22 ಕಲಾವಿದರ ಚಿತ್ರಕಲಾ ಪ್ರದರ್ಶನ 


Team Udayavani, Nov 24, 2018, 11:00 AM IST

10.jpg

ಕಲೆಗೆ ಇರುವ ಶಕ್ತಿ ಅಪಾರ ಮತ್ತು ಅಪರಿಮಿತ. ಸಂಗೀತ, ಸಾಹಿತ್ಯ, ಚಿತ್ರಕಲೆ, ವಾಸ್ತುಶಿಲ್ಪ… ಹೀಗೆ ಪ್ರಕಾರ ಯಾವುದೇ ಆದರೂ, ಪ್ರತಿಯೊಂದಕ್ಕೂ ಮಾನವನ ಅಂತರ್‌ ಶಕ್ತಿಯನ್ನು ಜಾಗೃತಿಗೊಳಿಸುವ ಶಕ್ತಿಯಿದೆ. ಚಿತ್ರಗಳ ಮೂಲಕ ಜಾಗೃತಿ ಮೂಡಿಸುವ, ಸಮಾಜ ಸೇವೆ ಮಾಡುವ ಉದ್ದೇಶದ “ಊರ್ಜಾ’ ಚಿತ್ರಕಲಾ ಪ್ರದರ್ಶನ, ತಾಜ್‌ ವೆಸ್ಟ್‌ ಎಂಡ್‌ ಮತ್ತು ಕಲಾವಿದ ಎಂ. ಜಿ. ದೊಡ್ಡಮನಿ ನೇತೃತ್ವದಲ್ಲಿ ನಡೆಯುತ್ತಿದೆ.

“ಊರ್ಜಾ’ ಎಂದರೆ ಸಂಸ್ಕೃತದಲ್ಲಿ ಶಕ್ತಿ ಎಂದರ್ಥ. ಈ ಪ್ರದರ್ಶನದಲ್ಲಿ ದೇಶದ ವಿವಿಧ ಭಾಗಗಳ 22 ಹಿರಿ, ಕಿರಿಯ ಕಲಾವಿದರ ಶಕ್ತಿ, ಒಂದು ಒಳ್ಳೆಯ ಉದ್ದೇಶಕ್ಕಾಗಿ ಒಗ್ಗೂಡಿದೆ.

ಪ್ರದರ್ಶನದ ಮೂಲಕ ಸಂಗ್ರಹವಾದ ಹಣದ ಒಂದು ಭಾಗ “ಸ್ತ್ರೀ ಜಾಗೃತಿ ಸಮಿತಿ’ಯ ಕೆಲಸ ಕಾರ್ಯಗಳಿಗೆ ಸಂದಾಯವಾಗಲಿದೆ. ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಸ್ತ್ರೀಯರ ಅಭಿವೃದ್ಧಿಗಾಗಿ ಈ ಸಮಿತಿ ಕಾರ್ಯ ನಿರ್ವಹಿಸುತ್ತಿದೆ.

ಖ್ಯಾತ ಕಲಾವಿದ ಎಂ. ಜಿ. ದೊಡ್ಡಮನಿಯವರು, ಈ ಪ್ರದರ್ಶನದ ನೇತೃತ್ವ ವಹಿಸಿದ್ದು, ದೇಶದ ವಿವಿಧ ಭಾಗಗಳ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರನ್ನು ಒಂದೆಡೆ ಸೇರಿಸಿದ್ದಾರೆ. ಹಿರಿಯ ಕಲಾವಿದರಾದ ಎಸ್‌.ಜಿ. ವಾಸುದೇವ, ಕೆ.ಟಿ. ಶಿವಪ್ರಸಾದ್‌, ಸಚಿನ್‌ ಜಲತಾರೆ, ಗುರುದಾಸ್‌ ಶೆನಾಯ್‌, ಬಾಸುಕಿ ದಾಸ್‌, ಜಿ.ಎಂ.ಎಸ್‌ ಮಣಿ ಮತ್ತು ಉದಯೋನ್ಮುಖ ಕಲಾವಿದರಾದ ಆಶು ಗುಪ್ತಾ, ಬಬಿತಾ ಸಕ್ಸೇನಾ, ಜ್ಯೋತಿ ಗುಪ್ತಾ, ಕಾಂತಿ, ನೀಲಂ ಮಲ್ಹೋತ್ರ, ನಿವೇದಿತಾ ಗೌಡ, ರಿತು ಚಾವ್ಲಾ ಮಾಥೂರ್‌, ರೋಶ್‌ ರವೀಂದ್ರನ್‌, ವನಜಾ ಬಾಲ, ವೆಂಕಟರಾಮನ್‌ ಆರ್‌. ಇವರ ಕಲಾಕೃತಿಗಳು ಪ್ರದರ್ಶನದಲ್ಲಿವೆ.

ಎಲ್ಲಿ?: ತಾಜ್‌ ವೆಸ್ಟ್‌ ಎಂಡ್‌, ರೇಸ್‌ ಕೋರ್ಸ್‌ ರಸ್ತೆ,
 ಯಾವಾಗ?: ನ. 24-28, ಬೆಳಗ್ಗೆ 11-8
 ಪ್ರವೇಶ: ಉಚಿತ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.