ಮೈದುಂಬಿ ನಳನಳಿಸುತ್ತಿದೆ ವಿಜಯಪುರ ಸೈನಿಕ್‌ ಸ್ಕೂಲ್‌ ಕೆರೆ


Team Udayavani, Nov 24, 2018, 12:04 PM IST

1.jpg

ವಿಜಯಪುರ: ಕೆರೆ ತುಂಬಿಸುವ ಯೋಜನೆ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿರುವ ವಿಜಯಪುರ ಜಿಲ್ಲೆ ಇದೀಗ ರಕ್ಷಣಾ ಇಲಾಖೆ ವ್ಯಾಪ್ತಿಯ ನಗರದ ಸೈನಿಕ್‌ ಸ್ಕೂಲ್‌ನಲ್ಲಿ ನೂತನವಾಗಿ ಕೆರೆಯನ್ನು ನಿರ್ಮಿಸಿದ್ದು ಆ ಕೆರೆಗೆ ಕೃಷ್ಣಾ ನದಿ ನೀರು ತುಂಬಿಸುತ್ತಿರುವ ಮೂಲಕ ಮತ್ತೂಮ್ಮೆ ನಾಡಿನ ಗಮನ ಸೆಳೆದಿದೆ.

ವಿಜಯಪುರದಲ್ಲಿ 1963ರಲ್ಲಿ ಅಥಣಿ ರಸ್ತೆಯಲ್ಲಿ 406 ಎಕರೆ ವಿಸ್ತೀರ್ಣದ ಸೈನಿಕ್‌ ಶಾಲೆ ಆವರಣ ಮಡ್ಡಿ ಭೂಮಿಯ ಒಣಪ್ರದೇಶ. ಇಲ್ಲಿ ನೀರಿನ ಸೌಲಭ್ಯ ಕಡಿಮೆ. ಹೀಗಾಗಿ ಸೇವೆ ಸಲ್ಲಿಸಿರುವ ಎಲ್ಲ ಪ್ರಾಚಾರ್ಯರು ಸೈನಿಕ್‌ ಸ್ಕೂಲ್‌ ಪ್ರದೇಶವನ್ನು ಹಸರೀಕರಣ ಮಾಡಲು ಅಪಾರ ಶ್ರಮ ವಹಿಸಿ 15 ಸಾವಿರ ಗಿಡಗಳನ್ನು ಇಲ್ಲಿ ಪೋಷಿಸಿಕೊಂಡು ಬರಲಾಗಿದೆ.
 
ಪ್ರಾಚಾರ್ಯ ತಮೊಜಿತ ಬಿಸ್ಪಾಸ್‌ ಕೊರಿಕೆ ಮೇರೆಗೆ 2016ರಲ್ಲಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲರು ಇಲ್ಲಿನ ಹೂಳು ತುಂಬಿ ಮುಚ್ಚಿ ಹೋಗಿದ್ದ ಆದಿಲ್‌ಶಾಹಿ ಕಾಲದ 6 ಬಾವಡಿಗಳನ್ನು ಪುನರುಜ್ಜೀವನಗೊಳಿಸಿದ್ದು, ಈಗ ಈ ಬಾವಿಗಳು ಮರಭೂಮಿಯಲ್ಲಿ ಓಯಾಸಿಸ್‌ ಎಂಬಂತೆ ಸೈನಿಕ್‌ ಸ್ಕೂಲ್‌ನ ಮಡ್ಡಿ ಪ್ರದೇಶದಲ್ಲಿ ಜೀವ ಸೆಲೆಯಾಗಿದೆ. ಅದರಿಂದ ಪ್ರೇರಣೆಗೊಂಡ ಸಿಬ್ಬಂದಿ ಟಕ್ಕೆ ಪ್ರದೇಶಕ್ಕೆ ಹೊಂದಿಕೊಂಡ ತಮ್ಮ ಆವರಣದಲ್ಲಿ ಸಣ್ಣ ಕೆರೆ ನಿರ್ಮಿಸಲು ನಿವೇಶನ ಸೂಕ್ತವಾಗಿದ್ದು, ತಾವೇ ಮುತುವರ್ಜಿ ವಹಿಸಿ, ಅನುದಾನ ನೀಡಿ ಕೆರೆ ನಿರ್ಮಿಸಬೇಕು ಎಂದರು.
 
