ಕಟಾವಿಗೆ ಬಂದ ಕಬ್ಬು; ಆತಂಕದಲ್ಲಿ  ರೈತರು


Team Udayavani, Nov 21, 2018, 4:01 PM IST

21-november-18.gif

ಕುಷ್ಟಗಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಸರ್ಕಾರ ಹಾಗೂ ಅನ್ನದಾತರ ನಡುವಿನ ಸಂಘರ್ಷದಲ್ಲಿ ತಾವು ಬೆಳೆದಿರುವ ಕಬ್ಬಿನ ಗತಿ ಏನೂ? ಎಂಬ ಚಿಂತೆ ಕಾಡಲಾರಂಭಿಸಿದೆ.

ಕಬ್ಬಿನ ಬಾಕಿ ಪಾವತಿ, ಸಮರ್ಪಕ ಬೆಲೆಗೆ ಆಗ್ರಹಿಸಿ ಹೋರಾಟ ವ್ಯಾಪಕವಾಗುತ್ತಿದೆ. ಅಲ್ಲಿ ಬೆಳೆಗಾರರ ಆಕ್ರೋಶ ವಿಕೋಪಕ್ಕೆ ತಿರುಗಿರುವುದು ಇಲ್ಲಿನ ಕಬ್ಬು ಬೆಳೆಗಾರರ ಆತಂಕ ಹೆಚ್ಚಲು ಕಾರಣವಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಕಬ್ಬು ಬೆಳೆ ಪ್ರಮಾಣ ಕಡಿಮೆಯಾಗಿದ್ದು, ಅಂತರ್ಜಲ ಕ್ಷೀಣತೆ ಕಾರಣವಾಗಿದೆ. ಈ ಪರಿಸ್ಥಿತಿಯಲ್ಲಿ ನೀರಿನ ಅಭಾವದ ನಡುವೆಯೂ ಬೆರಳಣಿಕೆಯಷ್ಟೇ ರೈತರು ಬೆಳೆದಿರುವ ಕಬ್ಬು, ಕಟಾವಿಗೆ ಸನ್ನಿಹಿತವಾಗಿದೆ. ಕೆಲವು ರೈತರು ಸಕ್ಕರೆ ಕಾರ್ಖಾನೆಗಳ ಜೊತೆಗೆ ಒಪ್ಪಂದದ ಮೇರೆಗೆ ಕಬ್ಬು ಕಟಾವು ಮಾಡುವ ಕಾರ್ಮಿಕರ ನಿರೀಕ್ಷೆಯಲ್ಲಿದ್ದು, ಈಗಲೇ ಬಂದರೆ ಸರ್ಕಾರ ಘೋಷಿಸಲಿರುವ ಸಮರ್ಪಕ ದರ ಸಿಗುತ್ತದೆಯೋ ಇಲ್ಲವೋ ಆತಂಕ ರೈತರದ್ದಾಗಿದೆ. ಕಳೆದ ವರ್ಷದಲ್ಲಿ ಪ್ರತಿ ಟನ್‌ಗೆ 1700 ರೂ. ಸಿಕ್ಕಿತ್ತು. ಇದೀಗ 2,100 ರೂ. ಹಾಗೂ ಇದಕ್ಕಿಂತ ಹೆಚ್ಚು ದರ ಸಿಗಬಹುದು ನಿರೀಕ್ಷೆಯಲ್ಲಿರುವ ರೈತರಿಗೆ 2 ಸಾವಿರ ರೂ.ಕ್ಕಿಂತ ಹೆಚ್ಚಿಗೆ ದರ ಲಭ್ಯವಾದಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಿಲ್ಲ ಎನ್ನುವ ಲೆಕ್ಕಾಚಾರ ರೈತರದ್ದಾಗಿದೆ.

