ಭಕ್ತರ ಹಿಂದೇಟು;ಶಬರಿಮಲೆ ದೇಗುಲ ಬಳಿ ಉದ್ವಿಗ್ನ ಪರಿಸ್ಥಿತಿ


Team Udayavani, Nov 22, 2018, 6:00 AM IST

sabarimala-6666.jpg

ಬೆಂಗಳೂರು: ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶ ವಿಚಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ರಾಜ್ಯದ ಅಯ್ಯಪ್ಪ ಭಕ್ತರಲ್ಲಿ ಆತಂಕ ಮೂಡಿಸಿದೆ.

ರಾತ್ರಿ ದೇವಸ್ಥಾನ ಆವರಣದಲ್ಲಿ ಭಕ್ತರು ಇರಲು ಅವಕಾಶ ಕೊಡುತ್ತಿಲ್ಲ. ದರ್ಶನ ಮುಗಿಸಿದ ತಕ್ಷಣ ಅಲ್ಲಿಂದ ಕಳುಹಿಸಲಾಗುತ್ತಿದೆ. ವಿರೋಧ ವ್ಯಕ್ತಪಡಿಸಿದರೆ ಬಂಧಿಸಲಾಗುತ್ತಿದೆ ಎಂಬುದೇ ಇದಕ್ಕೆ ಕಾರಣ. ರಾಜ್ಯದಿಂದ ಶಬರಿಮಲೆ ಯಾತ್ರೆ ಕೈಗೊಂಡಿರುವ ಭಕ್ತರು ಅಲ್ಲಿನ ನಿಜ ಸ್ಥಿತಿ ಅರಿಯಲು ಅಯ್ಯಪ್ಪ ದೇವಾಲಯಗಳ ಗುರುಸ್ವಾಮಿಗಳ ಮೊರೆ ಹೋಗಿದ್ದಾರೆ. ಆದರೆ, ಅಲ್ಲಿನ ಪ್ರಸ್ತುತ ವ್ಯವಸ್ಥೆ ಬಗ್ಗೆ ಗುರುಸ್ವಾಮಿಗಳಿಗೂ ಯಾವುದೇ ಮಾಹಿತಿ ಇಲ್ಲ. 

ಸಾಮಾನ್ಯವಾಗಿ ಶಬರಿಮಲೆಗೆ ಹೋಗುವ ಭಕ್ತರು ಪಂಪಾದಲ್ಲಿ ಸ್ನಾನ ಮುಗಿಸಿ ಬೆಟ್ಟ ಹತ್ತಿ ಸನ್ನಿಧಾನಕ್ಕೆ ಹೋಗಿ ದರ್ಶನ ಮುಗಿಸಿ ಅಷ್ಟರಲ್ಲಿ ರಾತ್ರಿಯಾಗಿದ್ದರೆ ಅಲ್ಲೇ ಉಳಿದು ಮುಂಜಾನೆ ತಾವು ತೆಗೆದುಕೊಂಡು ಹೋಗಿದ್ದ ತುಪ್ಪದ ತೆಂಗಿನಕಾಯಿ ಒಡೆದು ದೇವರಿಗೆ ತುಪ್ಪದ ಅಭಿಷೇಕ ಮಾಡಿಸಿಕೊಂಡು ಬರುವುದು ವಾಡಿಕೆ. 

