ಮೂಲಸೌಲಭ್ಯ ಒದಗಿಸಲು ವಿಫ‌ಲ: ಆರೋಪ


Team Udayavani, Nov 24, 2018, 11:06 AM IST

2311ks10ph.jpg

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಿಸುತ್ತಿರುವ ಮೂಲ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಇಲಾಖೆಗಳು ವಿಫಲವಾಗಿವೆ. ಯಾವುದೇ ಯೋಜನೆ ಬಂದರೂ ಅರಣ್ಯ ಇಲಾಖೆ ಅದಕ್ಕೆ ಅಡ್ಡಿಪಡಿಸುತ್ತಿದೆ. ಸಭೆಗಳು ನಡೆದರೂ ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಬೆಳ್ತಂಗಡಿಯಲ್ಲಿ ಶುಕ್ರವಾರ  ಜರಗಿದ ಮಲೆಕುಡಿಯ ಸಮುದಾಯದ ಹಾಗೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಾಸಿಗಳ ಕುಂದುಕೊರತೆ ಸಭೆಯಲ್ಲಿ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್‌ ಮದನ್‌ ಮೋಹನ್‌ ಅವರ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಪರಿಶೀಲನ ಸಭೆ  ಜರಗಿತು.ಯಂತ್ರಗಳನ್ನು ಬಳಸಿ ರಸ್ತೆಗಳನ್ನು ದುರಸ್ತಿ ಮಾಡಲು ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿರುವ ಬಗ್ಗೆ ಜಯಾನಂದ ಪಿಲಿಕಳ ಹಾಗೂ ಪರಮೇಶ್‌  ತಿಳಿಸಿದರು. ಆದರೆ ಯಂತ್ರಗಳ ಬಳಕೆ ಸಾಧ್ಯವಾಗುವುದಿಲ್ಲ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವಲಯಾಧಿಕಾರಿ ಕಿರಣ್‌ ತಿಳಿಸಿದರು. 
ಅರಣ್ಯ ಇಲಾಖೆಯವರೇ ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ಯಂತ್ರಗಳನ್ನು ಬಳಸಿ ಹೊಸ ರಸ್ತೆ ಮಾಡುತ್ತಿದ್ದಾರೆ. ಅವರಿಗೆ ಅವಕಾಶವಿದೆಯಾದರೆ ನಮಗೆ ಯಾಕಿಲ್ಲ ಎಂದು ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ಯಾವುದೇ ಇಲಾಖೆಯಿಂದ ಅನುದಾನ ಮಂಜೂರಾಗಬೇಕಾದರೆ ಅರಣ್ಯ ಇಲಾಖೆಯವರ ಎನ್‌ಒಸಿ ಅಗತ್ಯವಾಗುತ್ತದೆ, ಅದರಿಂದಾಗಿ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ತಿಳಿಸಿದಾಗ,  ಪ್ರತಿ ಕ್ರಿ ಯಿಸಿದ ತಹಶೀಲ್ದಾರ್‌ ಅವರು ತಾಲೂಕಿನಲ್ಲಿ ಈ ರೀತಿಯಾಗಿ ಆಗಬೇಕಾಗಿರುವ ರಸ್ತೆಗಳ ಪಟ್ಟಿಯನ್ನು ತಯಾರಿಸಿ ಅದನ್ನು ಜಿಲ್ಲಾಧಿಕಾರಿಯವರಿಗೆ ನೀಡಿ, ಅವರ ಮೂಲಕವಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ 
ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಇರುವ ಮೂರು ಪ್ರದೇಶಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಇನ್ನೂ ಮಂಜೂರಾತಿ ದೊರೆತಿಲ್ಲ, ಈ ಬಗ್ಗೆ ಮಾಹಿತಿ ಇಲ್ಲವಾಗಿದೆ ಎಂದು ತಿಳಿಸಿದಾಗ ಈ ಅರ್ಜಿಗಳು ಪರಿಶೀಲನೆಯ ಹಂತದಲ್ಲಿದ್ದು ಅನುಮೋದನೆ ದೊರೆಕಲಿದೆ ಎಂದು ಮೆಸ್ಕಾಂ ಎಂಜಿನಿಯರ್‌ ಶಿವಶಂಕರ್‌ ತಿಳಿಸಿದರು.

