್ಲಿ  ಸಂಭ್ರಮದ ಲಕ್ಷದೀಪೋತ್ಸವ ಆರಂಭ


Team Udayavani, Nov 21, 2018, 12:35 PM IST

lakshadeepa.png

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಮಂಗಳವಾರ ಉತ್ಥಾನ ದ್ವಾದಶಿಯಂದು ನಾಲ್ಕು ದಿನಗಳ ಸಂಭ್ರಮದ ಲಕ್ಷದೀಪೋತ್ಸವ ಆರಂಭಗೊಂಡಿತು. 

ಸೋಮವಾರ ಏಕಾದಶಿಯಾದ ಕಾರಣ ಬೆಳಗ್ಗೆ ಬೇಗ ಮಹಾಪೂಜೆ ನಡೆಯಿತು. ತಿರುಮಲ ತಿರುಪತಿ ದೇವಸ್ಥಾನ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಮಂತ್ರಾಲಯದ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಜಿಲ್ಲಾ ಭಜನ ಮಂಡಳಿಗಳ ಒಕ್ಕೂಟದ ಭಜನ ಮಂಡಳಿಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ನಾಮ ಸಂಕೀರ್ತನೆ ನಡೆಸಿಕೊಟ್ಟರು. ಅಪರಾಹ್ನ ರಥಬೀದಿಯಲ್ಲಿ ನಿರ್ಮಿಸಿದ ಅಟ್ಟಣಿಗೆಗಳಲ್ಲಿ ಹಣತೆಗಳಿಗೆ ಮುಹೂರ್ತವನ್ನು (ಗೋಮಯದ ಮೇಲೆ ಹಣತೆ ಇಟ್ಟು) ಪರ್ಯಾಯ ಶ್ರೀಪಲಿಮಾರು, ಶ್ರೀಪೇಜಾವರ ಮತ್ತು ಶ್ರೀಅದಮಾರು ಕಿರಿಯ ಶ್ರೀಪಾದರು ನಡೆಸಿದರು. ಮಧ್ವ ಸರೋವರದಲ್ಲಿ ನಡೆದ ತುಳಸೀ ಪೂಜೆ, ಕ್ಷೀರಾಬ್ಧಿ ಪೂಜೆಯಲ್ಲಿ ಶ್ರೀಪಲಿಮಾರು, ಶ್ರೀಕೃಷ್ಣಾಪುರ, ಶ್ರೀಅದಮಾರು ಉಭಯ ಶ್ರೀಪಾದರು, ಶ್ರೀಪೇಜಾವರ ಕಿರಿಯ, ಶ್ರೀಕಾಣಿಯೂರು ಶ್ರೀಪಾದರು ಪಾಲ್ಗೊಂಡರು. ಈ ಸಂದರ್ಭ ಭಜನ ಮಂಡಳಿಗಳ ಸದಸ್ಯರು ಮಧ್ವ ಸರೋವರದ ಸುತ್ತಲೂ ಕುಳಿತು ಏಕಕಂಠದಲ್ಲಿ ಭಜನೆಗಳನ್ನು ಹಾಡಿದರು. 

ರಾತ್ರಿ ವೇಳೆ ಸಾವಿರಾರು ಮಣ್ಣಿನ ಹಣತೆಗಳಲ್ಲಿ ಬೆಳಕು ಕಾಣುವಾಗ ತೆಪ್ಪೋತ್ಸವ ಸಹಿತ ರಥೋತ್ಸವ ನಡೆಯಿತು. ರಥಬೀದಿ ಸುತ್ತಲೂ ಲಕ್ಷದೀಪೋತ್ಸವವನ್ನು ನೋಡಲು ಜನಜಂಗುಳಿ ಸೇರಿತ್ತು. 

ಮಂಗಳವಾರ ಲಕ್ಷ ದೀಪೋತ್ಸವದಲ್ಲಿ ಎರಡು ರಥಗಳಲ್ಲಿ ಉತ್ಸವ ಮೂರ್ತಿಗಳನ್ನು ಇಟ್ಟು ಪೂಜಿಸಲಾಯಿತು. ಒಂದು ರಥದಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ ದೇವರ ಉತ್ಸವಮೂರ್ತಿ ಮತ್ತು ಇನ್ನೊಂದು ರಥದಲ್ಲಿ ಶ್ರೀಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ಉತ್ಸವ ಮೂರ್ತಿಗಳನ್ನು ಇರಿಸಿ ಉತ್ಸವ ನಡೆಸಲಾಯಿತು. ಲಕ್ಷದೀಪೋತ್ಸವ ಇನ್ನು ಮೂರೂ ದಿನ ನಡೆಯಲಿದೆ. ಬ್ರಹ್ಮರಥ ಮಾತ್ರ ಸಪೊ¤àತ್ಸವದ ವೇಳೆ ಹೊರಬರಲಿದೆ. ಮಕರ ಸಂಕ್ರಾಂತಿಯಂದು ಬ್ರಹ್ಮರಥೋತ್ಸವ ಸಹಿತ ಮೂರು ರಥಗಳ ಉತ್ಸವ ನಡೆಯಲಿದೆ. 

ಚಾತುರ್ಮಾಸ್ಯ ಆಹಾರ ಕ್ರಮ ಮುಕ್ತಾಯ
ರವಿವಾರದವರೆಗೆ ಚಾತುರ್ಮಾಸ್ಯ ವ್ರತದ ಆಹಾರ ಕ್ರಮ ಕೃಷ್ಣಮಠದಲ್ಲಿ ನಡೆಯಿತು. ಚಾತುರ್ಮಾಸ್ಯದ ನಾಲ್ಕು ತಿಂಗಳ ಅವಧಿ ಮುಗಿದ ಬಳಿಕ ಮಂಗಳವಾರದಿಂದ ಸಹಜ ಆಹಾರ ಕ್ರಮ ಆರಂಭಗೊಂಡಿತು. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.