ಜತೆಗೆ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರೂ ರಾತ್ರಿ 11 ಗಂಟೆಗೆ ಸನ್ನಿಧಾನದಲ್ಲಿ ಹರಿವರಾಸನಂ ಗೀತೆ ಹಾಕಿದ ನಂತರ ದೇವಾಲಯದ ಬಾಗಿಲು ಮುಚ್ಚಲಿದೆ. ಸರತಿ ಸಾಲಿನಲ್ಲಿ ನಿಂತವರನ್ನು ಕೆಲವೊಮ್ಮೆ 11 ಗಂಟೆ ವೇಳೆಗೆ ದರ್ಶನಕ್ಕೆ ಬಿಡಲಾಗುತ್ತಿದೆ. ಆದರೆ, ಭಕ್ತರು ಸನ್ನಿಧಾನದ ಸನಿಹ ಹೋಗುವಷ್ಟರಲ್ಲಿ ಬಾಗಿಲು ಮುಚ್ಚಿದ್ದರೆ ದರ್ಶನ ಮಾಡಲು ಸಾಧ್ಯವಾಗದವರು ಮತ್ತೆ ಮುಂಜಾನೆ ದರ್ಶನ ಪಡೆದು ಬರಲು ಅವಕಾಶವಿತ್ತು. ಆದರೆ, ಇದೀಗ ರಾತ್ರಿ ಅಲ್ಲಿ ಇರುವಂತಿಲ್ಲ ಎಂದರೆ ಮುಂದೇನು? ಎಂಬ ಪ್ರಶ್ನೆ ಮೂಡಿದೆ.

ರಾಜ್ಯದಿಂದಲೂ ವ್ಯವಸ್ಥೆ ಇಲ್ಲ
ಪ್ರತಿವರ್ಷ ಮುಜರಾಯಿ ಇಲಾಖೆ ವತಿಯಿಂದ ರಾಜ್ಯದಿಂದ ಶಬರಿಮಲೆಗೆ ಹೋಗುವ ಭಕ್ತರಿಗಾಗಿ ಆರೋಗ್ಯ ಸೇವೆಗೆ ತಂಡ ರವಾನೆ, ತುರ್ತು ಸಂದರ್ಭಗಳಲ್ಲಿ ಸಂಪರ್ಕಕ್ಕಾಗಿ ಕರ್ನಾಟಕದ ಪೊಲೀಸರ ನಿಯೋಜನೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗುತ್ತಿದ್ದಾರೂ  ಈ ಬಾರಿ ಯಾವುದೇ ಕ್ರಮ ಆಗಿಲ್ಲ. 

ಕರ್ನಾಟಕ ಸೇರಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಿಂದ ಪತಿವರ್ಷ 50 ಲಕ್ಷಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಶಬರಿಮಲೆ ಪ್ರವಾಸ ಕೈಗೊಳ್ಳುತ್ತಾರೆ. ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಉಂಟಾಗಿರುವ ವಿವಾದ, ದೇವಾಲಯ ಆವರಣದಲ್ಲಿ ಉದ್ವಿಗ್ನ ವಾತಾವರಣ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಂದ ಭಕ್ತ ಸಮೂಹ ಭಯ ಬಿದ್ದಿದೆ.

ಟ್ರಾವೆಂಕೂರ್‌ ದೇವಸ್ವಂ ಮಂಡಳಿ ಜತೆ ಸಂಪರ್ಕ ಹೊಂದಿರುವ ಬೆಂಗಳೂರಿನ ಕೆಲವು ಅಯ್ಯಪ್ಪ ದೇವಾಲಯಗಳ ಗುರುಸ್ವಾಮಿಗಳು ಅಲ್ಲಿನ ಮುಖ್ಯ ಅರ್ಚಕರನ್ನು ಸಂಪರ್ಕಸಿದಾಗ, ಭಕ್ತರಿಗೆ ಏನೂ ತೊಂದರೆ ಇಲ್ಲ, ಕಳುಹಿಸಿ ಎಂದು ಅಭಯ ನೀಡಿದ್ದಾರೆ. ಆದರೆ, ಎರಡು ದಿನಗಳ ಹಿಂದೆ ರಾತ್ರಿ ದೇವಸ್ಥಾನ ಆವರಣದಲ್ಲಿ  ಭಕ್ತರು ಇರಲು ಬಿಟ್ಟಿಲ್ಲ. ವಿರೋಧಿಸಿದ ಕೆಲವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಯಾತ್ರೆ ಕೈಗೊಂಡಿರುವವರಲ್ಲಿ ಆತಂಕ ಹೆಚ್ಚಿಸಿದೆ.

