ಸಾಣೇಹಳ್ಳಿ ಶ್ರೀ ಮಠ ಬಿಡ್ತಾರಾ?: ರಘು


Team Udayavani, Nov 24, 2018, 5:05 PM IST

shiv-3.jpg

ಚಿತ್ರದುರ್ಗ: ಉಪ ಮುಖ್ಯಮಂತ್ರಿ ಡಾ|ಜಿ. ಪರಮೇಶ್ವರ್‌ ಸಾಣೇಹಳ್ಳಿ ಮಠದ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ವೇಳೆ ಭದ್ರತಾ ಸಿಬ್ಬಂದಿ ಊಟದ ಪರೀಕ್ಷೆ ನಡೆಸಿರುವ ಬಗ್ಗೆ ಉಂಟಾದ ವಾದ ವಿವಾದ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಈ ಬಗ್ಗೆ ಮಾತನಾಡಿದ್ದ ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಮತ್ತೂಮ್ಮೆ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಗೇ ಸವಾಲು ಹಾಕಿದ್ದಾರೆ.

ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಘು ಆಚಾರ್‌, “ನಾನು ವಿಧಾನ ಪರಿಷತ್‌ ಸ್ಥಾನಕ್ಕೆ ಈಗಲೇ ರಾಜೀನಾಮೆ ಸಲ್ಲಿಸಿ ರಾಜಕೀಯ ನಿವೃತ್ತಿ ಹೊಂದಿ ಈಚೆಗೆ ಬರುತ್ತೇನೆ. ಪಂಡಿತಾರಾಧ್ಯರು ಮಠ ಬಿಟ್ಟು ಬರುತ್ತಾರಾ’ ಎಂದು ಪ್ರಶ್ನಿಸಿದರು.

ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ನನ್ನನ್ನು ಮೂಲಭೂತವಾದಿ ಎಂದು ಕರೆದಿದ್ದಾರೆ. ನನಗೆ ಮೂಲಭೂತವಾದಿ, ಸಮಾಜವಾದಿ ಎಂದರೆ ಗೊತ್ತಿಲ್ಲ. ನಾನು 10ನೇ ತರಗತಿ ಓದಿದ್ದೇನೆ. ನನಗೆ ಅವು ಅರ್ಥ ವಾಗುವುದಿಲ್ಲ. ನನಗೆ ಅರ್ಥವಾಗಿರುವುದು ಎರಡೇ, ಒಂದು ಒಳ್ಳೆಯದು, ಇನ್ನೊಂದು ಕೆಟ್ಟದ್ದು ಎಂದರು.
 
ನಾನು ಯಾವುದೇ ಜಾತಿಯನ್ನು ನಂಬಲ್ಲ. ಡಿಸಿಎಂ ಅವರಿಗೆ ಸ್ವಾಮೀಜಿಗಳು ಅವಮಾನ ಮಾಡಿದ್ದು ಸರಿನಾ? ಶಿಷ್ಟಾಚಾರ ಬೇಡ ಎಂದರೆ ಜನಪ್ರತಿನಿಧಿಗಳನ್ನು ಯಾಕೆ ಆಹ್ವಾನಿಸಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ. ನಾನೇಕೆ ಹೆದರಬೇಕು. ನಾನು ಸ್ವಾಭಿಮಾನ ಇಟ್ಟುಕೊಂಡು ಬಂದಿದ್ದೇನೆ.

ಸ್ವಾಮೀಜಿ ಎಂದರೆ ಎಲ್ಲ ಜಾತಿಗೂ, ಭಕ್ತರಿಗೂ ಸ್ವಾಮೀಜಿ ತಾನೇ. ನಾನು ಯಾವುದೇ ಸ್ವಾರ್ಥ ಇಟ್ಟುಕೊಂಡಿಲ್ಲ. ಸ್ವಾಮೀಜಿಗಳು ಎಲೆಕ್ಷನ್‌ ಮಾಡುತ್ತಾರಾ ಮಾಡಲಿ, ನಾನೂ ಎಲೆಕ್ಷನ್‌ ಮಾಡುತ್ತೇನೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿಷ್ಟಾಚಾರ ಇದೆ. ಶಿಷ್ಟಾಚಾರ ಗೊತ್ತಿಲ್ಲದಿದ್ದರೆ ರಾಜಕಾರಣಿಗಳನ್ನು ಮಠಕ್ಕೆ ಕರೆಯಬೇಡಿ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಯೋಚಿಸಬೇಕು. ನಾನು 11 ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಎಂಎಲ್‌ಸಿ. ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದವನು. ನಾನು ತಪ್ಪು ಮಾಡಿದ್ದರೆ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ.
ನೀವು ಮಠ ಬಿಟ್ಟು ಹೊರಬರುತ್ತೀರಾ ಎಂದು ಸಾಣೇಹಳ್ಳಿ ಶ್ರೀಗಳಿಗೆ ಸವಾಲು ಹಾಕಿದರು.

