ಬಯಲಲ್ಲೇ ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು
Team Udayavani, Nov 24, 2018, 6:40 AM IST
ಹರಪನಹಳ್ಳಿ: ದಾವಣಗೆರೆ ವಿಶ್ವ ವಿದ್ಯಾಲಯದ ಪದವಿ ಸೆಮಿಸ್ಟರ್ ಪರೀಕ್ಷೆಗಳು ಶುಕ್ರವಾರದಿಂದ ಆರಂಭಗೊಂಡಿದ್ದು, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಕೊಠಡಿಗಳ ಕೊರತೆಯಿಂದಾಗಿ ಕಾಲೇಜು ಆವರಣದಲ್ಲಿ ಹಾಕಲಾಗಿರುವ ಶಾಮಿಯಾನ ಕೆಳಗೆ ಕುಳಿತು ಪರೀಕ್ಷೆ ಬರೆದರು.
ಬಿಎ, ಬಿಕಾಂ, ಬಿಬಿಎಂ, ಬಿಎಸ್ಸಿ ಪದವಿಯ ಪ್ರಥಮ, ತೃತೀಯ ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಕೊಠಡಿ ಸಮಸ್ಯೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಕಾಲೇಜಿನ ಆವರಣದಲ್ಲಿ ಶಾಮಿಯಾನ, ಟೇಬಲ್,ಬೆಂಚ್ ಹಾಕಿ ಅಧಿಕಾರಿಗಳು ಪರೀಕ್ಷೆ ಬರೆಸಿದರು. ಶಾಮಿಯಾನ ಕೆಳಗೆ ಕುಳಿತು 320 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕಾಲೇಜಿನಲ್ಲಿ ಬಿಎ ಇತಿಹಾಸ ವಿಷಯ-509 ವಿದ್ಯಾರ್ಥಿಗಳು,ಬಿಬಿಎಂ ಆದಾಯ ತೆರಿಗೆ ವಿಷಯ- 19, ಬಿಕಾಂ ಲೆಕ್ಕಶಾಸ್ತ್ರ,-147, ಬಿಎಸ್ಸಿಗಣಿತ ಶಾಸ್ತ್ರ ವಿಷಯ-102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 40 ವಿದ್ಯಾರ್ಥಿಗಳಿಗೆ ಒಂದು ಕೊಠಡಿಯಂತೆ 8 ಕೊಠಡಿಗಳ ಕೊರತೆಯಿದೆ.
ನ. 23ರಿಂದ ಆರಂಭಗೊಂಡಿರುವ ಪರೀಕ್ಷೆಗಳು ಜ. 3ವರೆಗೆ ನಡೆಯಲಿವೆ.ಆದರೆ ವಿಷಯವಾರು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಡಿ. 7ರವರೆಗೆ ಶಾಮಿಯಾನ ಅವಶ್ಯಕತೆಯಿದೆ. ಆದರೆ ಪರೀಕ್ಷೆ ಸಮಯದಲ್ಲಿ ಮಳೆ ಬಂದರೆ ಹೇಗೆ ನಿಭಾಯಿಸುವುದು ಎನ್ನುವ ಆತಂಕ ಉಪನ್ಯಾಸಕರನ್ನು ಕಾಡುತ್ತಿದೆ.
ಮಳೆ ಬಂದರೆ ಪರೀಕ್ಷೆಗೆ ತೊಂದರೆಯಾಗುವ ದೃಷ್ಟಿಯಿಂದ ಬೇರೆ ಕಾಲೇಜುಗಳಲ್ಲಿ ಕೊಠಡಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಅವರ ಕಾಲೇಜಿನ ತರಗತಿಗಳಿಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ನಮಗೆ ಕೊಠಡಿ ಕೊಟ್ಟಿಲ್ಲ. ಸ್ಥಳೀಯ ಶಾಸಕರಿಗೆ, ಇಲಾಖೆಯ ನಿರ್ದೇಶಕರಿಗೂ ಪತ್ರ ಬರೆದಿದ್ದೇವೆ.ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ ಎಂದು ಪ್ರಾಚಾರ್ಯ ಎನ್.ಎಂ ನಾಗರಾಜ್ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
ಪೆನ್ಡ್ರೈವ್ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್ ಗೌಡ ಮೌನ
H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Interview; ಮುಸ್ಲಿಂ ಲೀಗ್ನ ‘ಬಿ’ ಟೀಂ ಕಾಂಗ್ರೆಸ್: ಸುನಿಲ್ ಕುಮಾರ್
ಪೆನ್ಡ್ರೈವ್ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್ ಗೌಡ ಮೌನ
H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