ಕೇರಳ ಜೆಡಿಎಸ್ನಲ್ಲಿ ಭಿನ್ನಮತ: ಮ್ಯಾಥ್ಯೂ. ಟಿ. ಥಾಮಸ್ ಗೆ ಕೊಕ್
Team Udayavani, Nov 24, 2018, 6:35 AM IST
ಬೆಂಗಳೂರು/ತಿರುವನಂತಪುರ: ಕೇರಳದ ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರದಲ್ಲಿ ಅಂಗಪಕ್ಷವಾಗಿರುವ ಜಾತ್ಯತೀತ ಜನತಾದಳದಲ್ಲಿ (ಜೆಡಿಎಸ್) ಭಿನ್ನಮತ ಭುಗಿಲೆದ್ದಿದ್ದು, ಇದರ ಪರಿಣಾಮ, ಸಂಪುಟದಲ್ಲಿ ಜೆಡಿಎಸ್ ಪ್ರತಿನಿಧಿಸಿದ್ದ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ. ಟಿ. ಥಾಮಸ್ ಅವರನ್ನು ಬದಲಾಯಿಸಿ, ಅವರ ಸ್ಥಾನಕ್ಕೆ ಶಾಸಕ ಕೆ. ಕೃಷ್ಣಮೂರ್ತಿ ಅವರ ನೇಮಕಕ್ಕೆ ಶಿಫಾರಸು ಮಾಡಲು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ ತೀರ್ಮಾನಿಸಿದ್ದಾರೆ.
ಕೇರಳದಲ್ಲಿ ಜೆಡಿಎಸ್ ಮೂವರು ಶಾಸಕರನ್ನು ಹೊಂದಿದೆ. ಹಲವಾರು ದಿನಗಳಿಂದ ಕೃಷ್ಣಮೂರ್ತಿ ಹಾಗೂ ಥಾಮಸ್ ಗುಂಪುಗಳ ನಡುವೆ ಭಿನ್ನಮತ ಭುಗಿಲೆದ್ದಿತ್ತು. ಸಂಪುಟದಲ್ಲಿ ಜೆಡಿಎಸ್ಗೆ ನೀಡಲಾಗಿರುವ ಒಂದೇ ಒಂದು ಸಚಿವ ಸ್ಥಾನಕ್ಕಾಗಿ ಕೃಷ್ಣಮೂರ್ತಿ ಮತ್ತು ಥಾಮಸ್ ನಡುವೆ ಪೈಪೋಟಿ ತೀವ್ರವಾಗಿತ್ತು. ಈ ಹಿನ್ನೆಲೆಯಲ್ಲಿ, ಶುಕ್ರವಾರ ಬೆಳಗ್ಗೆ ದೇವೇಗೌಡರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದ ಕೇರಳದ ಜೆಡಿಎಸ್ ಶಾಸಕರಾದ ಕೃಷ್ಣಮೂರ್ತಿ, ಸಿ.ಕೆ. ನಾಯ್ಡು ಅವರು ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಹಾಗೂ ಪಕ್ಷದ ಇತರ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಮಹತ್ವದ ಸಭೆಗೆ ಥಾಮಸ್ ಬಂದಿರಲಿಲ್ಲ.ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅಲಿ, “2016ರಲ್ಲಿ ಎಲ್ಡಿಎಫ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ, ಜೆಡಿಎಸ್ಗೆ ಇರುವ ಒಂದು ಸಂಪುಟ ಸ್ಥಾನದಲ್ಲಿ ಇಬ್ಬರು ನಾಯಕರನ್ನು ರೊಟೇಷನ್ ಪದ್ಧತಿಯಲ್ಲಿ ಕೂರಿಸುವ ಬಗ್ಗೆ ಮಾತುಕತೆಯಾಗಿತ್ತು. ಈಗ ಅದನ್ನು ಜಾರಿಗೊಳಿಸಲಾಗುತ್ತಿದೆ. ಪಕ್ಷದ ವರಿಷ್ಠರ ನಿರ್ಧಾರವನ್ನು ಥಾಮಸ್ ಅವರೂ ಒಪ್ಪಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