ತಾಲೂಕಿನ ಯಲಬುರ್ತಿ ಗ್ರಾಮದ ರೈತ ಯಮನೂರಪ್ಪ ಭೋವಿ ಅವರು, ತಮ್ಮ 4 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದಾರೆ. ಅಂಗಾಂಶ ಕೃಷಿಯ ಸುಧಾರಿತ ಕಬ್ಬಿನ ಸಸಿಗಳನ್ನು ಬೆಳಗಾವಿ ಜಿಲ್ಲೆಯ ಯರಗಟ್ಟಿಯಿಂದ ಖರೀದಿಸಿ ನಾಟಿ ಮಾಡಿದ್ದಾರೆ. ಸದ್ಯ 11 ತಿಂಗಳ ಬೆಳೆ ಇದ್ದು, ನೀರು ನಿರ್ವಹಣೆ ಅಗತ್ಯ ಕ್ರಮದಿಂದಾಗಿ ಕಬ್ಬು ನಿರೀಕ್ಷಿತ ಆದಾಯದ ಬೆಳೆಯ ಭರವಸೆ ರೈತ ಯಮನೂರಪ್ಪ ಅವರಲ್ಲಿ ಮೂಡಿಸಿದೆ. ಬೆಲೆ ಪ್ರತಿ ಟನ್‌ ಗೆ 2,500 ರೂ.ವರೆಗೂ ದರ ಸಿಕ್ಕಲ್ಲಿ ಕಬ್ಬು ಬೆಳೆದಿರುವುದಕ್ಕೂ ಸಾರ್ಥಕದ ವ್ಯಾಖ್ಯಾನ ಅವರದು. ತಾವು ಬೆಳೆದಿರುವ ಕಬ್ಬು ಡಿಸೆಂಬರ್‌ ಕೊನೆಯ ವಾರ ಇಲ್ಲವೇ ಜನವರಿ ಮೊದಲ ವಾರದಲ್ಲಿ ಕಟಾವಿಗೆ ಬರುವ ಸಾಧ್ಯತೆಗಳಿವೆ. ಅಷ್ಟರೊಳಗೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ವಿಕೋಪದ ವಾತಾವರಣ ತಿಳಿಕೊಂಡು, ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದೇವೆ ಎನ್ನುತ್ತಾರೆ ಯಮನೂರಪ್ಪ ಭೋವಿ.

ಆಲಮಟ್ಟಿಯ ಬಾಲಾಜಿ ಸಕ್ಕರೆ ಕಾರ್ಖಾನೆ ಒಪ್ಪಂದ ಮೇರೆಗೆ ಕಬ್ಬು ಬೆಳೆಸಲಾಗಿದೆ. ಕಾರ್ಖಾನೆ 100 ಕಿಮೀ ಅಂತರವಿದೆ. ಸಾಗಾಣಿಕೆಯ ವೆಚ್ಚ ಇಲ್ಲ. ಸರ್ಕಾರದಿಂದ ಕಬ್ಬಿಗೆ 2,500ಕ್ಕಿಂತ ಅಧಿ ಕ ಬೆಂಬಲ ಬೆಲೆ ಸಿಕ್ಕರೆ ಮಾತ್ರ ಲಾಭದಾಯಕವೆನಿಸಲಿದೆ.
. ಯಮನೂರಪ್ಪ ಭೋವಿ,
  ಕಬ್ಬು ಬೆಳೆಗಾರ.

ಅಂತರ್ಜಲ ಕ್ಷೀಣಿಸಿದ ಹಿನ್ನೆಲೆಯಲ್ಲಿ ಕಬ್ಬು ಬೆಳೆ ಪ್ರಮಾಣ ಕಡಿಮೆಯಾಗಿದೆ. ತಾಲೂಕಿನಲ್ಲಿ 40 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ.
. ವೀರಣ್ಣ ಕಮತರ,
ಸಹಾಯಕ ಕೃಷಿ ನಿರ್ದೇಶಕ ಕೃಷಿ ಇಲಾಖೆ.

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.