ಅವರ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಅಂದಿನ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಹಾನಗರ ಪಾಲಿಕೆಯಿಂದ 30 ಲಕ್ಷ ರೂ. ಅನುದಾನ ಒದಗಿಸಿ 2 ಎಕರೆ ಪ್ರದೇಶದಲ್ಲಿ ಕೆರೆ ನಿರ್ಮಿಸಿದ್ದಲ್ಲದೆ, ತಾವಾಗಿಯೇ ಒಂದು ಹೆಜ್ಜೆ ಮುಂದೆ ಹೋಗಿ ಸೈನಿಕ್‌ ಸ್ಕೂಲ್‌ ಬದಿಯ ರಿಂಗ್‌ರೋಡ್‌ಗೆ ಹೊಂದಿಕೊಂಡಂತೆ ಐತಿಹಾಸಿಕ ಬೇಗಂ ತಲಾಬ್‌, ಭೂತನಾಳ ಕೆರೆಗಳನ್ನು ಕೃಷ್ಣಾ ನದಿಯಿಂದ ತುಂಬಿಸುವ ಪೈಪ್‌ಲೈನ್‌ನಿಂದ ಸೈನಿಕ್‌ ಸ್ಕೂಲ್‌ ನೂತನ ಕೆರೆಗೂ ಜೋಡಣೆ ಮಾಡಿದರ ಪರಿಣಾಮ ಇಂದಿನಿಂದ ಇಲ್ಲಿನ ಕೆರೆ ತುಂಬುತ್ತಿದೆ. 

ಸೈನಿಕ್‌ ಸ್ಕೂಲ್‌ ಪ್ರದೇಶ ರಕ್ಷಣಾ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಇದು ಸಂರಕ್ಷಿತ ಪ್ರದೇಶವಾಗಿದೆ. ಇಲ್ಲಿ ಪಾದಚಾರಿಗಳ, ವಾಹನಗಳ ಹಾವಳಿ ಇಲ್ಲದೆ ಇರುವುದರಿಂದ ಇಲ್ಲಿ ಹೇರಳವಾಗಿ ನವಿಲು, ಕೊಕ್ಕರೆ, ಪಕ್ಷಿ ಸಂಕುಲಗಳ ಸಂಖ್ಯೆ ಹೆಚ್ಚು. ಈ ಕೆರೆ ತುಂಬುವುದರಿಂದ ಕೇವಲ ಸೈನಿಕ್‌ ಸ್ಕೂಲ್‌ ಆವರಣವಲ್ಲದೇ ಸುತ್ತಿಲಿನ ಖಾಜಾಅಮೀನ್‌ ದರ್ಗಾ, ಟಕ್ಕೆ, ಟ್ರೇಜರಿ ಕಾಲೋನಿಗಳಲ್ಲಿ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗುವದು. ಸ್ಕೂಲ್‌ ವ್ಯಾಪ್ತಿಯಲ್ಲಿರುವ 50 ಎಕರೆ ಪ್ರದೇಶದಲ್ಲಿರುವ ತೋಟಕ್ಕೆ ವಿಫುಲವಾಗಿ ನೀರು ದೊರೆಯುವುದಲ್ಲದೆ, ಇಡಿ ಪ್ರದೇಶ ಹಸಿರಿನಿಂದ ಕಂಗೊಳಿಸಲು ಸಹಕಾರಿಯಾಗಲಿದೆ ಎಂದು ಆಡಳಿತಾಧಿಕಾರಿ ಮುರಳಿಧರನ್‌ ತಿಳಿಸಿದ್ದಾರೆ.

ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಮಾಜಿ ಜಲ ಸಂಪನ್ಮೂಲ ಸಚಿವ, ಶಾಸಕ ಎಂ.ಬಿ. ಪಾಟೀಲ ಸೈನಿಕ್‌ ಸ್ಕೂಲ್‌ ಅಧಿಕಾರಿಗಳ ಕೋರಿಕೆ ಮೇರೆಗೆ ಈ ಹಿಂದೆ ಆದಿಲ್‌ಶಾಹಿ ಕಾಲದ ಇಲ್ಲಿನ 6 ಬಾವಡಿಗಳನ್ನು ಹೂಳು ತೆಗೆದು, ಸುತ್ತಲೂ ಫಿನಿಶಿಂಗ್‌ ಅಳವಡಿಸಲಾಗಿತ್ತು.

ನಂತರ ನಾನೇ ಮಹಾನಗರ ಪಾಲಿಕೆ ಅನುದಾನ ಒದಗಿಸಿ, ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದ್ದೆ. ಅಲ್ಲದೆ ಆ ಕೆರೆಗೆ ಭೂತನಾಳ ಕೆರೆ ತುಂಬಿಸುವ ಪೈಪ್‌ಲೈನ್‌ಗೆ ಜೊಡಣೆ ಮಾಡಿ ತುಂಬಲು ಯೋಜನೆ ಮಾಡಿದ್ದು, ಇಂದು ಕಾರ್ಯರೂಪಕ್ಕೆ ಬಂದಿದೆ. ಇದರಿಂದ ಸೈನಿಕ್‌ ಸ್ಕೂಲ್‌ ಆವರಣ ವಿಶೇಷ ಕಳೆ ಹೊಂದಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.