ನೀವು ಚುನಾವಣೆಯಲ್ಲಿ ನನ್ನ ಸೋಲಿಸಲು ಮುಂದೆ ಬಂದರೆ ನಾನು ಮತ್ತೆ ಸ್ಪರ್ಧಿಸಿ ಗೆದ್ದು ತೋರಿಸುತ್ತೇನೆ. ಸ್ವಾಮೀಜಿಗಳು, ಎಂಎಲ್‌ಎಗಳು ಮೇಲಿಂದ ಬಂದಿರೋದಿಲ್ಲ. ಎಲ್ಲರೂ ಸಮಾನರು ಅಂತಾದರೆ ಸ್ವಾಮೀಜಿಗಳು ಕಾಲಿಗೆ ಯಾಕೆ ಬೀಳಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು. ಇಂದು ಮಠ, ಮಾನ್ಯಗಳು ಇಲ್ಲದಿದ್ದರೆ ರಾಜ್ಯದ ಜನ ಇಷ್ಟು ನೆಮ್ಮದಿಯಿಂದ ಬದುಕುತ್ತಿರಲಿಲ್ಲ.

ನಾನೂ ಕೂಡಾ ಸಾಣೇಹಳ್ಳಿ ಶ್ರೀಗಳ ಭಕ್ತ. ಚಿತ್ರದುರ್ಗ ಎಲ್ಲ ಸಮುದಾಯದ ಸ್ವಾಮೀಜಿಗಳಿರುವ ಜಿಲ್ಲೆ. ಇಲ್ಲಿರುವ ಸ್ವಾಮೀಜಿಗಳೆಲ್ಲ ಒಳ್ಳೆಯವರು. ಹೀಗಾಗಿ ಜನ ನೆಮ್ಮದಿಯಿಂದ ಇದ್ದೇವೆ. ಯಾರ ಬಗ್ಗೆಯೂ ಈ ರೀತಿ ಮಾತನಾಡಬೇಡಿ ಎಂದು ಸ್ವಾಮೀಜಿಗಳಿಗೆ ನಾನು ವಿನಮ್ರ ಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಹೇಳಿದರು. 

ಫೋನ್‌ ಕದ್ದಾಲಿಕೆ ಗೊತ್ತಿಲ್ಲ
ಟೆಲಿಪೋನ್‌ ಕದ್ದಾಲಿಕೆ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ಅಶೋಕ್‌ ಅವರನ್ನೇ ಕೇಳಬೇಕು. ಕದ್ದಾಲಿಕೆ ಯಾವ ರೀತಿ ಆಗುತ್ತೆ ಅನ್ನೋದು ನನಗೇನು ಗೊತ್ತಾಗುತ್ತೆ. ಟೆಕ್ನಾಲಜಿ ಚೆನ್ನಾಗಿದೆ. ಹೈದರಾಬಾದ್‌ಗೆ ನಾನೇ ಶಾಸಕರನ್ನು ಕರೆದುಕೊಂಡು ಹೋಗಿದ್ದೆ. ಒಬ್ಬ ಗ್ರಾಮ ಪಂಚಾಯತಿ ಸದಸ್ಯರನ್ನು ಹಿಡಿದಿಟ್ಟು ಕೊಳ್ಳಲು ಆಗುವುದಿಲ್ಲ. ಇನ್ನೂ ಶಾಸಕರು ಹೋಗುತ್ತೇನೆ ಎಂದು ಡಿಸೈಡ್‌ ಮಾಡಿದರೆ ಹಿಡಿದಿಟ್ಟುಕೊಳ್ಳಲು ಆಗುತ್ತಾ. ಅವೆಲ್ಲಾ ಆಗುವ ಪ್ರಶ್ನೆಯೇ ಅಲ್ಲ. ಎಂಎಲ್‌ಎಗಳು ಯಾರ ಮಾತು ಕೇಳ್ತಾರೆ. ಇದೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಗುವುದಿಲ್ಲ. ನಮ್ಮ ಪಕ್ಷದ ಶಾಸಕರು ನಮ್ಮ ಜತೆಗೆ ಇದ್ದಾರೆ. ಸರ್ಕಾರ ಸುಭದ್ರವಾಗಿದೆ ಎಂದರು.

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.