ನೆರಿಯ ಗ್ರಾಮದ ಅಂಬಟೆಮಲೆಯಲ್ಲಿ 33 ಕುಟುಂಬಗಳಿಗೆ 1985- 86ರಲ್ಲಿ ಜಮೀನು ಮಂಜೂರಾಗಿದ್ದು ಜಾಗದ ಹಕ್ಕುಪತ್ರಗಳು ಸಿಕ್ಕಿವೆ. ಆದರೆ ಸೂಕ್ತ ರಸ್ತೆ ಸಂಪರ್ಕ ಇಲ್ಲದ ಕಾರಣ ಕೃಷಿ ಮಾಡಲು ಸಾಧ್ಯವಾಗಿಲ್ಲ ಎಂದು ಲಕ್ಷ್ಮಣ ಮಲೆಕುಡಿಯ ಹೇಳಿದರು. 

ಇದಕ್ಕೆ ಉತ್ತರಿಸಿದ ತಹಶೀಲ್ದಾರ್‌ ರಸ್ತೆ ವ್ಯವಸ್ಥೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ಹಾಗೂ ಅರಣ್ಯಕ್ಕೆ ತಾಗಿಕೊಂಡಿರುವ ಇತರೆಡೆಗಳಲ್ಲಿ ಜಮೀನಿನ ಬಗ್ಗೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಡುವೆ ಗೊಂದಲವಿದ್ದು ಇದರಿಂದಾಗಿ ಮೂಲನಿವಾಸಿಗಳಿಗೆ ಜಮೀನು ಮಂಜೂರಾಗುತ್ತಿಲ್ಲ ಎಂದು ತಾ. ಪಂ. ಸದಸ್ಯ ಜಯರಾಮ ಹಾಗೂ ಇತರರು ತಿಳಿಸಿದರು. ಇಂತಹ ಸಂದರ್ಭದಲ್ಲಿ ಜಂಟಿ ಸರ್ವೆ ನಡೆಸಿದರೆ ಮಾತ್ರ ಗೊಂದಲ ನಿವಾರಣೆ ಆಗಲಿದೆ ಎಂದು ತಹಶೀಲ್ದಾರ್‌ ತಿಳಿಸಿದರು. 

ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ಅಧಿಕಾರಿಗಳು ಮೂಲನಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಿಗೆ ತೆರಳಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು ಕಾರ್ಯ ನಿರ್ವಹಿಸಬೇಕು. ಎಲ್ಲ ಗ್ರಾಮ ಪಂಚಾಯತುಗಳಿಗೂ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು ಎಂಧು ಅಧಿಕಾರಿಗಳಿಗೆ ತಹಶೀಲ್ದಾರ್‌ ಸೂಚಿಸಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಚ್‌. ಎಂ. ಪಾಟೀಲ್‌,  ಐಟಿಡಿಪಿ ವಿಸ್ತರಣಾಧಿಕಾರಿ ಹೇಮಲತಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. 

ಬದಲಿ ರಸ್ತೆಗೆ ತಡೆಯಾಜ್ಞೆ ಸಾಧ್ಯತೆ
ಮಲೆಕುಡಿಯ ಸಮುದಾಯದ ಮೂಲಭೂತ ಸೌಲಭ್ಯಗಳಿಗೆಂದು ಬಿಡುಗಡೆಯಾಗುವ ಹಣ ಯಾವದೇ ಕಾರಣಕ್ಕೂ ಇತರೆಡೆಗೆ ವರ್ಗಾವಣೆಯಾಗಬಾರದು ಈ ಬಗ್ಗೆ ನಿಗಾ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು. ನೆರಿಯ ಗ್ರಾಮದ ಬಾಂಜಾರುಮಲೆಗೆ ಸಂಪರ್ಕ ಕಲ್ಪಿಸುವ ಬದಲಿ ರಸ್ತೆಗೆ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದರು ಆದರೆ ಈಗ ಸರ್ವೆ ನಡೆಸುವುದಕ್ಕೆ ಸ್ಥಳೀಯ ಭೂಮಾಲಕ ಗೋಪಾಲ ಗೌಡ  ಅವರು ವಿರೋಧ ವ್ಯಕ್ತಪಡಿಸಿ ತಡೆಯಾಜ್ಞೆ ತರುವ ಕಾರ್ಯ ಮಾಡಿದ್ದಾರೆ ಎಂದು ಸಭೆಗೆ ತಿಳಿಸಲಾಯಿತು. ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಯವರನ್ನು ಸಂಪರ್ಕಿಸಿ ಅಗತ್ಯಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್‌ ತಿಳಿಸಿದರು

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Bantwal: ಬಾವಿಗೆ ಬಿದ್ದ ಮಗು; ರಕ್ಷಿಸಿದ ಯುವಕ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.