ತಗ್ಗಿದ ಬೇಡಿಕೆ
ಈ ನಡುವೆ, ಶಬರಿಮಲೆಯಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಕ್ತರು ಈ ವರ್ಷ ಶಬರಿಮಲೆಗೆ ಹೋಗುವ ಭಕ್ತರ ಸಂಖ್ಯೆಯೂ ಇಳಿಮುಖವಾಗಿದೆ. ಬಾಡಿಗೆ ವಾಹನ ಮುಂಗಡ ಕಾಯ್ದಿರಿಸುವವರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆ ಎಂದು ಟ್ಯಾಕ್ಸಿ ಮಾಲೀಕರ ಸಂಘದವರು ಹೇಳುತ್ತಾರೆ.
 
ಟ್ಯಾಕ್ಸೂ ಹೆಚ್ಚಳ

ಶಬರಿಮಲೆಗೆ ಕರ್ನಾಟಕದಿಂದ ಹೋಗುವ ಟ್ಯಾಕ್ಸಿ , ಮಿನಿ ಬಸ್‌ ಸೇರಿದಂತೆ  ಆಲ್‌ ಇಂಡಿಯಾ ಪರ್ಮಿಟ್‌ ಹೊಂದಿರುವ ವಾಹನಗಳಿಗೂ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ ಎಂಬುದು ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರ ಆರೋಪ. 2014-15, 2015-16 ನೇ ಸಾಲಿನಲ್ಲಿ ಶಬರಿಮಲೆಗೆ ಹೋಗಿದ್ದರೆ ಆಗ ವಾರದ ಮಟ್ಟಿಗೆ ಶುಲ್ಕ ನೀಡಿ ಪರ್ಮಿಟ್‌ ಪಡೆದಿದ್ದರೂ ಇದೀಗ ಅದಕ್ಕೆ ದಂಡದ ರೂಪದಲ್ಲಿ ಸಾವಿರಾರು ರೂಪಾಯಿ ಸಂಗ್ರಹಿಸಲಾಗುತ್ತಿದೆ. ಇದೇ ಮೊದಲ ಬಾರಿ ಕೇರಳಕ್ಕೆ ಹೋಗುವ ಸ್ಟೇಟ್‌ ಪರ್ಮಿಟ್‌ ಬಾಡಿಗೆ ವಾಹನಗಳಿಗೂ ವಾರದ ಮಟ್ಟಿಗೆ ಪರ್ಮಿಟ್‌ ನೀಡಿ ತೆರಿಗೆ ಪಡೆಯಲಾಗುತ್ತಿದೆ.

ಸಚಿವರ ಅಭಯ
ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಜಶೇಖರ ಪಾಟೀಲ್‌ ಹುಮ್ನಾಬಾದ್‌ ಅಭಯ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೇರಳ ಮುಖ್ಯಮಂತ್ರಿಯವರ ಜತೆಯೂ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಮುಜರಾಯಿ ಇಲಾಖೆಯಿಂದಲೂ ಅಯ್ಯಪ್ಪ ಭಕ್ತರ ಅನುಕೂಲಕ್ಕಾಗಿ ಸಹಾಯವಾಣಿ ಸ್ಥಾಪನೆ, ವೈದ್ಯರ ತಂಡ ಕಳುಹಿಸುವುದು, ಭದ್ರತೆ ಪೊಲೀಸ್‌ ಹಾಗೂ ಗೃಹರಕ್ಷಕ ದಳ ಸಿಬ್ಬಂದಿ ನಿಯೋಜನೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಪ್ರತಿವರ್ಷದಂತೆ  ಈ ವರ್ಷವೂ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಗುರುವಾರ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.